ಬೆಂಗಳೂರು: ಬೆಂಗಳೂರಿನಲ್ಲಿ ಕಟ್ಟಡಗಳ ಬಳಿ ಹೆಚ್ಚು ಡೆಸಿಬಲ್ ಸಾಮರ್ಥ್ಯದ ಪಟಾಕಿ ಸಿಡಿಸದಂತೆ ಎಚ್ಚರಿಕೆ ನೀಡಿದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆದೇಶ ಹೊರಡಿಸಿದೆ. ಇದು ಬೆಂಗಳೂರಿಗರಿಗೆ ಒಂದು ಶಾಕಿಂಗ್ ನ್ಯೂಸ್ ಆಗಿದೆ.


COMMERCIAL BREAK
SCROLL TO CONTINUE READING

ನಿರಂತರ ಮಳೆಯಿಂದಾಗಿ ಕಟ್ಟಡಗಳು ಶಿಥಿಲಗೊಂಡಿರುವುದರಿಂದ  ಡೆಸಿಬಲ್ ಸಾಮರ್ಥ್ಯದ ಸಿಡಿಸಿದರೆ ಅನಾಹುತ ಸಂಭವಿಸುವ ಆತಂಕವಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ. 


ಕೆಲವು ಕಟ್ಟಡಗಳು ಬಿರುಕು ಬಿಟ್ಟಿದ್ದು, ಅಪಾಯ ಸಂಭವಿಸುವ ಶಂಕೆ ಇರುವುದರಿಂದ ಈ ರೀತಿಯ ಆದೇಶ ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ.