ಬೆಂಗಳೂರು: ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದ ನಿಮಿತ್ತ ಬೆಂಗಳೂರಿನ ಬಿಜಿಎಸ್‌ ಗ್ಲೋಬಲ್‌ ಆಸ್ಪತ್ರೆಗೆ ದಾಖಲಾಗಿದ್ದ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಹಿನ್ನೆಲೆಯಲ್ಲಿ ಅವರನ್ನು ಡಿಸ್ಚಾರ್ಜ್‌ ಮಾಡಲಾಗಿದ್ದು, ಆಸ್ಪತ್ರೆಯಿಂದ ನೇರವಾಗಿ ಸಿದ್ಧಗಂಗಾ ಮಠಕ್ಕೆ ಶ್ರೀಗಳು ತೆರಳಿದರು.


ಶ್ರೀಗಳಿಗೆ ಅಲ್ಟ್ರಾ ಸೌಂಡ್, ಸಿಟಿ ಸ್ಕ್ಯಾನ್ ಮಾಡಲಾಗಿದ್ದು, ಪಿತ್ತನಾಳ ಬ್ಲಾಕ್ ತೆರವಾಗಿದೆ. ಇನ್ನೂ ಮೂರ್ನಾಲ್ಕು ದಿನ ಆಸ್ಪತ್ರೆಯಲ್ಲೇ ಇರಬೇಕೆಂದು ವೈದ್ಯರು ಸಲಹೆ ನೀಡಿದ್ದರು. ಆದರೆ, ಶ್ರೀಗಳು ಮಠಕ್ಕೆ ಹೋಗಬೇಕು ಎಂದು ಬಯಸಿದ್ದರಿಂದ ಅವರನ್ನು ಮಠಕ್ಕೆ ಕಳುಹಿಸಿಕೊಡಲು ಒಪ್ಪಿಗೆ ನೀಡಲಾಗಿದ್ದು, ಮಠದಲ್ಲೇ ಚಿಕಿತ್ಸೆ ಮುಂದುವರಿಸುತ್ತೇವೆ ಎಂದು ಬಿಜಿಎಸ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ಹೇಳಿದ್ದಾರೆ. 


ಇನ್ನು ಸ್ವಾಮೀಜಿಯವರ ಆಗಮನಕ್ಕಾಗಿ ಕಾದಿದ್ದ ಭಕ್ತಾದಿಗಳು ಸ್ವಾಮೀಜಿಗಳನ್ನು ಕಂಡು ಹರ್ಷೋದ್ಗಾರ ವ್ಯಕ್ತಪಡಿಸಿದರು.