ಸಿದ್ದರಾಮಯ್ಯ ಲಿಂಗಾಯತ ಸಮಾಜ ಒಡೆಯುವ ಪ್ರಯತ್ನ ಮಾಡಿದ್ದಾರೆ-ಶೋಭಾ ಕರಂದ್ಲಾಜೆ

    

Last Updated : Mar 19, 2018, 07:42 PM IST
ಸಿದ್ದರಾಮಯ್ಯ ಲಿಂಗಾಯತ ಸಮಾಜ ಒಡೆಯುವ ಪ್ರಯತ್ನ ಮಾಡಿದ್ದಾರೆ-ಶೋಭಾ ಕರಂದ್ಲಾಜೆ title=

ನವದೆಹಲಿ: ಸಿದ್ದರಾಮಯ್ಯ ಲಿಂಗಾಯತ ಸಮಾಜ ಒಡೆಯುವ ಪ್ರಯತ್ನ ಮಾಡಿದ್ದಾರೆ ಎಂದು ಬಿಜೆಪಿಯ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.

 ಇಂದು ದೆಹಲಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರವಾಗಿ ರಾಜ್ಯ ಸಚಿವ ಸಂಪುಟವು  ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿಯ ಶೋಭಾ ಕರಂದ್ಲಾಜೆ "ಸಿಎಂ‌ ಸಿದ್ದರಾಮಯ್ಯ ಮತದ ಆಸೆಗಾಗಿ ಲಿಂಗಾಯತ ಸಮಾಜ ಒಡೆಯುವ ಪ್ರಯತ್ನ ಮಾಡಿದ್ದಾರೆ. ಆ ಮೂಲಕ ಹಿಂದೂ ಧರ್ಮದಿಂದ ಲಿಂಗಾಯತ/ವೀರಶೈವರನ್ನು ದೂರ ಇಡಲು ಪ್ರಯತ್ನಿಸುತ್ತಿದ್ದಾರೆ.ಆದ್ದರಿಂದ ರಾಜ್ಯದ ಜನತೆಯ ಕ್ಷಮೆ ಕೇಳಬೇಕು" ಎಂದು ಅವರು ಆಗ್ರಹಿಸಿದರು.

ಇನ್ನು ಮುಂದುವರೆದು ಮಾತನಾಡಿದ ಅವರು  ಸಿದ್ದರಾಮಯ್ಯ ಅವರದು ತಲೆ ತಿರುಕ ಸರ್ಕಾರ, ಲಿಂಗಾಯತರು/ವೀರಶೈವರ ಬಗ್ಗೆ ಅಧ್ಯಯನ ಮಾಡದೆ ಸಮಿತಿಯು ಸರ್ಕಾರಕ್ಕೆ ವರದಿ ಕೊಟ್ಟಿದೆ. ಈ ಸಮಿತಿ ಕೊಟ್ಟ ವರದಿ ಆಧರಿಸಿ ಸಿದ್ದರಾಮಯ್ಯ ಶಿಫಾರಸು ಮಾಡಿದ್ದಾರೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.  

Trending News