Hijab Row: ಹಿಜಾಬ್ ಪರ ಸಿದ್ದರಾಮಯ್ಯ ಬ್ಯಾಟಿಂಗ್, ಬಿಜೆಪಿ ಮತ್ತು RSS ವಿರುದ್ಧ ಆಕ್ರೋಶ

ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಯಾವ ಕಾನೂನು ಕೂಡ ಇಲ್ಲ. ಹೀಗಿರುವಾಗ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.   

Written by - Zee Kannada News Desk | Last Updated : Feb 5, 2022, 06:37 AM IST
  • ಬಿಜೆಪಿ & ಸಂಘ ಪರಿವಾರ ಬಹಳ ವ್ಯವಸ್ಥಿತವಾಗಿ ಹಿಜಾಬ್ ವಿವಾದವನ್ನು ರಾಜ್ಯದಾದ್ಯಂತ ಪಸರಿಸುವ ಪ್ರಯತ್ನ ನಡೆಸುತ್ತಿವೆ
  • ಸಿಎಂ ಬೊಮ್ಮಾಯಿ ತಕ್ಷಣ ಮಧ್ಯೆಪ್ರವೇಶಿಸಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವ ಇಂತಹ ಕೃತ್ಯಗಳನ್ನು ತಡೆಯಬೇಕು
  • ಹಿಜಾಬ್ ವಿವಾದ ವಿಚಾರವಾಗಿ ಬಿಜೆಪಿ ಮತ್ತು ಸಂಘ ಪರಿವಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ
Hijab Row: ಹಿಜಾಬ್ ಪರ ಸಿದ್ದರಾಮಯ್ಯ ಬ್ಯಾಟಿಂಗ್, ಬಿಜೆಪಿ ಮತ್ತು RSS ವಿರುದ್ಧ ಆಕ್ರೋಶ title=
ಬಿಜೆಪಿ ಮತ್ತು RSS ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು: ಉಡುಪಿ (Udupi) ಜಿಲ್ಲೆಯ ಕಾಲೇಜುಗಳಲ್ಲಿ ಹಿಜಾಬ್ (Hijab) ವಿವಾದ ತಾರಕಕ್ಕೇರಿದ್ದು, ಇದು ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗುತ್ತಿದೆ. ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)ನವರು ಬಿಜೆಪಿ(BJP) ಮತ್ತು RSS ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ’ ಅಂತಾ ಹೇಳುವ ಮೂಲಕ ಹಿಜಾಬ್ ಪರ ಬ್ಯಾಟಿಂಗ್ ಮಾಡಿದ್ದಾರೆ. ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಯಾವ ಕಾನೂನು ಕೂಡಾ ಇಲ್ಲ. ಹೀಗಿರುವಾಗ ಹಿಜಾಬ್ ಧರಿಸಿ(Hijab Row) ಬಂದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ’ ಅಂತಾ ಹೇಳಿದ್ದಾರೆ.   

ಇದನ್ನೂ ಓದಿ: "ಸರ್ಕಾರಿ ಆಸ್ಪತ್ರೆಗಳಲ್ಲಿ ಕನಿಷ್ಠ ದರದಲ್ಲಿ ಗುಣಮಟ್ಟದ ಔಷಧ ದೊರಕಬೇಕು"

‘ಕುಂದಾಪುರದ ಸರ್ಕಾರಿ ಕಾಲೇಜೊಂದರ ಪ್ರಾಂಶುಪಾಲರು ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿಗಳಿಗೆ(Muslim Girls) ಕಾಲೇಜು ಗೇಟ್ ಹಾಕಿ ಪ್ರವೇಶ ನಿರಾಕರಿಸಿರುವುದು ಅಮಾನವೀಯ ಮಾತ್ರವಲ್ಲ ಸಂವಿಧಾನ ಬಾಹಿರವೂ ಹೌದು. ಕೂಡಲೇ ಕಾಲೇಜಿನ ಪ್ರಾಂಶುಪಾಲರನ್ನು ವಜಾಗೊಳಿಸಬೇಕು’ ಅಂತಾ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ಮುಸ್ಲಿಂ ವಿದ್ಯಾರ್ಥಿನಿಯರ ಶೈಕ್ಷಣಿಕ ಸ್ವಾತಂತ್ರ್ಯವನ್ನು ಕಿತ್ತುಕೊಂಡು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದೇ ಸಂಘ ಪರಿವಾರದ ನಿಜವಾದ ಅಜೆಂಡಾ, ಹಿಜಾಬ್ ಒಂದು ನೆಪ ಅಷ್ಟೆ. ‘ಬೇಟಿ ಬಚಾವೋ, ಬೇಟಿ ಪಡಾವೋ’ ಎಂದು ಆಗಾಗ ಘೋಷಣೆ ಕೂಗುವ ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಗಮನಕ್ಕೆ ಈ ವಿವಾದ ಬಂದಿಲ್ಲವೇ?’ ಅಂತಾ ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಒಂದು ವೇಳೆ ನೀವು ಮಾವು ಬೆಳೆಗಾರರಾಗಿದ್ದಲ್ಲಿ ಈ ಸಲಹೆಯನ್ನು ನೀವು ಪಾಲಿಸಲೇಬೇಕು..!

‘ಬಿಜೆಪಿ ಮತ್ತು ಸಂಘ ಪರಿವಾರ ಬಹಳ ವ್ಯವಸ್ಥಿತವಾಗಿ ಹಿಜಾಬ್ ವಿವಾದವನ್ನು ರಾಜ್ಯದಾದ್ಯಂತ ಪಸರಿಸುವ ಪ್ರಯತ್ನ ನಡೆಸುತ್ತಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಅವರು ತಕ್ಷಣ ಮಧ್ಯೆ ಪ್ರವೇಶಿಸಿ ಕೋಮು ಸಂಘರ್ಷಕ್ಕೆ ಪ್ರಚೋದನೆ ನೀಡುವ ಇಂತಹ ಕೃತ್ಯಗಳನ್ನು ತಡೆಯಬೇಕು’ ಎಂದು ವಿಪಕ್ಷ ನಾಯಕ ಒತ್ತಾಯಿಸಿದ್ದಾರೆ.   

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News