ಬೆಂಗಳೂರು: ಕೋವಿಡ್ -19 ಸೋಂಕಿಗೆ ಒಳಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಗುಣಮುಖರಾಗಿದ್ದಾರೆ.ಎರಡನೇ ಪರೀಕ್ಷೆಯ ವರದಿಗಳು ನೆಗಟಿವ್ ಬಂದ ನಂತರ ಅವರನ್ನು ಬಿಡುಗಡೆ ಮಾಡಲಾಗಿದೆ.
ಇದನ್ನು ಓದಿ: ಆಸ್ಪತ್ರೆಯಲ್ಲಿದ್ದರೂ ಹೋರಾಟ ಬಿಡದ ಸಿದ್ದರಾಮಯ್ಯ, ಪ್ರವಾಹ ಪರಿಸ್ಥಿತಿ ನಿರ್ವಹಿಸದ ರಾಜ್ಯ ಸರ್ಕಾರಕ್ಕೆ ತರಾಟೆ
ಸಿದ್ದರಾಮಯ್ಯ ಅವರನ್ನು ಆಗಸ್ಟ್ 3 ರಂದು ಆಸ್ಪತ್ರೆಗೆ ದಾಖಲಿಸಲಾಯಿತು ಮತ್ತು ತರುವಾಯ ಅವರು ಕರೋನವೈರಸ್ ಪರೀಕ್ಷೆ ನಡೆಸಿದರು. ಅವರ ವೈದ್ಯರ ಸಲಹೆಯ ಮೇರೆಗೆ ಅವರು ಇನ್ನೂ ಒಂದು ವಾರ ಮನೆಯಲ್ಲಿ ಕ್ಯಾರೆಂಟೈನ್ ನಲ್ಲಿರುತ್ತಾರೆ ಎನ್ನಲಾಗಿದೆ.ಕಳೆದ ಹತ್ತು ದಿನಗಳಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ತಮ್ಮನ್ನು ನೋಡಿಕೊಂಡ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗೆ ಸಿದ್ದರಾಮಯ್ಯ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಅವರು ರಾಜ್ಯದ ಜನರು ಮತ್ತು ರಾಜಕೀಯ ಮುಖಂಡರಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಿದ್ದಾರೆ.
I have come back home after being treated for #Covid19 & tested negative.
My heartfelt thanks to all the doctors, medical & support staff of Manipal hospital for their treatment, care and affection.
Doctors have recommended few more days of rest at home. pic.twitter.com/yRsw17eNIU
— Siddaramaiah (@siddaramaiah) August 13, 2020
ಈ ಕುರಿತಾಗಿ ಸ್ವತಃ ಟ್ವೀಟ್ ಮಾಡಿರುವ ಸಿದ್ದರಾಮಯ್ಯ 'ಕೊರೊನಾ ಸೋಂಕಿನಿಂದ ಗುಣಮುಖನಾಗಿ ಇಂದು ಆಸ್ಪತ್ರೆಯಿಂದ ಮನೆಗೆ ಮರಳಿದ್ದೇನೆ.ಕಳೆದ 10 ದಿನಗಳಲ್ಲಿ ಜತನದಿಂದ ನನ್ನ ಆರೈಕೆ ಮಾಡಿದ ಮಣಿಪಾಲ್ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ವರ್ಗಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು.ವೈದ್ಯರ ಸಲಹೆಯಂತೆ ಒಂದು ವಾರ ಮನೆಯಲ್ಲಿ ವಿಶ್ರಾಂತಿ ಪಡೆಯಲಿದ್ದೇನೆ.ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ ದಿನದಿಂದ ಕಾಂಗ್ರೆಸ್ ಮತ್ತು ಬೇರೆ ರಾಜಕೀಯ ಪಕ್ಷಗಳ ನಾಯಕರು, ಕಾರ್ಯಕರ್ತರು,ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಎಲ್ಲಕ್ಕಿಂತ ಮಿಗಿಲಾಗಿ ರಾಜ್ಯದ ಜನತೆ ಕಾಳಜಿಯಿಂದ ನನ್ನ ಆರೋಗ್ಯಕ್ಕಾಗಿ ಹಾರೈಸಿದ್ದಾರೆ.ಅವರೆಲ್ಲರಿಗೂ ಆಭಾರಿಯಾಗಿದ್ದೇನೆ, ಧನ್ಯವಾದಗಳು.' ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಅವರ ಪುತ್ರ ಮತ್ತು ವರುಣಾದ ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಸಹ ಆಗಸ್ಟ್ 7 ರಂದು ಕೊರೊನಾವೈರಸ್ ಗೆ ಒಳಾಗಿದ್ದರು.