ಸಿದ್ದರಾಮಯ್ಯ ಒಬ್ಬ ತಲೆ ತಿರುಕ ಮುಖ್ಯಮಂತ್ರಿ- ಯಡಿಯೂರಪ್ಪ

ನವ ಕರ್ನಾಟಕ ಪರಿವರ್ತನಾ ರ್ಯಾಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿಎಸ್ವೈ.

Last Updated : Nov 3, 2017, 03:56 PM IST
ಸಿದ್ದರಾಮಯ್ಯ ಒಬ್ಬ ತಲೆ ತಿರುಕ ಮುಖ್ಯಮಂತ್ರಿ- ಯಡಿಯೂರಪ್ಪ title=

ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ತಲೆತಿರುಕ, ಮಾನಸಿಕ ಅಸ್ವಸ್ಥ ಮುಖ್ಯಮಂತ್ರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಿದ್ದರಾಮಯ್ಯರನ್ನು ಹಿಯಾಳಿಸಿದ್ದಾರೆ.

ತುರುವೇಕೆರೆಯಲ್ಲಿ ಕೈಗೊಂಡಿರುವ ನವ ಕರ್ನಾಟಕ ಪರಿವರ್ತನಾ ರ್ಯಾಲಿಯಲ್ಲಿ ಮಾತನಾಡಿದ ಬಿಎಸ್ವೈ ಜನರಲ್ಲಿ ಜಾತಿ, ಮಠದ ವಿಷ ಬೀಜ ಬಿತ್ತುವ ಮೂಲಕ ಸಮಾಜದಲ್ಲಿ ಧರ್ಮ, ಮತಗಳ ನಡುವೆ ಶಾಂತಿ ಕದಡುವ ಯತ್ನವನ್ನು ಸಿಎಂ ಮಾಡುತ್ತಿದ್ದಾರೆ. ತಮ್ಮ ಪುತ್ರ ಡಾ|| ಯತೀಂದ್ರಗೆ ಎಸಿಬಿ ಇಂದ ಕ್ಲೀನ್ ಚಿಟ್ ಕೊಡಿಸಿದ್ದಾರೆ. ನಾನು ಒಮ್ಮೆ ಅಧಿಕಾರಕ್ಕೆ ಬಂದರೆ ಮತ್ತೊಮ್ಮೆ ತನಿಖೆ ಮಾಡಿಸಿ ನಿಮ್ಮನ್ನು ಎಲ್ಲಿಗೆ ಕಳುಹಿಸಬೇಕೋ ಅಲ್ಲಿಗೆ ಕಳುಹಿಸುತ್ತೇನೆ. 'ಅಭಿವೃದ್ಧಿ ಕಾಮಗಾರಿಯಲ್ಲಿ ಸಿಎಂ ಕಮಿಷನ್ ಏಜೆಂಟ್' ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

2013ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಮಾಡಿರುವ ಪಿತೂರಿಯನ್ನು ಜನ ಇನ್ನೂ ಮರೆತಿಲ್ಲ. ಡಾ. ಜಿ. ಪರಮೇಶ್ವರ್ ಅವರ ಸೋಲಿಗೆ ಸಿದ್ದರಾಮಯ್ಯ ಪಿತೂರಿ ರೂಪಿಸಿದ್ದರು ಇಂತಹವರು ಬಿಜೆಪಿಗೆ ಪಾಠ ಮಾಡುತ್ತಿದ್ದಾರೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಸಾಕಷ್ಟು ಎಫ್ಐಆರ್ ಗಳು ದಾಖಲಾಗಿವೆ ಎಂದು ತೀವ್ರ ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಜನಾಶೀರ್ವಾದ ಯಾತ್ರೆಗೆ ಹೊರಡುವ ಮುನ್ನ ಕಾಂಗ್ರೆಸ್ಸಿನ ಎಷ್ಟು ನಾಯಕರು ಸಿದ್ದರಾಮಯ್ಯನವರಿಗೆ ಆಶೀರ್ವಾದ ಮಾಡುತ್ತಾರೆ ನೋಡೋಣ ಎಂದೂ ಸಹ ಯಡಿಯೂರಪ್ಪ ಇದೇ ಸಂದರ್ಭದಲ್ಲಿ ಹೇಳಿದರು.

ಗುರುವಾರ ಬಿಜೆಪಿ ಪರಿವರ್ತನಾ ಕುರಿತು ಪ್ರತಿಕ್ರಿಯಿಸಿದ್ದ ಸಿಎಂ ಸಿದ್ದರಾಮಯ್ಯ, ಯಡಿಯೂರಪ್ಪ ಜೈಲಿಗೆ ಹೋಗಿ ಬಂದವರು ಎಂದು ಹೀಯಾಳಿಸಿದ್ದರು.

Trending News