ಬೆಂಗಳೂರು: ವೈಟ್ನರ್ ಬಳಿದಿದ್ದ ದಾಖಲೆಗಳಿಗೆ ಟಾರ್ಚ್ ಹಾಕಿ ತೋರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಶಿಶುಪಾಲನ ಹಾಗೆ ತಪ್ಪಿನ ತಪ್ಪು ಮಾಡುತ್ತಿದ್ದೀರಿ ಚಾಟಿ ಬೀಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂತ್ರಿಗಳಿಗೆ ಶೋಭೆಯಲ್ಲ ಎಂದು ಕಟುವಾಗಿ ಟೀಕಿಸಿದ್ದಾರೆ.


ಇದನ್ನೂ ಓದಿ- ಬಂಜರು ಭೂಮಿಯಲ್ಲಿ 'ಚಿನ್ನ' ಬೆಳೆದ್ರಾ ಮುಖೇಶ್ ಅಂಬಾನಿ! ಇಲ್ಲಿದೆ ರೋಚಕ ಸ್ಟೋರಿ


ಇದು ಮೂಲ ದಾಖಲೆ, ಮೂಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ಮೂಲ‌ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮೂಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈ ಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ಎಂದು ಪ್ರಶ್ನಿಸಿದ್ದಾರೆ ಅವರು.


ನನ್ನ ಪ್ರಶ್ನೆ ಇಷ್ಟೇ, ಈ ದಾಖಲೆಯನ್ನೇಕೆ ನೀವು ಕೋರ್ಟ್‌ಗೆ ಕೊಟ್ಟಿಲ್ಲ!? ನ್ಯಾಯಾಲಯವನ್ನೂ ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್ ಬಿಟ್ಟು ತೋರಿಸುತ್ತೀರಾ.., ಹೇಗೆ? ಎಂದು ಸಿಎಂ ಅವರ ಕಾಲೆಳೆದಿದ್ದಾರೆ ಸಚಿವರು.


ಇದನ್ನೂ ಓದಿ- ಅಂಬಾನಿ-ಅದಾನಿಗೆ ಟಕ್ಕರ್ ನೀಡಲು ಮುಂದಾದ ಟಾಟಾ: ಈ ಕ್ಷೇತ್ರದಲ್ಲಿ ಭಾರೀ ಹೂಡಿಕೆಗೆ ಸಜ್ಜು!


ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ.. ಶಿಶುಪಾಲನ ಹಾಗೆ!! ಮಾಡಿದ ತಪ್ಪು ಮುಚ್ಚಿಕೊಳ್ಳಲು ಮತ್ತೆ ಮತ್ತೆ ತಪ್ಪು ಮಾಡುತ್ತಿದ್ದೀರಿ ಎಂದು ಕಟುವಾಗಿ ಟೀಕಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.