ಬೆಂಗಳೂರು : ರಾಜ್ಯದಲ್ಲಿ ಎರಡು ಉಪಚುನಾವಣಾ ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿ ಇರುವಂತೆ  ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ  (Siddaramaiah) #ಉತ್ತರಕೊಡಿ_ಬಿಎಸ್‌ವೈ ಎಂದು ಸರಣಿ ಟ್ವೀಟ್ ಮಾಡಿದ್ದಾರೆ. ಈ ಸರಣಿ ಟ್ವಿಟ್ ಗಳ ಮೂಲಕ ಮುಖ್ಯಮಂತ್ರಿ  ಬಿ.ಎಸ್.  ಯಡಿಯೂರಪ್ಪ (BS Yediyurappa) ಮತ್ತು ಅವರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಬೊಕ್ಕಸದ ದುಡ್ಡೆಲ್ಲಿ ಹೋಯಿತು ಯಡಿಯೂರಪ್ಪ..?
ಪ್ರವಾಹ ಪೀಡಿತ ರೈತರಿಗೆ ಪರಿಹಾರ ನೀಡಲು ದುಡ್ಡಿಲ್ಲ, ಕೊರೊನಾ ಚಿಕಿತ್ಸೆಗೆ ದುಡ್ಡಿಲ್ಲ, ಬೊಕ್ಕಸ ಖಾಲಿಯಾಗಿದೆ ಎಂದು ರಾಜ್ಯ ಸರ್ಕಾರ 90,000 ಕೋಟಿ ರೂಪಾಯಿ ಸಾಲ ಮಾಡಲು ಹೊರಟಿದೆ. ಹಾಗಿದ್ದರೆ ದುಡ್ಡೆಲ್ಲಿ ಹೋಯಿತು? ಮುಖ್ಯಮಂತ್ರಿಗಳು ಮತ್ತು ಸಚಿವರ ಜೇಬಿಗೆ ಹೋಯಿತಾ? ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ. 


ಹೆದರಿಸಿ, ಬೆದರಿಸಿ ತಾನು ಶಾಸಕನಾಗಬಹುದು ಅಂತ ಮುನಿರತ್ನ ಭಾವಿಸಿದ್ದರೆ, ಅವರಂಥ ಮೂರ್ಖ ಬೇರೊಬ್ಬರಿಲ್ಲ-ಸಿದ್ದರಾಮಯ್ಯ


ತಮ್ಮ ಆಡಳಿತಾವಧಿಯ ಹಣಕಾಸು ಸ್ಥಿತಿ ಕುರಿತು ಚರ್ಚೆಗೆ ಸಿದ್ದ: ಬಿಜೆಪಿ ನಾಯಕರಿಗೆ ಸಿದ್ದರಾಮಯ್ಯ ಸವಾಲು

ಅಧಿಕಾರಿಗಳು ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ.!
ಕಳೆದ ವರ್ಷದ ಬೆಳೆ-ಮನೆ ಕಳೆದುಕೊಂಡವರಿಗೆ ಇನ್ನೂ ಸರಿಯಾಗಿ ಪರಿಹಾರ ಕೊಟ್ಟಿಲ್ಲ, ಈ ವರ್ಷ ಸಮೀಕ್ಷೆಯನ್ನೇ ಮಾಡಿಲ್ಲ. ಮುಖ್ಯಮಂತ್ರಿಗಳು, ಸಚಿವರು ಚುನಾವಣಾ ಪ್ರಚಾರದಲ್ಲಿ ತಲ್ಲೀನರಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲೆಯ ಅಧಿಕಾರಿಗಳು ಮನೆಯಲ್ಲಿ ಹಾಯಾಗಿದ್ದಾರೆ, ಸಂತ್ರಸ್ತರು ಬೀದಿಯಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. 



ಕೇಂದ್ರದಿಂದ ಪರಿಹಾರ ಕೇಳಲೂ ಭಯವೇ..?
ಕಳೆದ ವರ್ಷದ ಅತಿವೃಷ್ಟಿ ಹಾನಿಗೆ ರಾಜ್ಯ ಸರ್ಕಾರ ಕೇಂದ್ರದಿಂದ ಪರಿಹಾರ ಕೇಳಿದ್ದು ರೂ.35,000 ಕೋಟಿ, ಅವರು ನೀಡಿದ್ದು ರೂ.1654 ಕೋಟಿ. ಈ ಬಾರಿ ರಾಜ್ಯ ಸರ್ಕಾರ ಈ ವರೆಗೆ ಕೇಳಿದ್ದು ರೂ.4000 ಕೋಟಿ. ಕೇಂದ್ರದಿಂದ ಸಮರ್ಪಕ ಪರಿಹಾರ ಕೇಳಲೂ ನಿಮಗೆ ಭಯನಾ? ಎಂದು ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆ ಗೈದಿದ್ದು ಉತ್ತರ ಕೊಡಿ ಯಡಿಯೂರಪ್ಪ (CM of Karnataka) ಎಂದು ಆಗ್ರಹಿಸಿದ್ದಾರೆ.