ಹುಬ್ಬಳ್ಳಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಬೇಕು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.


COMMERCIAL BREAK
SCROLL TO CONTINUE READING

ವಾಲ್ಮೀಕಿ ನಿಗಮದಲ್ಲಿ ಬಹು ದೊಡ್ಡ ಹಗರಣ ಇದಾಗಿದ್ದು, ಸಿಎಂ ಗಮನಕ್ಕೆ ಬಾರದೇ ಇರಲು ಸಾಧ್ಯವೇ ಇಲ್ಲ ಎಂದು ಹೇಳಿದರು. ರಾಜ್ಯ ಹಣಕಾಸು ಇಲಾಖೆ ಸಿಎಂ ಸಿದ್ದರಾಮಯ್ಯ ಅವರ ಕೈಯಲ್ಲೇ ಇದೆ. ಅವರ ಗಮನಕ್ಕೆ ಬಾರದೇ ನೂರಾರು ಕೋಟಿ ರೂಪಾಯಿ ಹೇಗೆ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಆಗುತ್ತದೆ? ಎಂದು ಜೋಶಿ ಪ್ರಶ್ನಿಸಿದರು.


ಇದನ್ನೂ ಓದಿ: ಸಿಎಂ, ಡಿಸಿಎಂ ಬದಲಾವಣೆ ಬಗ್ಗೆ ಬಹಿರಂಗ ಹೇಳಿಕೆ ನೀಡುವವರ ವಿರುದ್ಧ ಶಿಸ್ತುಕ್ರಮ: ಡಿಕೆಶಿ ಎಚ್ಚರಿಕೆ


ಸಿಎಂ ಆಡಳಿತ ನಡೆಸಲು ಅಸಮರ್ಥ: ಸಿಎಂ ಗಮನಕ್ಕೆ ಬಾರದೆ ದೊಡ್ಡ ಮೊತ್ತದ ಹಣ ವರ್ಗಾವಣೆ ಅಸಾಧ್ಯ. ಒಂದು ವೇಳೆ ಅವರಿಗೆ ಗೊತ್ತಿಲ್ಲದ ಹಾಗೆ ನಡೆದಿದ್ದರೆ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಅಸಮರ್ಥರಿದ್ದಾರೆ ಎಂದು ಜೋಶಿ ಆರೋಪಿಸಿದರು.


ಮುಖ್ಯಮಂತ್ರಿ ಗಮನಕ್ಕೆ ಬಂದೇ ಇಷ್ಟೊಂದು ದೊಡ್ಡ ಮೊತ್ತದ ಹಣ ವರ್ಗಾವಣೆ ಆಗಿದ್ದರೆ ಈ ಹಗರಣದಲ್ಲಿ ಸಿದ್ದರಾಮಯ್ಯ ಅವರೂ ಪಾಲುದಾರ ಆಗಿರುತ್ತಾರೆ. ಹೀಗಾಗಿ ಸಿಎಂ ರಾಜೀನಾಮೆ ನೀಡಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಆಗ್ರಹಿಸಿದರು


ಇದನ್ನೂ ಓದಿ:ರಾಜ್ಯದ ಅಭಿವೃದ್ಧಿ ಹಾಗೂ ಹಿತ ರಕ್ಷಣೆಗೆ ಸಹಕಾರ ನೀಡುವುದಾಗಿ ಸಂಸದರ ಭರವಸೆ: ಡಿಸಿಎಂ ಡಿ.ಕೆ. ಶಿವಕುಮಾರ್ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.