ಬೆಂಗಳೂರು: ಕೊರೊನಾ ಸಮಯದಲ್ಲಿ ಕಾರ್ಪೋರೇಟ್‌ ಸಂಸ್ಥೆಗಳ ಆದಾಯ 33 ಲಕ್ಷ ಕೋಟಿ ಹೆಚ್ಚಾಗಿದೆ. ಇವರ ಮೇಲೆ ತೆರಿಗೆ ಹೆಚ್ಚು ವಿಧಿಸುವುದು ಬಿಟ್ಟು ಬಡವರ ಜೀವನ ಯಾಕೆ ಹಾಳು ಮಾಡುತ್ತೀರ? ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಈ ತಿಂಗಳ 28-29ನೇ ತಾರೀಖಿನಂದು ಎರಡು ದಿನ ಚಂಡೀಘಡದಲ್ಲಿ ಜಿಎಸ್‌ಟಿ ಕೌನ್ಸಿಲ್‌ ಸಭೆ ನಡೆಯಿತು. ಅದರಲ್ಲಿ ಭಾಗವಹಿಸಿದ್ದ ರಾಜ್ಯ ಸರ್ಕಾರದ ಪ್ರತಿನಿಧಿಗಳು ಜಿಎಸ್‌ಟಿ ಪರಿಹಾರ ಮುಂದುವರೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸದೆ ರಾಜ್ಯಕ್ಕೆ ದ್ರೋಹ ಎಸಗಿದ್ದಾರೆ.ಇಂದಿಗೆ ರಾಜ್ಯಕ್ಕೆ ಜಿಎಸ್‌ಟಿ ಪರಿಹಾರ ಸಿಗುವುದು ಕೊನೆಯಾಗುತ್ತಿದೆ. ಜಿಎಸ್‌ಟಿ ಜಾರಿಯಾದ ಮೇಲೆ ರಾಜ್ಯಗಳಿಗೆ ನಷ್ಟವಾಗುತ್ತದೆ ಎಂದು ಆ ನಷ್ಟ ಭರಿಸಿ ಕೊಡಲು ಕೇಂದ್ರ ಸರ್ಕಾರ 14% ಜಿಎಸ್‌ಟಿ ಪರಿಹಾರ ನೀಡಬೇಕು ಎಂದು ಜಿಎಸ್‌ಟಿ ಕೌನ್ಸಿಲ್ ನಲ್ಲಿ ತೀರ್ಮಾನವಾಗಿತ್ತು. 2017 ರ ಜುಲೈ 1 ರಿಂದ ಇದು ಆರಂಭವಾಗಿದ್ದು, ಈ ಅವಧಿ ಇಂದಿಗೆ ಕೊನೆಯಾಗಲಿದೆ.


ಇದನ್ನೂ ಓದಿ-Maharashtra Political Crisis : ಮಹಾ ನೂತನ ಸಿಎಂ ಆಗಿ ಫಡ್ನವಿಸ್, ಉಪಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ!


ನಾನು ಅನೇಕ ಬಾರಿ ಸದನದ ಒಳಗೆ ಮತ್ತು ಹೊರಗೆ ಜಿಎಸ್‌ಟಿ ಪರಿಹಾರ ಮುಂದುವರೆಸುವಂತೆ ಒತ್ತಾಯ ಮಾಡಿದ್ದೆ. ದೇಶದ ಹಲವು ರಾಜ್ಯಗಳು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾವೆ, ಜಿಎಸ್‌ಟಿ ಬರುವ ಮೊದಲು ರಾಜ್ಯದ ತೆರಿಗೆ ಬೆಳವಣಿಗೆ ದರ 14% ಇತ್ತು, ಈಗ ಪರಿಹಾರ ಕೊಡುವುದನ್ನು ನಿಲ್ಲಿಸಿದ್ರೆ ನಮ್ಮ ರಾಜ್ಯವೊಂದಕ್ಕೆ ವರ್ಷಕ್ಕೆ 20,000 ಕೋಟಿ ರೂಪಾಯಿ ನಷ್ಟವಾಗುತ್ತದೆ. ಇದನ್ನು ಇನ್ನೂ 5 ವರ್ಷ ಮುಂದುವರೆಸಿ ಎಂದು ಹೇಳಿದ್ದೇನೆ.


Maharashtra Political Crisis : ಮಹಾ ನೂತನ ಸಿಎಂ ಆಗಿ ಫಡ್ನವಿಸ್, ಉಪಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ!


ಬರೆಯುವ ಮತ್ತು ಮುದ್ರಿಸುವ ಇಂಕ್‌ ಗಳ ಮೇಲಿನ ತೆರಿಗೆಯನ್ನು 12% ಇಂದ 18% ಗೆ ಹೆಚ್ಚಿಸಲಾಗಿದೆ. ಇದರಿಂದ ಪತ್ರಿಕೆಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಹೊರೆಯಾಗುತ್ತದೆ. ಮ್ಯಾಪ್‌ ಗಳು ಹಾಗೂ ಶಿಕ್ಷಣದ ಉದ್ದೇಶಕ್ಕೆ ಬಳಸುವ ಚಾರ್ಟ್‌ ಗಳು, ಗ್ಲೋಬ್‌ ಮಾದರಿಗಳಿಗೆ ಈ ವರೆಗೆ ತೆರಿಗೆ ವಿನಾಯಿತಿ ಇತ್ತು, ಅದನ್ನು 12% ಮಾಡಿದ್ದಾರೆ. ಬ್ಯಾಂಕುಗಳ ಚೆಕ್‌ ಬುಕ್‌ ಮೇಲೆ ತೆರಿಗೆ ಇರಲಿಲ್ಲ, ಈಗ 18% ತೆರಿಗೆ ಹಾಕಿದ್ದಾರೆ. ಈ ರೀತಿ ಅವೈಜ್ಞಾನಿಕವಾಗಿ ಯಾರಾದರೂ ಬೆಲೆ ಏರಿಕೆ ಮಾಡುತ್ತಾರಾ? ಎಂದು ಪ್ರಶ್ನಿಸಿದರು.


ನನ್ನ ಪ್ರಕಾರ ಜಿಎಸ್‌ಟಿ ಮಾಡಿರುವುದೇ ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುವ ಕೆಲಸ. ತೆರಿಗೆ ಹಾಕುವುದು ರಾಜ್ಯ ಸರ್ಕಾರದ ಕೆಲಸ, ಹೀಗೆ ಮಿತಿಮೀರಿ ತೆರಿಗೆ ಏರಿಕೆ ಮಾಡಿದರೆ ಹೇಗೆ? ಜಿಎಸ್‌ಟಿ ಕೌನ್ಸಿಲ್‌ ನಲ್ಲಿ ನಿರ್ಣಯಗಳು ಬಹುಮತದ ಮೇಲೆ ತೀರ್ಮಾನವಾಗುತ್ತೆ, ಹೆಚ್ಚಿನ ಕಡೆ ಬಿಜೆಪಿ ಸರ್ಕಾರಗಲೇ ಇವೆ, ಜಿಎಸ್‌ಟಿ ಕಮಿಟಿ ಅಧ್ಯಕ್ಷರು ಕೇಂದ್ರದ ಹಣಕಾಸು ಸಚಿವರೇ ಆಗಿರುವುದರಿಂದ ತಮಗೆ ಬೇಕಾದಂತೆ ನಿರ್ಣಯ ಮಾಡುತ್ತಾರೆ.ಒಟ್ಟಾರೆ ಇಂದು ಬೆಲೆಯೇರಿಕೆ ಹೆಚ್ಚಿರುವ ಸಂದರ್ಭದಲ್ಲಿ ತೆರಿಗೆಗಳನ್ನು ಕಡಿಮೆ ಮಾಡುವ ಬದಲು ಪರೋಕ್ಷ ತೆರಿಗೆಯನ್ನು ಹೆಚ್ಚು ಮಾಡಿದ್ದಾರೆ, ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರವನ್ನು ಮುಂದುವರೆಸಿಲ್ಲ. ಕಾರ್ಪೋರೇಟ್‌ ಕಂಪೆನಿಗಳ ಮೇಲಿನ ತೆರಿಗೆಯನ್ನು 30% ಇಂದ 22% ಗೆ ಇಳಿಕೆ ಮಾಡಿದ್ದರು, ಅದನ್ನು ಈಗ ಹೆಚ್ಚಿಸಿಲ್ಲ. ಇದರ ಬದಲು ಬಡವರು, ಸಾಮಾನ್ಯ ಜನರ ಮೇಲಿನ ತೆರಿಗೆಯನ್ನು ಹೆಚ್ಚು ಮಾಡಿದ್ದಾರೆ. ಇದು ಮೋದಿ ಅವರ ಸರ್ಕಾರ ಮಾಡಿರುವ ಘೋರ ಅಪರಾಧ.


ಈಗ ಹೆಚ್ಚು ಮಾಡಿರುವ ತೆರಿಗೆಯನ್ನು ಕಡಿಮೆ ಮಾಡಬೇಕು ಮತ್ತು ರಾಜ್ಯಗಳಿಗೆ ಜಿಎಸ್‌ಟಿ ಪರಿಹಾರವನ್ನು ಮುಂದುವರೆಸಬೇಕು ಎಂದು ಒತ್ತಾಯಿಸುತ್ತೇನೆ. ಕೊರೊನಾ ಸಮಯದಲ್ಲಿ ಕಾರ್ಪೋರೇಟ್‌ ಸಂಸ್ಥೆಗಳ ಆದಾಯ 33 ಲಕ್ಷ ಕೋಟಿ ಹೆಚ್ಚಾಗಿದೆ. ಇವರ ಮೇಲೆ ತೆರಿಗೆ ಹೆಚ್ಚು ವಿಧಿಸುವುದು ಬಿಟ್ಟು ಬಡವರ ಜೀವನ ಯಾಕೆ ಹಾಳು ಮಾಡುತ್ತೀರ? ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿ ಜನರಿಗೆ ಬದುಕೋದು ಕಷ್ಟವಾಗಿದೆ. ಅವರ ಮೇಲೆ ಮತ್ತೆ ತೆರಿಗೆ ಬರೆ ಎಳೆದಿರುವುದು ದೊಡ್ಡ ಅನ್ಯಾಯ ಎಂದು ಅವರು ಹೇಳಿದರು/


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.