ಬೆಂಗಳೂರು: ಕೋವಿಡ್ ಕಾಯಿಲೆಯಿಂದ ಸಾವನ್ನಪ್ಪಿದವರಿಗೆ ಪರಿಹಾರ ಕೊಡುವುದನ್ನು ತಪ್ಪಿಸಲು ಕೇಂದ್ರ ಬಿಜೆಪಿ ಸರ್ಕಾರ ಸಾವಿನ ಸುಳ್ಳು ಲೆಕ್ಕ ಹೇಳಿ ಮೋಸ ಮಾಡಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಬಗ್ಗೆ ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕೋವಿಡ್‍ನಿಂದ ಸಾವಿಗೀಡಾದ ಲಕ್ಷಾಂತರ ಮಂದಿಯ ಕುಟುಂಬಕ್ಕೆ ಪರಿಹಾರವೇ ಸಿಕ್ಕಿಲ್ಲ. ಕೋವಿಡ್ ಸಾವಿನ ಮರು ಎಣಿಕೆ ಮಾಡಿದರೆ ಮಾತ್ರ ನ್ಯಾಯ ಸಿಗಲು ಸಾಧ್ಯ’ವೆಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಕೋವಿಡ್ ಕಾಯಿಲೆಯಿಂದ ಸತ್ತವರ ಸಂಖ್ಯೆಯನ್ನು ಬಚ್ಚಿಟ್ಟಿರುವ ಕೇಂದ್ರ ಬಿಜೆಪಿ ಸರ್ಕಾರದ ಸುಳ್ಳುಗಳ ಸರಮಾಲೆಯನ್ನು ವಿಶ್ವ ಆರೋಗ್ಯ ಸಂಸ್ಥೆ ಬಯಲುಗೊಳಿಸಿದೆ. ಕೋವಿಡ್ ಸಾವಿನ ಸಂಖ್ಯೆ ಕೇಂದ್ರ ಸರ್ಕಾರದ ಪ್ರಕಾರ 4.81 ಲಕ್ಷ ಮತ್ತು ಡಬ್ಲ್ಯುಎಚ್ಒ ಪ್ರಕಾರ 47.40 ಲಕ್ಷ ಆಗಿದೆ’ ಎಂದು ಹೇಳಿದ್ದಾರೆ.


BMTC Driver : ದಯಾಮರಣ ಕೋರಿ ರಾಷ್ಟ್ರಪತಿ, ಪ್ರಧಾನಿಗೆ ಪತ್ರ ಬರೆದ BMTC ಡ್ರೈವರ್!


‘ಕೋವಿಡ್ ಸಾವಿನ ಸಂಖ್ಯೆ ಕೇವಲ 37,603 ಎಂದು ರಾಜ್ಯ ಬಿಜೆಪಿ ಸರ್ಕಾರ ಹೇಳಿತ್ತು. ಕೆಪಿಸಿಸಿ ಸಮೀಕ್ಷೆ ಪ್ರಕಾರ ಸಾವಿನ ಸಂಖ್ಯೆ 3.17 ಲಕ್ಷ ಆಗಿತ್ತು. ಅರವಿಂದ್ ಸುಬ್ರಹ್ಮಣ್ಯ ಮತ್ತು ಜೇಕಬ್ ಝಾ ಪ್ರಕಾರ ಸಾವಿನ ಸಂಖ್ಯೆ 4 ಲಕ್ಷ. ಕಳೆದ ವರ್ಷದ ಜೂನ್ ತಿಂಗಳಲ್ಲಿಯೇ ನಾನು ಇದನ್ನು ಹೇಳಿದ್ದೆ’ ಎಂದು ಟ್ವೀಟ್ ಮಾಡಿದ್ದಾರೆ.


ಬಿಜೆಪಿಯ ‘ಪೇಮೆಂಟ್ ಸೀಟುಗಳು’ ಕೇವಲ ಸಿಎಂ ಕುರ್ಚಿಗಷ್ಟೇ ಸೀಮಿತವಲ್ಲ: ಸಿದ್ದರಾಮಯ್ಯ


‘ಕೋವಿಡ್ ಕಾಯಿಲೆಯನ್ನು ಔಷಧಿ ಮತ್ತು ಚಿಕಿತ್ಸೆಯ ಮೂಲಕ ಎದುರಿಸಬೇಕಾಗಿದ್ದ ಕೇಂದ್ರ ಬಿಜೆಪಿ ಸರ್ಕಾರ ಸುಳ್ಳು ಮತ್ತು ಮೋಸಗಳಿಂದ ಎದುರಿಸಲು ಹೊರಟಿದೆ. ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದೆ 39 ಜನ ಸತ್ತಿದ್ದರೂ ರಾಜ್ಯ ಬಿಜೆಪಿ ಸರ್ಕಾರ ಮಾತ್ರ ಸತ್ತವರು 3 ಜನ ಎಂದು ಹೇಳಿತ್ತು’ ಅಂತಾ ಕಿಡಿಕಾರಿದ್ದಾರೆ.


ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.