ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ವಿವಾದ ವಿಚಾರವಾಗಿ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಸಿಎಂ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

#ಸೌಹಾರ್ದತೆ ಹ್ಯಾಶ್ ಟ್ಯಾಗ್ ಬಳಸಿ ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರ(BJP Government) ಸಮಾಜದ ಕೋಮು ಸಾಮರಸ್ಯ ಕದಡುವಂತಹ ಘಟನೆಗಳಿಗೆ ಕುಮ್ಮಕ್ಕು ನೀಡುತ್ತಾ, ಆ ಮೂಲಕ ರಾಜಕೀಯ ಲಾಭ ಪಡೆಯುವ ಹವಣಿಕೆಯಲ್ಲಿದೆ. ಈ ಲೆಕ್ಕಾಚಾರವೇ ಮುಂದೆ ಬಿಜೆಪಿಗೆ ತಿರುಗುಬಾಣವಾಗಲಿದೆ’ ಎಂದು ಎಚ್ಚರಿಕೆ ನೀಡಿದ್ದಾರೆ.


Vatal Nagaraj : ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ ವಾಟಾಳ್ ನಾಗರಾಜ್


‘ಮಂದಿರ, ಮಸೀದಿ, ಚರ್ಚು ಎಲ್ಲಾ ಕಡೆ ಧ್ವನಿ ವರ್ಧಕ(Loudspeakers Ban)ಗಳನ್ನು ಹಾಕುತ್ತಾರೆ. ಇದರಿಂದ ಇಷ್ಟುದಿನ ಯಾರಿಗೆ ತೊಂದರೆ ಆಗಿತ್ತು? ಕಣ್ಣೆದುರೇ ಸಮಾಜದ ಸಾಮರಸ್ಯ ಕುಸಿದುಬೀಳುತ್ತಿದ್ದರೂ, ಅದಕ್ಕೆ ಕಾರಣವಾದ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗದಷ್ಟು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai)ಯವರು ಅಸಮರ್ಥರೇ?’ ಎಂದು ಪ್ರಶ್ನಿಸಿದ್ದಾರೆ.


Congress MLA : 'ಹಿಜಾಬ್ ಆಯ್ತು, ಹಲಾಲ್ ಆಯ್ತು, ಇದೀಗ ಮಸೀದಿಗಳ ಮೇಲೆ ಸರ್ಕಾರದ ಕಣ್ಣು ಬಿದ್ದಿದೆ'


Siddaramaiah) ಟ್ವೀಟ್ ಮಾಡಿದ್ದಾರೆ.  


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.