ಚಾಮರಾಜನಗರ: ಇಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಉಳಿದ ನೂತನ ಸಚಿವರೂ ಕೂಡ ಪದಗ್ರಹಣ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯದ ಸಿಎಂ ಆಗಿ ಗದ್ದುಗೆ ಏರಿರುವ ಸಿದ್ದರಾಮಯ್ಯ ಅವರಿಗೆ ವಿಶೇಷವಾಗಿ ಶುಭ ಕೋರುವ ಸಲುವಾಗಿ ಕೊಳ್ಳೇಗಾಲದ ಬಸ್ತಿಪುರ ಗ್ರಾಮದ ಮಲ್ಲೇಶ್ ಎಂಬವರು ಬಣ್ಣಗಳ‌ ಮೊರೆ ಹೋಗಿದ್ದಾರೆ. ಮೈಮೇಲೆಲ್ಲಾ  ಹುಲಿಯಾ, ಸಿಎಂ ಸಿದ್ದರಾಮಯ್ಯ, ಸಿಎಂ‌ ಸಿದ್ದು ಎಂದು ಬರೆಸಿಕೊಂಡು ಅಭಿಮಾ‌ನ ಮೆರೆದಿದ್ದಾರೆ.‌


ಇದನ್ನೂ ಓದಿ: Karnataka CM: ಸಿದ್ದರಾಮಯ್ಯ & ಡಿಕೆಶಿಗೆ ಶುಭಕೋರುವ ಪೋಸ್ಟರ್ ಹರಿದ ಕನ್ನಡ ಪರ ಸಂಘಟನೆ!


ಚಾಮರಾಜನಗರ ಜಿಲ್ಲೆಯಿಂದಲೂ ಸಾವಿರಾರು ಮಂದಿ ಅಭಿಮಾನಿಗಳು ಪ್ರಮಾಣವಚನ ಕಾರ್ಯಕ್ರಮ‌ ನೋಡಲು ರಾಜಧಾನಿಗೆ ಲಗ್ಗೆ ಇಟ್ಟಿದ್ದಾರೆ. ಚಾಮರಾಜನಗರದ ಮೇಲೆ ವಿಶೇಷ ಅಭಿಮಾನ ಇಟ್ಟುಕೊಂಡಿರುವ ಸಿದ್ದುಗೆ ಗಡಿಜಿಲ್ಲೆಯಲ್ಲಿ ಅಪಾರ ಅಭಿಮಾನಿಗಳಿದ್ದಾರೆ.


ಈ ಹಿನ್ನೆಲೆಯಲ್ಲಿ ಕಂಠೀರವ ವೇದಿಕೆ ಮದುವಣಗಿತ್ತಿಯಂತೆ ಅಲಂಕಾರಗೊಂಡಿದೆ. ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಂಬಂಧಿಸಿ ಕ್ಷಣ ಕ್ಷಣದ ಮಾಹಿತಿಯನ್ನು ನೀಡಲಾಗುತ್ತಿದೆ. ರಾಜ್ಯದ ಸಿಎಂ ಆಗಿ ಗದ್ದುಗೆ ಏರಿರುವ ಸಿದ್ದರಾಮಯ್ಯ ಅವರಿಗೆ ವಿಶೇಷವಾಗಿ ಶುಭ ಕೋರುವ ಸಲುವಾಗಿ ಕೊಳ್ಳೇಗಾಲದ ಬಸ್ತಿಪುರ ಗ್ರಾಮದ ಮಲ್ಲೇಶ್ ಎಂಬವರು ಬಣ್ಣಗಳ‌ ಮೊರೆ ಹೋಗಿದ್ದಾರೆ.


ಇದನ್ನೂ ಓದಿ: Karnataka CM: ʼಜೋಡೆತ್ತುʼ ಸರ್ಕಾರಕ್ಕೆ ಶುಭ ಕೋರಿದ ಸಲಗ..! ಛಲ ಬಿಡದ ತ್ರಿವಿಕ್ರಮನಂತೆ ಕೆಲಸ ನಿರ್ವಹಿಸಿ ಎಂದ ವಿಜಿ..


ಮೈಮೇಲೆಲ್ಲಾ  ಹುಲಿಯಾ, ಸಿಎಂ ಸಿದ್ದರಾಮಯ್ಯ, ಸಿಎಂ‌ ಸಿದ್ದು ಎಂದು ಬರೆಸಿಕೊಂಡು ಅಭಿಮಾ‌ನ ಮೆರೆದಿದ್ದಾರೆ.‌ ಚಾಮರಾಜನಗರ ಜಿಲ್ಲೆಯಿಂದಲೂ ಸಾವಿರಾರು ಮಂದಿ ಅಭಿಮಾನಿಗಳು ಪ್ರಮಾಣವಚನ ಕಾರ್ಯಕ್ರಮ‌ ನೋಡಲು ರಾಜಧಾನಿಗೆ ಲಗ್ಗೆ ಇಟ್ಟಿದ್ದಾರೆ. ಚಾಮರಾಜನಗರದ ಮೇಲೆ ವಿಶೇಷ ಅಭಿಮಾನ ಇಟ್ಟುಕೊಂಡಿರುವ ಸಿದ್ದುಗೆ ಗಡಿಜಿಲ್ಲೆಯಲ್ಲಿ ಅಪಾರ ಅಭಿಮಾನಿಗಳಿದ್ದಾರೆ.


ಅದೇ ರೀತಿ ಕರ್ನಾಟಕದ ನಿಯೋಜಿತ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಬೆಂಬಲಿಗರೊಬ್ಬರು ತಮ್ಮ ಎದೆಯ ಮೇಲೆ ತಮ್ಮ ನೆಚ್ಚಿನ ನಾಯಕನ ಹಚ್ಚೆ ಹಾಕಿಸಿಕೊಂಡಿದ್ದಾರೆ. ಜೊತೆಗೆ ಡಿಕೆಶಿ ಮತ್ತು ಕಾಂಗ್ರೆಸ್ ಪಕ್ಷದ ಇತರ ನಾಯಕರ ಫೋಟೋ ಫ್ರೇಮ್ ಕೂಡ ತಂದಿದ್ದಾರೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.