ಈ ಜನ್ಮದಲ್ಲಿ ರಾಹುಲ್ ಗಾಂಧಿಗೆ ಮದುವೆ ಆಗಲ್ಲ, ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ: ಕೆ.ಎಸ್.ಈಶ್ವರಪ್ಪ

ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ ಬಂದ ಕೂಡಲೇ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಬಿದ್ದುಹೊಗುತ್ತೆ ಎಂದು ಕೆ.ಎಸ್.ಈಶ್ವರಪ್ಪ ಪುನರುಚ್ಚರಿಸಿದರು.

Last Updated : May 9, 2019, 08:04 PM IST
ಈ ಜನ್ಮದಲ್ಲಿ ರಾಹುಲ್ ಗಾಂಧಿಗೆ ಮದುವೆ ಆಗಲ್ಲ, ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ: ಕೆ.ಎಸ್.ಈಶ್ವರಪ್ಪ title=

ಹುಬ್ಬಳ್ಳಿ: ಈ ಜನ್ಮದಲ್ಲಿ ರಾಹುಲ್ ಗಾಂಧಿ ಮದುವೆ ಆಗಲ್ಲ, ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್​.ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಚಿಕ್ಕನಗೌಡರ್ ಪರ ಪ್ರಚಾರದ ವೇಳೆ ಮಾತನಾಡಿದ ಈಶ್ವರಪ್ಪ, ಮೈತ್ರಿ ಸರ್ಕಾರದ ಒಳಗೆ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ. ಕಾಂಗ್ರೆಸ್ ಶಾಸಕರೆಲ್ಲರೂ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಎರಡೂ ಪಕ್ಷಗಳೂ ಹೇಗೆ ಕಿತ್ತಾಡುತ್ತವೆ ಎಂಬುದನ್ನು ಕಾದು ನೋಡಿ ಎಂದರು.

ಮುಂದುವರೆದು ಮಾತನಾಡಿದ ಅವರು, ಈ ಜನ್ಮದಲ್ಲಿ ರಾಹುಲ್ ಗಾಂಧಿಗೆ ಮದುವೆ ಆಗಲ್ಲ, ಸಿದ್ದರಾಮಯ್ಯ ಮತ್ತೆ ಸಿಎಂ ಆಗಲ್ಲ. ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ ಬಂದ ಕೂಡಲೇ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಬಿದ್ದುಹೊಗುತ್ತೆ ಎಂದು ಪುನರುಚ್ಚರಿಸಿದರು.

Trending News