ಬೆಳಗಾವಿ: ಯಾವುದೇ ಕಾರಣಕ್ಕೂ ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ನಿಲ್ಲುವುದಿಲ್ಲವೆಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಕಾಂಗ್ರೆಸ್‍ನಿಂದ ಕೋಲಾರದಲ್ಲಿ ಪ್ರಜಾಧ್ವನಿ ಯಾತ್ರೆ ವಿಚಾರವಾಗಿ ಬೆಳಗಾವಿಯಲ್ಲಿ ಸೋಮವಾರ ಮಾತನಾಡಿರುವ ಅವರು, ಕೋಲಾರದಿಂದ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲವೆಂದು ಹೇಳಿದ್ದಾರೆ.


ಇದನ್ನೂ ಓದಿ: Bengaluru Student Murder :ʼನನ್ನ ಲವ್‌ ಮಾಡಿ ಇನ್ನೊಬ್ಬನ ಜೊತೆ ಓಡಾಡಿದ್ರೆ ಬಿಟ್ಬಿಡಬೇಕಾ ಸರ್..!ʼ


‘ನಾನು ಭವಿಷ್ಯ ಹೇಳುತ್ತಿಲ್ಲ, ಆದರೆ ಸಿದ್ದರಾಮಯ್ಯ ಕೋಲಾರದಿಂದ ನಿಲ್ಲುವುದಿಲ್ಲ. ಈ ಬಗ್ಗೆ ಡ್ರಾಮಾ ಮಾಡುತ್ತಿರುವ ಸಿದ್ದರಾಮಯ್ಯ ಮೈಸೂರಿಗೆ ಬರಲು ಪ್ರಯತ್ನ ಮಾಡುತ್ತಿದ್ದಾರೆ. ಕೋಲಾರದಲ್ಲಿ ನಿಂತುಕೊಂಡರೆ ಅವರು ಮನೆಗೆ ಹೋಗುವುದು ನಿಶ್ಚಿತ. ಆದರೂ ಸುಮ್ಮನೆ ರಾಜಕೀಯ ಡೋಂಬರಾಟ, ನಾಟಕ ಮಾಡುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.


ನನ್ನ ಪ್ರಕಾರ ಸಿದ್ದರಾಮಯ್ಯ ಕೋಲಾರದಲ್ಲಿ ನಿಲ್ಲುವುದಿಲ್ಲ, ಅವರು ಮೈಸೂರಿಗೆ ಹೋಗಬಹುದು. ಆದಾದ ಬಳಿಕ ಮುಂದಿನ ಸ್ಟ್ಯಾಟರ್ಜಿಯನ್ನು ನಾವು ಮಾಡಬೇಕು, ಮಾಡ್ತೇವಿ. ಸಿದ್ದರಾಮಯ್ಯ ಎರಡೂ ಕಡೆಯಾದ್ರೂ ಸ್ಪರ್ಧೆ ಮಾಡಲಿ, 3 ಕಡೆಯಾದ್ರೂ ಮಾಡಲಿ ಮನೆಗೆ ಹೋಗುವುದು ನಿಶ್ಚಿತವೆಂದು ಬಿಎಸ್‍ವೈ ಭವಿಷ್ಯ ನುಡಿದಿದ್ದಾರೆ.


ಇದನ್ನೂ ಓದಿ: ಆರೋಗ್ಯಯುತ ಜೀವನಕ್ಕೆ ಯೋಗಾಸನ ರಹದಾರಿ: ಸಚಿವ ಆರ್.ಅಶೋಕ್


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.