Pramod Muthalik : 'ಹಠದಿಂದ ಸ್ವಂತ ಜಾಗದಲ್ಲಿ ಟಿಪ್ಪು ಪ್ರತಿಮೆ ಕಟ್ಟುತ್ತೀವಿ ಅಂದ್ರೂ ಬಿಡಲ್ಲ'

ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡ್ತೇವೆ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ಖಂಡನೀಯ, ಇಸ್ಲಾಂ ನಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಮುಸ್ಲಿಂ ಸಮುದಾಯದವರೇ ಅದನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

Written by - Zee Kannada News Desk | Last Updated : Nov 12, 2022, 05:39 PM IST
  • ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡ್ತೇವೆ
  • ಶಾಸಕ ತನ್ವೀರ್ ಸೇಠ್ ಹೇಳಿಕೆ ಖಂಡನೀಯ
  • ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್
Pramod Muthalik : 'ಹಠದಿಂದ ಸ್ವಂತ ಜಾಗದಲ್ಲಿ ಟಿಪ್ಪು ಪ್ರತಿಮೆ ಕಟ್ಟುತ್ತೀವಿ ಅಂದ್ರೂ ಬಿಡಲ್ಲ' title=

ಶಿವಮೊಗ್ಗ : ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡ್ತೇವೆ ಎಂಬ ಶಾಸಕ ತನ್ವೀರ್ ಸೇಠ್ ಹೇಳಿಕೆ ಖಂಡನೀಯ, ಇಸ್ಲಾಂ ನಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಮುಸ್ಲಿಂ ಸಮುದಾಯದವರೇ ಅದನ್ನು ಒಪ್ಪುವುದಿಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. 

ನಗರದಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಕುರಿತ ತನ್ವೀರ್ ಸೇಠ್ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪ್ರಮೋದ್ ಮುತಾಲಿಕ್, ಅಲ್ಲಾಹ ಒಬ್ಬನೇ ದೇವರು, ಉಳಿದವರು ಕಾಫಿರರು ಎಂದು ಇಸ್ಲಾಂ ಹೇಳುತ್ತದೆ. ಅಲ್ಲಾಹ್ ಹಾಗು ಮಹಮ್ಮದ್ ಪೈಗಂಬರ್ ಮೂರ್ತಿ ಇಲ್ಲ. ತನ್ವೀರ್ ಸೇಠ್ ವಿರುದ್ದ ಮುಸ್ಲಿಂ ಮುಖಂಡರು ಫತ್ವಾ ಹೊರಡಿಸಬೇಕು ಎಂದು  ಒತ್ತಾಯಿಸಿದ್ದಾರೆ. 

ಇದನ್ನೂ ಓದಿ : ದೇವಾಲಯದ ಪೂಜೆ ಸಮಯಕ್ಕೆ ಬಂದು ಪ್ರಸಾದ ಸ್ವೀಕರಿಸೋ ಕೋತಿ!

ಇಸ್ಲಾಂನಲ್ಲಿ ಮೂರ್ತಿ ಪೂಜೆಗೆ ಅವಕಾಶ ಇಲ್ಲ ಎಂದಾದರೆ ಮುಸ್ಲಿಂ ಮುಖಂಡರು ತನ್ವೀರ್ ಸೇಠ್ ವಿರುದ್ದ ಫತ್ವಾ ಹೊರಡಿಸಬೇಕು. ಅವರ ವಿರುದ್ಧ ಬಹಿಷ್ಕಾರ ಹಾಕಬೇಕು. ಟಿಪ್ಪು ಸುಲ್ತಾನ್ ಮತಾಂಧ, ಒಬ್ಬ ದ್ರೋಹಿ, ಕನ್ನಡ ವಿರೋಧಿ. ಸಾವಿರಾರು ದೇವಸ್ಥಾನ ಭಗ್ನಗೊಳಿಸಿ ಮಸೀದಿ ಕಟ್ಟಿಸಿದ ಧೂರ್ತ. ಲಕ್ಷಾಂತರ ಹಿಂದೂಗಳನ್ನು ಕ್ರೌರ್ಯದಿಂದ, ಮೋಸದಿಂದ ಮತಾಂತರ ಮಾಡಿದ ವ್ಯಕ್ತಿ. ಅಂತಹವನ ಮೂರ್ತಿ ಪ್ರತಿಷ್ಠಾಪನೆ ಮಾಡಲು ಎಲ್ಲಿಯೂ ಮಾಡಲು ಅವಕಾಶ ಕೊಡಲ್ಲ. ಮೋಸದಿಂದ ಮೈಸೂರು ಮಹಾರಾಜ, ಮಹಾರಾಣಿ ಅವರನ್ನು ಬಂಧನದಲ್ಲಿಟ್ಟು ಹಾಳು ಮಾಡಿದ ಟಿಪ್ಪು ಪ್ರತಿಮೆ ನಿರ್ಮಾಣದ ವಿರುದ್ದ ಕಾನೂನಾತ್ಮಕವಾಗಿ, ಸಾಮಾಜಿಕವಾಗಿ ಹೋರಾಟ ಮಾಡ್ತೀವಿ. ಹಠದಿಂದ ಸ್ವಂತ ಜಾಗದಲ್ಲಿ ಕಟ್ಟುತ್ತೀವಿ ಅಂದ್ರೂ ಬಿಡಲ್ಲ. ನಿಮ್ದು ಸ್ವಂತ ಜಾಗ ಯಾವ್ದು ಇಲ್ಲ, ಎಲ್ಲಾ ಈ ದೇಶಕ್ಕೆ ಸೇರಿದ್ದು. ಎಲ್ಲಾ ಜಾಗ ಹಿಂದುಗಳದ್ದು, ಭಾರತ ದೇಶದ್ದು. ಟಿಪ್ಪು ಸುಲ್ತಾನ್ ಗೆ ಕೊಟ್ಟರೆ ನಾಳೆ ಔರಂಗಜೇಬ್, ಬಾಬರ್ ಪ್ರತಿಮೆ ಕಟ್ಟುತ್ತೀರಾ. ಇಸ್ಲಾಂನ ಪ್ರಮುಖರು ಆತ್ಮಸಾಕ್ಷಿಗೆ ಒಪ್ಪುವುದಾದರೆ ನಿಮ್ಮ ಏಕದೇವೋಪಾಸನೆ ಒಪ್ಪಿಲ್ಲ ಅಂದಾಗೆ ಆಗುತ್ತದೆ. ನಿಮ್ಮ ತತ್ವ, ಸಿದ್ದಾಂತವನ್ನು ತನ್ವೀರ್ ಗಾಳಿಗೆ ತೂರುತ್ತಿದ್ದಾರೆ. ಒಂದು ವೇಳೆ ನಿರ್ಮಾಣಕ್ಕೆ ಮುಂದಾದರೆ ಚಲೋ ಮೈಸೂರು ಕರೆ ಕೊಡ್ತೀವಿ. ಬಾಬರ್ ಮಸೀದಿ ಧ್ವಂಸ ಮಾಡಿದ ರೀತಿಯಲ್ಲಿ ಟಿಪ್ಪು ಸುಲ್ತಾನ್ ಮೂರ್ತಿಯನ್ನು ಒಡೆದು ಹಾಕ್ತೀವಿ. ನೂರಕ್ಕೆ ನೂರು ತನ್ವೀರ್ ಸೇಠ್ ವಿರುದ್ದ ಮುಸ್ಲಿಂರು ಆಕ್ರೋಶ ವ್ಯಕ್ತಪಡಿಸುತ್ತಾರೆ ಎಂದರು

ಇನ್ನು ಮುಂದುವರೆದು ಮಾತನಾಡಿದ ಅವರು, ಮುಸ್ಲಿಂರೇ ಈ ಬಾರಿ ಅವರಿಗೆ ಓಟ್ ಹಾಕುವುದಿಲ್ಲ. ತನ್ವೀರ್ ಸೇಠ್ ಕ್ಷೇತ್ರದಲ್ಲಿ ಎಸ್ ಡಿಪಿಐ ಬೆಳೆದು ನಿಂತಿದೆ. ಹೋದ ಬಾರಿಯೇ ಸಾಕಷ್ಟು ಮತ ಪಡೆದಿದೆ. ಈ ಬಾರಿ ತನ್ವೀರ್ ಸೇಠ್ ಅವರನ್ನು ಸೋಲಿಸುತ್ತಾರೆ. ಆಗಾಗಿಯೇ ಕಟ್ಟರ್ ಮುಸ್ಲಿಂವಾದಿ, ಕಟ್ಟರ್ ಟಿಪ್ಪುವಾದಿ ಅಂತಾ ತೋರಿಸುವ ಪ್ರಯತ್ನ ಮಾಡ್ತಿದ್ದಾರೆ. ಇದಕ್ಕೆ ನಾವಂತೂ ಅವಕಾಶ ಕೊಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಅಸ್ತಿತ್ವದ ಭಯದಿಂದ ಎಚ್.ಡಿ.ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆಯೇ?: ಬಿಜೆಪಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News