ಧಾರವಾಡ : ಧಾರವಾಡ ತಾಲ್ಲೂಕಿನ ನಾರಾಯಣಪುರದ ವಾಸಿ ಮಾರುತಿ ಶಾನಬಾಗ್ ಎಂಬುವವರು ದಿ:22/12/2023 ರಂದು ರೂ.10,000/- ಕಿಮ್ಮತ್ತಿನ ಆಯುರ್ವೇದಿಕ್ ಆಹಾರ ಸಾಮಾನುಗಳನ್ನು ಮುಂಬೈಯಲ್ಲಿರುವ ಸಂತೋಷ ಎಂಬುವವರಿಗೆ ಎದುರುದಾರರಾದ ಎಸ್.ಆರ್.ಎಸ್. ಟ್ರಾವೆಲ್ಸ್‍ನವರ ಮುಖಾಂತರ ಸರ್ವಿಸ್ ಚಾರ್ಜ ಪಾವತಿಸಿ ಪಾರ್ಸಲ್ ಕಳುಹಿಸಿದ್ದರು. ಆದರೆ ಅದು ಸಂತೋಷ ಅವರಿಗೆ ತಲುಪಿರಲಿಲ್ಲ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ಕರ್ನಾಟಕ ಮರ್ಯಾದೆ ತೆಗೆದವರು ಈಗ ನೈತಿಕತೆಯ ಪಾಠ ಮಾಡುತ್ತಿದ್ದಾರೆ"


ತಕ್ಷಣ ದೂರುದಾರರು ಎದುರುದಾರರಿಗೆ ಭೇಟಿಯಾಗಿ ಪಾರ್ಸಲ್ ತಲುಪಿರದ ಬಗ್ಗೆ ತಿಳಿಸಿರುತ್ತಾರೆ. ಸಾಕಷ್ಟು ಸಲ ವಿಚಾರಿಸಿದರೂ ಎದುರುದಾರರಾದ ಎಸ್.ಆರ್.ಎಸ್. ಟ್ರಾವೆಲ್ಸ್‍ಗೆ ಅದಕ್ಕೆ ಉತ್ತರ ನೀಡದೇ ಸತಾಯಿಸಿರುತ್ತಾರೆ. ಅಲ್ಲದೇ ತಾವು ಕೇವಲ ರೂ.1,000/- ಗೆ ಮಾತ್ರ ಪರಿಹಾರ ಕೊಡಲು ಸೀಮಿತರಾಗಿರುತ್ತೇವೆ ಎಂದು ಉತ್ತರ ನೀಡಿರುತ್ತಾರೆ. ಮನನೊಂದ ದೂರುದಾರರು ಎದುರುದಾರರ ಸೇವಾ ನ್ಯೂನ್ಯತೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದಿ:01/03/2024 ರಂದು ದೂರು ಸಲ್ಲಿಸಿದ್ದರು.


ಇದನ್ನೂ ಓದಿ: ಭಾರತೀಯ ಕ್ರಿಕೆಟ್‌ ಇತಿಹಾಸದಲ್ಲಿ ಅತ್ಯಂತ ವೇಗವಾಗಿ ಬೌಲಿಂಗ್ ಮಾಡಿದ್ದು ಯಾರು?


ಸದರಿ ದೂರಿನ ಕೂಲಂಕುಷ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಕೆ.ಭೂತೆ, ಸದ್ಯಸ್ಯರುಗಳಾದ ವಿಶಾಲಾಕ್ಷಿ ಬೋಳಶೆಟ್ಟಿ, ಪ್ರಭು ಹಿರೇಮಠ. ದೂರುದಾರರು ಎದುರುದಾರರ ಬಳಿ ಸೇವಾ ಶುಲ್ಕ ರೂ.220/- ಕೊಟ್ಟು ಪಾರ್ಸಲನ್ನು ಮುಂಬೈಯಿಗೆ ಕಳುಹಿಸಿರುವುದು ಕಂಡುಬರುತ್ತದೆ. ಅಲ್ಲದೇ ಅದು ಮುಂಬೈಯಿಗೆ ಹೋಗಿ ಮುಟ್ಟಿರದೇ ಇರುವುದು ಸೇವಾ ನ್ಯೂನ್ಯತೆ ಅಂತಾ ಪರಿಗಣಿಸಿ ದೂರುದಾರರಿಗೆ ಆಗಿರುವ ನಷ್ಟಕ್ಕೆ ರೂ.5,000/- ಶೇ8% ರಂತೆ ವಾರ್ಷಿಕ ಬಡ್ಡಿ ಲೆಕ್ಕ ಹಾಕಿ ಬುಕ್ ಮಾಡಿದ ದಿ:22/12/2023 ರಂದು ಪೂರ್ತಿ ಹಣ ಸಂದಾಯವಾಗುವವರೆಗೆ ದೂರುದಾರರಿಗೆ ಕೊಡಲು ಎದುರುದಾರರಿಗೆ ಆದೇಶಿಸಿದೆ. ದೂರುದಾರರಿಗೆ ಆಗಿರುವ ಅನಾನುಕೂಲ ಮತ್ತು ಮಾನಸಿಕ ಹಿಂಸೆಗೆ ರೂ.25,000/- ಪರಿಹಾರ ಮತ್ತು ಪ್ರಕರಣದ ಖರ್ಚು ವೆಚ್ಚಾ ರೂ.10,000/-  ಕೊಡಬೇಕು ಅಂತಾ ಧಾರವಾಡದ ಎಸ್.ಆರ್.ಎಸ್. ಟ್ರಾವೆಲ್ಸ್‍ಗೆ ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.