SSLC ಪರೀಕ್ಷೆ ಬರೆಯುವ ವಿದ್ಯಾರ್ಥಿ ಪೋಟೋಗೆ ತಿಥಿ ಪೂಜೆ ಮಾಡಿದ ದುಷ್ಕರ್ಮಿಗಳು 

ವಾಮಾಚಾರ ಮಾಡಿರೋ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ 50(NH 50) ಬದಿಯಲ್ಲಿ, ಸಚಿನ್ ನಾಯಕ ಎಂಬ ವಿದ್ಯಾರ್ಥಿಯ ಪೋಟೋಗೆ ಹೂವಿನ ಹಾರ ಹಾಕಿ, ಟೆಂಗಿನಕಾಯಿ ಒಡೆದು, ಗಡಿಗೆ ಇಟ್ಟು, ಹಾಲ್ ಟಿಕೆಟ್ ಝರಾಕ್ಸ್ ಪ್ರತಿ ಇಟ್ಟು ವಿಕೃತ ಮೆರೆದಿದ್ದಾರೆ. ಘಟನೆಯಿಂದ ವಿದ್ಯಾರ್ಥಿ ಸಚಿನ್ ನಾಯಕ ಭಯಗೊಂಡಿದ್ದಾರೆ.

Written by - Channabasava A Kashinakunti | Last Updated : Mar 28, 2022, 04:59 PM IST
  • ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿ ಪೋಟೋಗೆ ತಿಥಿ ಪೂಜೆ
  • ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ 1 ರಲ್ಲಿ ನಡೆದಿದೆ.
  • ಘಟನೆಯಿಂದ ಭಯಗೊಂಡ ವಿದ್ಯಾರ್ಥಿ ಸಚಿನ್ ನಾಯಕ
SSLC ಪರೀಕ್ಷೆ ಬರೆಯುವ ವಿದ್ಯಾರ್ಥಿ ಪೋಟೋಗೆ ತಿಥಿ ಪೂಜೆ ಮಾಡಿದ ದುಷ್ಕರ್ಮಿಗಳು  title=

ವಿಜಯಪುರ : ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿ ಪೋಟೋಗೆ ದುಷ್ಕರ್ಮಿಗಳು ತಿಥಿ ಪೂಜೆ ಮಾಡಿದ ಘಟನೆ ವಿಜಯಪುರ ತಾಲೂಕಿನ ಅರಕೇರಿ ತಾಂಡಾ 1 ರಲ್ಲಿ ನಡೆದಿದೆ.

ವಾಮಾಚಾರ ಮಾಡಿರೋ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ತಾಂಡಾ ಬಳಿಯ ರಾಷ್ಟ್ರೀಯ ಹೆದ್ದಾರಿ 50(NH 50) ಬದಿಯಲ್ಲಿ, ಸಚಿನ್ ನಾಯಕ ಎಂಬ ವಿದ್ಯಾರ್ಥಿಯ ಪೋಟೋಗೆ ಹೂವಿನ ಹಾರ ಹಾಕಿ, ಟೆಂಗಿನಕಾಯಿ ಒಡೆದು, ಗಡಿಗೆ ಇಟ್ಟು, ಹಾಲ್ ಟಿಕೆಟ್ ಝರಾಕ್ಸ್ ಪ್ರತಿ ಇಟ್ಟು ವಿಕೃತ ಮೆರೆದಿದ್ದಾರೆ. ಘಟನೆಯಿಂದ ವಿದ್ಯಾರ್ಥಿ ಸಚಿನ್ ನಾಯಕ ಭಯಗೊಂಡಿದ್ದಾರೆ.

ಇದನ್ನೂ ಓದಿ : BS Yediyurappa: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎಸಿಬಿಗೆ ದೂರು

ಈ ಘಟನೆಯ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಪರೀಕ್ಷಾರ್ಥಿ ಪೋಷಕರು, ನಮ್ಮ ಮಗನ ಪೋಟೋ(Photo) ಇಟ್ಟು ಈ ರೀತಿ ದುಷೃತ್ಯವೆಸಗಿದವರ ಪತ್ತೆ ಮಾಡಬೇಕೆಂದು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಪರೀಕ್ಷಾರ್ಥಿ ಪೋಷಕರು ಪೊಲೀಸರಿಗೆ ದೂರು(Police Complaint) ನೀಡಲು ಚಿಂತನೆ ನಡೆಸಿದ್ದಾರೆ. ಘಟನೆಯ ಆತಂಕದಲ್ಲೇ ಸಚಿನ್ ನಾಯಕ್ ಖಾಸಗಿ ಶಾಲೆಗೆ ಹೋಗಿ ಪರೀಕ್ಷೆ ಬರೆದು ಬಂದಿದ್ದಾನೆ.

ಇದನ್ನೂ ಓದಿ : ಹಿಂದುತ್ವದ ವಿರುದ್ಧ ನಿಂತವರಿಗೆ ಮಾತ್ರ ಕಾಂಗ್ರೆಸ್ ಪಕ್ಷದ ಪ್ರಮುಖ ಜವಾಬ್ದಾರಿ: ಬಿಜೆಪಿ ಆರೋಪ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News