State Level Maharishi Valmiki Award: ಬೆಂಗಳೂರಿನ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಭಾಜನರಾದ ಪ್ರತಿ ಸಾಧಕರಿಗೆ ಐದು ಲಕ್ಷ ರೂಪಾಯಿ ನಗದು 20ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಿದ್ದಾರೆ. ಎನ್ ವೈ ಹನುಮಂತಪ್ಪ ಅವರು ಬಳ್ಳಾರಿಯ ಮಾಜಿ ಸಂಸದರು ಹಾಗೂ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳಾಗಿ ನಿವೃತ್ತಿ ಹೊಂದಿದ್ದಾರೆ. 


COMMERCIAL BREAK
SCROLL TO CONTINUE READING

ಪ್ರಾಥಮಿಕ ಶಿಕ್ಷಣವನ್ನು ಚಿತ್ರದುರ್ಗ ಹಾಗೂ ಬಳ್ಳಾರಿಯಲ್ಲಿ ಪೂರ್ಣಗೊಳಿಸಿದರು. ಬೆಂಗಳೂರಿನ ಎಸ್ ಜೆ ಆರ್ ಸಿ ಲಾ ಕಾಲೇಜಿನಲ್ಲಿ ಪದವಿ ಪಡೆದು, ಕರ್ನಾಟಕ ಹೈಕೋರ್ಟಿನ, ಆಂಧ್ರಪ್ರದೇಶದ ಹೈಕೋರ್ಟ್,  ಒರಿಸ್ಸಾ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ಅನುಪಮ ಸೇವೆ ಸಲ್ಲಿಸಿದ್ದಾರೆ. 


ಇದನ್ನೂ ಓದಿ-ಹುಲಿ ಉಗುರು ಯಾಕೆ ಧರಿಸುತ್ತಾರೆ ಗೊತ್ತಾ..? ಇಲ್ಲಿದೆ ಸಂಪೂರ್ಣ ಮಾಹಿತಿ


ಅನೇಕ ಐತಿಹಾಸಿಕ ತೀರ್ಪುಗಳನ್ನು ನೀಡಿ ಗಣನೀಯವಾಗಿ ಸಮಾಜ ಸೇವೆ ಸಲ್ಲಿಸಿದ್ದಾರೆ. ಸುಜಾತಮ್ಮ ಬಯಲಾಟ ಮತ್ತು ರಂಗಭೂಮಿ ಕಲಾವಿದೆಯಾಗಿ ಗುರುತಿಸಿಕೊಂಡಿದ್ದಾರೆ. ಸುಜಾತಮ್ಮ ಅವರು ಮೂಲತಃ ಬಳ್ಳಾರಿ ಜಿಲ್ಲೆಯವರಾಗಿದ್ದು, ಹಲವು ಬಯಲಾಟ ಪ್ರದರ್ಶನಗಳನ್ನು ನೀಡುತ್ತಾ ಹಲವಾರು ಮೈಲಿಗಲ್ಲು ಸಾಧನೆ ಮಾಡಿದ್ದಾರೆ.


2008ರಲ್ಲಿ ಕಿತ್ತೂರು ರಾಣಿ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡಮಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸೇರಿದಂತೆ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಅನೇಕ ಬಯಲಾಟ ಹಾಗೂ ನಾಟಕಗಳಲ್ಲಿ ಅಭಿನಯಿಸಿದ್ದಾರೆ.


ಇದನ್ನೂ ಓದಿ-ಕಂಠಪೂರ್ತಿ ಕುಡಿದು ಫ್ಯಾಶನ್ ಡಿಸೈನರ್ ಪುತ್ರನ ರಂಪಾಟ : ಪೊಲೀಸರಿಗೆ ಆ್ಯಡಂ‌ ಬಿದ್ದಪ್ಪ ಅವಾಜ್ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.


Tiger Claw PendantTiger Claw Pendant Casebigg boss kannada 10