ಬೆಂಗಳೂರು : ವೈಯಕ್ತಿಕ ದ್ವೇಷದ ಕಾರಣದಿಂದ ಮಂಗಳವಾರ ಬೆಂಗಳೂರಲ್ಲಿ ನಡೆದಿದ್ದ ಡಬಲ್ ಮರ್ಡರ್ ಕೇಸ್ ಬೇರೆಯದ್ದೇ ಆಯಾಮ ಪಡೆದುಕೊಂಡಿದೆ. ಕಾಂಗ್ರೆಸ್‌ ಸರ್ಕಾರ ಬಂದ ಮೇಲಿಂದ ಟಾರ್ಗೆಟ್ ಕಿಲ್ಲಿಂಗ್ ಆಗುತ್ತಿದೆ ಎಂದು ಬಿಜೆಪಿ ನಾಯಕರ ಹೇಳಿಕೆ ಬೆನ್ನಲ್ಲೇ ಪೊಲೀಸ್ ಪಡೆ ಖಡಕ್ ಸೂಚನೆ ನೀಡಿದೆ. 


COMMERCIAL BREAK
SCROLL TO CONTINUE READING

ನಿನ್ನೆ ಡಬಲ್ ಮರ್ಡರ್ ಕೇಸ್‌ಗೆ ಹೊಸ ಟ್ವಿಸ್ಟ್ ಕೊಟ್ಟಿದ್ದ ಮಾಜಿ ಸಚಿವ ಸಿಟಿ ರವಿ, ರಾಷ್ಟ್ರೀಯ ಚಿಂತನೆಯಲ್ಲಿ ಇರುವವರ ಸರಣಿ ಸಾವು ಸಂಭವಿಸುತ್ತಿದೆ. ಕಾಂಗ್ರೆಸ್‌ ಸರ್ಕಾರ ಬಂದ ಬಳಿಕ ಟಾರ್ಗೆಟ್ ಕಿಲ್ಲಿಂಗ್ ಮಾಡಲಾಗಿದೆ ಎಂದು ದೂರಿದ್ದರು. 


ಇದನ್ನೂ ಓದಿ: ಚೀನಾ ಲೋನ್ ಆ್ಯಪ್‌ನವರ ಕಿರುಕುಳ: ಎಂಜಿನಿಯರಿಂಗ್‌ ವಿದ್ಯಾರ್ಥಿ ಆತ್ಮಹತ್ಯೆ!


ಸಿಟಿ ರವಿ ಹೇಳಿಕೆ ಬೆನ್ನಲ್ಲೇ ಟ್ವಿಟ್ ಮಾಡಿದ್ದ ಬಿಜೆಪಿ ಶಾಸಕ ಸುನೀಲ್, ರಾಜ್ಯದಲ್ಲಿ ಹಿಂದೂಗಳ ಹತ್ಯೆಯಾಗುತ್ತಿದೆ. ಟಿಪ್ಪು ಸಿದ್ಧಾಂತಗಳಿಂದ ಕರ್ನಾಟಕಕ್ಕೆ ಅಪಾಯಕಾರಿ ಸ್ಥಿತಿ ಬಂದೊದಗಿದೆ ಎಂದು ಆರೋಪಿಸಿದ್ದರು. ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ, ಹಿಂದೂ ನಾಯಕನ ಹತ್ಯೆ ಆಗಿದೆ ಎಂದು ಟ್ವಿಟ್ ಮಾಡಿದ್ದರು.


ಪೌರ ಕಾರ್ಮಿಕರನ್ನು ಖಾಯಂಗೊಳಸಿ -ಪೌರಕಾರ್ಮಿಕರ ಮಹಾ ಸಂಘ ಆಗ್ರಹ 


ಇಂತಹ ಸುಳ್ಳು ಸುದ್ದಿಗಳನ್ನು ಹಬ್ಬಿಸಬೇಡಿ. ಸೂಕ್ಷ್ಮ ವಿಚಾರವನ್ನು ಹಂಚಿಕೊಳ್ಳುವಾಗ ಎಚ್ಚರಿಕೆಯಿಂದ ಇರಿ, ಈ ಪ್ರಕರಣದ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ತನಿಖೆ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಸೂಚನೆ ರವಾನಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.