ದಾವಣಗೆರೆ: ಇಲ್ಲಿನ ವಿನೋಬನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇಲ್ಲಿ ಸುಮಾರು 10 ರಿಂದ 15 ನಾಯಿಗಳಿದ್ದು, ರಸ್ತೆಯಲ್ಲಿ ಬರುತ್ತಿದ್ದಂತೆ ಜನರ ಮೇಲೆ ಎರಗುತ್ತಿವೆ. ಕೆಲವರನ್ನು ಈಗಾಗಲೇ ಕಚ್ಚಿ ಗಾಯಗೊಳಿಸಿದ್ದು, ಮಕ್ಕಳನ್ನು ಮನೆಯಿಂದ ಹೊರಗೆ ಬಿಡಲು ಪೋಷಕರು ಹೆದರುತ್ತಿದ್ದಾರೆ.


COMMERCIAL BREAK
SCROLL TO CONTINUE READING

ಹಿಂಡು ಹಿಂಡಾಗಿ ಬರುವ ನಾಯಿಗಳು ರಸ್ತೆಯಲ್ಲಿ ಹೋಗುವವರಿಗೆ ಕಚ್ಚಿ ಗಾಯಗೊಳಿಸುತ್ತಿವೆ. ಭಯದ ವಾತಾವರಣದಲ್ಲಿ ಜನರು ಕಾಲ ಕಳೆಯುವಂತಾಗಿದೆ. ಈಗಾಗಲೇ ಮಕ್ಕಳನ್ನು ಕಚ್ಚಿ ಗಾಯಗೊಳಿಸಿರುವ ನಾಯಿಗಳ ಕಾಟಕ್ಕೆ ಜನರು ಬೇಸತ್ತಿದ್ದಾರೆ. ಬೈಕ್ ಗಳ ಸೀಟ್ ಕವರ್ ಹಾಗೂ ಕಾರ್ ಗಳ ಕವರ್ ಗಳನ್ನು ಕಚ್ಚಿ ಹರಿದು ಹಾಕುತ್ತಿವೆ. ಆದಷ್ಟು ಬೇಗ ನಾಯಿಗಳನ್ನು ಹಿಡಿದು ಬೇರೆಡೆ ಸ್ಥಳಾಂತರ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: 35KM ಮೈಲೇಜ್ ನೀಡುವ 5 ಸೀಟರ್ ಕಾರು: ಅದ್ಭುತ ವೈಶಿಷ್ಟ್ಯದ ಜೊತೆ ಅತೀ ಕಡಿಮೆ ಬೆಲೆಯಲ್ಲಿ ಲಭ್ಯ- ಖರೀದಿಗೆ ಇದು ಬೆಸ್ಟ್ ಟೈಂ


ಶಾಲೆಗೆ ಹೋಗುವ ಮಕ್ಕಳು, ಕೆಲಸಕ್ಕೆ ಹೋಗುವ ಮಹಿಳೆಯರು, ಪುರುಷರೂ ಸಹ ರಸ್ತೆಯಲ್ಲಿ ನಾಯಿಗಳ ತೊಂದರೆಯಿಂದ ರಸ್ತೆಯಲ್ಲಿ ಹೋಗಲು ಭಯಪಡುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ಆದಷ್ಟು ಬೇಗ ಕ್ರಮ ತೆಗೆದುಕೊಳ್ಳಬೇಕು. ಮಕ್ಕಳನ್ನು ನಾಯಿಗಳು ಬೆನ್ನತ್ತಿಕೊಂಡು ಹೋಗುತ್ತಿರುವುದು ಆತಂಕ ಮತ್ತಷ್ಟು ಹೆಚ್ಚಾಗಲು ಕಾರಣವಾಗಿದೆ. ಮಹಾನಗರ ಪಾಲಿಕೆಯ ಅಧಿಕಾರಿಗಳು ಸಬೂಬು ಹೇಳದೇ ಆದಷ್ಟು ಬೇಗ ನಾಯಿಗಳನ್ನು ಬೇರೆಡೆ ಸ್ಥಳಾಂತರ ಮಾಡಬೇಕು.


ಇದನ್ನೂ ಓದಿ: 15ನೇ ವಯಸ್ಸಿಗೆ ಓಡಿ ಹೋದ ಕಿರುತೆರೆಯ ಖ್ಯಾತ ನಟಿ.. ಮದುವೆಗೂ ಮುನ್ನ ಪ್ರೆಗ್ನೆಂಟ್!!


ಮಹಾನಗರ ಪಾಲಿಕೆ ಕೂಡಲೇ ಈ ನಾಯಿಗಳನ್ನು ಸ್ಥಳಾಂತರ ಮಾಡಬೇಕು,  ಮಾಡದಿದ್ದರೆ ಮತ್ತಷ್ಟು ಸಮಸ್ಯೆ ಹೆಚ್ಚಾಗಲಿದೆ. ಪರಿಸ್ಥಿತಿ ಗಂಭೀರಕ್ಕೆ ಹೋದ ಮೇಲೆ ಎಚ್ಚೆತ್ತುಕೊಳ್ಳುವುದಕ್ಕಿಂತ ಆದಷ್ಟು ಬೇಗ ಈ ಸಮಸ್ಯೆಯಿಂದ ಮುಕ್ತಿ ಕೊಡಿ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ