ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ ಸಹಾಯಧನ ಶೇ.50 ಕ್ಕೆ ಏರಿಕೆ

ಪ್ರಧಾನ ಮಂತ್ರಿಗಳ ಆತ್ಮನಿರ್ಭರ ಭಾರತ ಯೋಜನೆಯನ್ವಯ ಒಂದು ಜಿಲ್ಲೆ ಒಂದು ಉತ್ಪನ್ನ (ODOP) ಆಧರಿಸಿ ಕಿರು ಆಹಾರ ಉದ್ಯಮಗಳನ್ನು ಸ್ಥಾಪಿಸಲು ಉತ್ತೇಜನ ನೀಡಲಾಗುತ್ತಿದೆ.ಈ ಯೋಜನೆಯಡಿ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯವಿದೆ.ಈವರೆಗೆ ಶೇ. 35 ರಷ್ಟಿದ್ದ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆ.

Last Updated : Jan 21, 2022, 12:43 AM IST
  • ಪ್ರಧಾನ ಮಂತ್ರಿಗಳ ಆತ್ಮನಿರ್ಭರ ಭಾರತ ಯೋಜನೆಯನ್ವಯ ಒಂದು ಜಿಲ್ಲೆ ಒಂದು ಉತ್ಪನ್ನ (ODOP) ಆಧರಿಸಿ ಕಿರು ಆಹಾರ ಉದ್ಯಮಗಳನ್ನು ಸ್ಥಾಪಿಸಲು ಉತ್ತೇಜನ ನೀಡಲಾಗುತ್ತಿದೆ.
  • ಈ ಯೋಜನೆಯಡಿ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯವಿದೆ.ಈವರೆಗೆ ಶೇ. 35 ರಷ್ಟಿದ್ದ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆ.
ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಥಾಪನೆ ಸಹಾಯಧನ ಶೇ.50 ಕ್ಕೆ ಏರಿಕೆ  title=

ಬೆಂಗಳೂರು: ಪ್ರಧಾನ ಮಂತ್ರಿಗಳ ಆತ್ಮನಿರ್ಭರ ಭಾರತ ಯೋಜನೆಯನ್ವಯ ಒಂದು ಜಿಲ್ಲೆ ಒಂದು ಉತ್ಪನ್ನ (ODOP) ಆಧರಿಸಿ ಕಿರು ಆಹಾರ ಉದ್ಯಮಗಳನ್ನು ಸ್ಥಾಪಿಸಲು ಉತ್ತೇಜನ ನೀಡಲಾಗುತ್ತಿದೆ.ಈ ಯೋಜನೆಯಡಿ 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯವಿದೆ.ಈವರೆಗೆ ಶೇ. 35 ರಷ್ಟಿದ್ದ ಸಹಾಯಧನವನ್ನು ಶೇ. 50 ಕ್ಕೆ ಹೆಚ್ಚಿಸಲಾಗಿದೆ.

ಪ್ರಧಾನ ಮಂತ್ರಿ ಆತ್ಮ ನಿರ್ಭರ ಯೋಜನೆಯಡಿ ಕೇಂದ್ರ ಸರ್ಕಾರವು ನೀಡುವ ಶೇ.35 ರ ಸಹಾಯಧನದ ಜೊತೆಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಆಯವ್ಯಯ ಭಾಷಣದಲ್ಲಿ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದ  ಶೇ.15 ರಷ್ಟು ಸಹಾಯಧನವನ್ನು ನೀಡುವದಾಗಿ ಘೋಷಿಸಿದ್ದರು.

ಇದನ್ನೂ ಓದಿ: ಯಾರೋ ಮಿಸ್ ಗೈಡ್ ಮಾಡಿದ್ದಾರೆ, ಯಾವ ಗಲಾಟೆನೂ ಇಲ್ಲ, ಏನು ಇಲ್ಲ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ

ಇದರನ್ವಯ ಸರ್ಕಾರದ ಪರಿಷ್ಕøತ ಮಾರ್ಗಸೂಚಿ ಬಿಡುಗಡೆಯಾಗಿದೆ. ಪ್ರಸ್ತುತ ಯೋಜನೆಯಡಿಯಲ್ಲಿ ಕಿರು ಉದ್ಯಮಗಳನ್ನು ಸ್ಥಾಪಿಸಲು ಇಚ್ಚಿಸುವ ಫಲಾನುಭವಿಗಳಿಗೆ ಈಗಿರುವ ಶೇ.35 ರ ಸಹಾಯಧನದ ಬದಲಾಗಿ ಶೇ.50 ರಷ್ಟು ಒಟ್ಟು ಸಾಲ ಸಂಪರ್ಕಿತ ಸಹಾಯಧನ ಸಿಗಲಿದೆ.

ವೈಯಕ್ತಿಕ ಕಿರು ಆಹಾರ ಸಂಸ್ಕರಣಾ ಘಟಕಗಳು, ರೈತ ಉತ್ಪಾದಕ ಕಂಪನಿಗಳು (ಎಫ್.ಪಿ.ಓ.), ಸ್ವಸಹಾಯ ಸಂಘಗಳು (ಎಸ್.ಎಚ್.ಜಿ.), ಸಹಕಾರ ಸಂಘಗಳು ಅಲ್ಲದೇ ಸಾಮಾನ್ಯ ಮೂಲಭೂತ ಸೌಕರ್ಯ, ಬ್ರ್ಯಾಂಡಿಂಗ್ ಮತ್ತು ಮಾರುಕಟ್ಟೆ ಬೆಂಬಲ ಚಟುವಟಿಕೆಗಳಿಗೆ ಸಾಲ ನೀಡುವ ಯೋಜನೆ ಇದಾಗಿದೆ.  ಜಿಲ್ಲೆಯ ಫಲಾನುಭವಿಗಳು ಇದರ ಲಾಭ ಪಡೆಯಬೇಕು.

ಒಂದು ಜಿಲ್ಲೆ ಒಂದು ಉತ್ಪನ್ನ ಆಧಾರದಲ್ಲಿ ಧಾರವಾಡ ಜಿಲ್ಲೆಗೆ ಮಾವು ಬೆಳೆಯನ್ನು ಸೂಚಿಸಲಾಗಿದೆ.ಅರ್ಹ ಫಲಾನುಭವಿಗಳು ಹೊಸದಾಗಿ ಮಾವು ಆಧಾರಿತ ಉದ್ಯಮಗಳನ್ನು ಸ್ಥಾಪಿಸಬಹುದಾಗಿದೆ. ಇದರ ಜೊತೆಗೆ ಈಗಾಗಲೇ ಅಸ್ತಿತ್ವದಲ್ಲಿರುವ ಇತರೆ ಅಸಂಘಟಿತ ಕಿರುಆಹಾರ ಘಟಕಗಳ ಉನ್ನತೀಕರಣಕ್ಕಾಗಿ ಕೂಡಾ ಯೋಜನಾ ವೆಚ್ಚವನ್ನು ಆಧರಿಸಿ ಸಹಾಯಧನದೊಂದಿಗೆ ಬ್ಯಾಂಕ್ ಸಾಲವನ್ನು ನೀಡಲಾಗುವುದು.

ಯೋಜನೆಯಡಿಯಲ್ಲಿ ಸಾಲ ಪಡೆಯಲು ಭಾರತ ಸರ್ಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಮಂತ್ರಾಲಯ (MOFPI)  ಪೋರ್ಟಲ್‍ನಲ್ಲಿ ಆನ್‍ಲೈನ ಅರ್ಜಿ ಸಲ್ಲಿಸಬೇಕಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೃಷಿ ಇಲಾಖೆಯು ನೇಮಿಸಿರುವ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳು (ಡಿ.ಆರ್.ಪಿ.) ಮಾರ್ಗದರ್ಶನ ನೀಡುತ್ತಾರೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆ: ಬಂದೋಬಸ್ತ್ ನಲ್ಲಿದ್ದ 42 ಕೆಎಸ್​ಆರ್​ಪಿ ಸಿಬ್ಬಂದಿಗೆ ​ಕೊರೊನಾ ದೃಢ

ಫಲಾನುಭವಿಗಳ ದಾಖಲೆಗಳ ಕ್ರೋಢೀಕರಣವೂ ಸೇರಿದಂತೆ ವಿಸ್ತøತ ಯೋಜನೆ ವರದಿ ತಯಾರಿಕೆ ಹಾಗೂ ಇತರೆ ತಾಂತ್ರಿಕ ಮಾರ್ಗದರ್ಶನವನ್ನು ಬಂಡೇರಾವ್ ಪಟವಾರಿ-944848735, ಪ್ರಿಯಾ ಕಿವಡಸಣ್ಣವರ-9060202709, ಸಂತೋಷ ಸವದತ್ತಿ-9620902750, ಕೆ.ಎಫ್.ಉದೋಜಿ-9035774929 ಡಿ.ಆರ್.ಪಿ.ಗಳಿಂದ ಪಡೆಯಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News