ಬೆಂಗಳೂರು: ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಮಂಡ್ಯದಿಂದ ಮಾತ್ರ ಎಂದು ಸ್ಪಷ್ಟವಾಗಿ ಹೇಳಿರುವ ಸುಮಲತಾ ಅಂಬರೀಶ್, ಒಂದು ವೇಳೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದಿದ್ದರೆ, ರಾಜಕೀಯದ ಬಗ್ಗೆ ತಮ್ಮ ಮುಂದಿನ ನಿರ್ಧಾರವನ್ನು ಮಾರ್ಚ್ 18ರಂದು ಪ್ರಕಟಿಸುವುದಾಗಿ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಅಲ್ಲದೆ, ರಾಜ್ಯಾದ್ಯಂತ ನಾನು ಕಾಂಗ್ರೆಸ್ ನಿಂದ ಟಿಕೆಟ್ ಸಿಗದ ಕಾರಣ ಬಿಜೆಪಿ ಸೇರುತ್ತಿದ್ದೇನೆ ಎಂಬ ವದಂತಿ ಎಲ್ಲೆಡೆ ಹಬ್ಬಿದೆ. ಈ ಬಗ್ಗೆ ಯಾರೂ ಕಿವಿಕೊಡಬೇಡಿ. ನಾನಾಗಿಯೇ ಯಾವುದೇ ವಿಚಾರವನ್ನು ತಿಳಿಸುವವರೆಗೂ ವದಂತಿಗಳನ್ನು ನಂಬಬೇಡಿ ಎಂದು ಸೋಮವಾರ ಮಂಡ್ಯದ ಬೆಳ್ಳೂರು ಕ್ರಾಸ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ತಿಳಿಸಿದರು.


ಇದೀಗ ರಾಜಕೀಯ ಚಟುವಟಿಕೆಗಳಿಗೆ ಸಂಬಂಧಪಟ್ಟಂತೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದ ಖಾತೆ 'ಫೇಸ್ ಬುಕ್ ಪೋಸ್ಟ್' ಮೂಲಕ ಸ್ಪಷ್ಟನೆ ನೀಡಿದ್ದಾರೆ.


ಆತ್ಮೀಯ/ಮಾನ್ಯ ಮಂಡ್ಯ ಜನರಲ್ಲಿ ಒಂದು ಮನವಿ. 
ಮಂಡ್ಯ ಜನರ ಋಣ ತೀರಿಸಲು ನಾನು ಬದ್ದಳಾಗಿರುವೆ.
ಮಂಡ್ಯ ಜನರನ್ನು ದಿಕ್ಕು ತಪ್ಪಿಸಲು ಕೆಲವು ಪಟ್ಟಭದರ ಹಿತಾಸಕ್ತಿಗಳು ಕುತಂತ್ರ ಮಾಡುತ್ತಿದ್ದಾರೆ.
ಇನ್ನು ಮುಂದೆ ಯಾವುದೇ ಊಹಾಪೋಹದ ಗಾಳಿ ಸುದ್ದಿಗೆ ಕಿವಿಗೊಡಬೇಡಿ.
ನಿಮ್ಮ ಬೆಂಬಲ ಮತ್ತು ಆಶೀರ್ವಾದ ಸದಾ ನನ್ನೊಂದಿಗಿರಲಿ ಎಂದು ಈ ಮೂಲಕ ತಮ್ಮಲ್ಲಿ ನಾನು ಕೇಳಿಕೊಳ್ಳುತ್ತಿದ್ದೇನೆ. 
ನಿಮ್ಮ ಪ್ರೀತಿ, ಕಾಳಜಿ, ಒತ್ತಾಸೆ ಬೆಂಬಲಗಳೇ ನಮಗೆ ಶ್ರೀರಕ್ಷೆ.
ಅಂಬಿ ಅಮರ


ಇಂತಿ ನಿಮ್ಮ
-ಸುಮಲತಾ ಅಂಬರೀಶ್

 https://m.facebook.com/story.php?story_fbid=570525560091340&id=569016366908926


ಇದಲ್ಲದೆ, ಇನ್ನು ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಫೇಸ್ ಬುಕ್ ಟ್ವಿಟ್ಟರ್ ನಲ್ಲಿ ನಾನು ನಿಮ್ಮ ಜೊತೆ ನಿರಂತರವಾಗಿ ಸಂಪರ್ಕದಲ್ಲಿರುತ್ತೇನೆ. ಇದು ನನ್ನ ಅಧಿಕೃತ ಪೇಜ್ ಎಂದು ಅವರು ಮತ್ತೊಂದು ಪೋಸ್ಟ್ ಮಾಡಿದ್ದಾರೆ.