ನವ ದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದ ಆರೋಪಿಯಾಗಿದ್ದ ಮಾಜಿ ಸಚಿವ ಜರ್ನಾಧನ ರೆಡ್ಡಿ ಜಾಮೀನು ಷರತ್ತುಗಳನ್ನು ಸಡಿಲಿಸುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. 


COMMERCIAL BREAK
SCROLL TO CONTINUE READING

ಜನಾರ್ದನ ರೆಡ್ಡಿ ಬಳ್ಳಾರಿಗೆ ತೆರೆಳಲು ಅವಕಾಶ ಮಾಡಿಕೊಡುವಂತೆ ಕೋರಿ ಸುಪ್ರೀಂಕೋರ್ಟ್ ಗೆ ಮನವಿ ಮಾಡಿ ರೆಡ್ಡಿ ಅರ್ಜಿ ಸಲ್ಲಿಸಿದ್ದರು. 


ಆದರೆ ಇಂದು ಸುಪ್ರೀಂಕೋರ್ಟ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಹಿನ್ನೆಲೆಯಲ್ಲಿ ಜಾಮೀನು ಷರತ್ತುಗಳು‌ ಮುಂದುವರಿದಿದ್ದು, ಜಾಮೀನು ನೀಡುವಾಗ ಬಳ್ಳಾರಿಗೆ ತೆರಳದಂತೆ ವಿಧಿಸಿದ್ದ ಷರತ್ತು ಸಹ ಮುಂದುವರೆದಿದೆ.