ಶಿವರಾಮ ಕಾರಂತ್ ಬಡಾವಣೆಯ 47 ಕಟ್ಟಡಗಳು ಸಕ್ರಮ: ಸುಪ್ರೀಂ ಕೋರ್ಟ್‌ ಆದೇಶ

ಡಾ. ಶಿವರಾಮ ಕಾರಂತ್ ಬಡಾವಣೆ ಕುರಿತು ಭಾರತ ಸರ್ವೋಚ್ಛ ನ್ಯಾಯಾಲಯ ರಚಿಸಿರುವ ಸಮಿತಿ ಸಲ್ಲಿಸಿದ್ದ 26 ನೇ ವರದಿಯನ್ನು ಅಂಗೀಕರಿಸಿರುವ ಮಾನ್ಯ ಸರ್ವೋಚ್ಛ ನ್ಯಾಯಾಲಯ ಈವರೆಗೆ ಒಟ್ಟು 4,985 ಕಟ್ಟಡಗಳನ್ನು ಮಾನ್ಯ ಮಾಡಿದೆ.   

Written by - Manjunath Hosahalli | Edited by - Zee Kannada News Desk | Last Updated : Nov 22, 2022, 06:12 PM IST
  • ಶಿವರಾಮ ಕಾರಂತ್ ಬಡಾವಣೆಯ 47 ಕಟ್ಟಡಗಳು ಸಕ್ರಮ
  • ಸರ್ವೋಚ್ಛ ನ್ಯಾಯಾಲಯದ ಆದೇಶ
ಶಿವರಾಮ ಕಾರಂತ್ ಬಡಾವಣೆಯ 47 ಕಟ್ಟಡಗಳು ಸಕ್ರಮ: ಸುಪ್ರೀಂ ಕೋರ್ಟ್‌ ಆದೇಶ title=
ಸರ್ವೋಚ್ಛ ನ್ಯಾಯಾಲಯ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ್ ಬಡಾವಣೆಯ ವ್ಯಾಪ್ತಿಯ 47 ಕಟ್ಟಡಗಳನ್ನು ಸಕ್ರಮಗೊಳಿಸಿ ಸವೋಚ್ಛ ನ್ಯಾಯಾಲಯ  16-11-2022 ರಂದು ಆದೇಶ ಹೊರಡಿಸಿದೆ ಎಂದು ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿ ತಿಳಿಸಿದೆ.

ಇದನ್ನೂ ಓದಿ: Urfi Javed Video: ಗ್ಲಾಸ್‌ ಸ್ವಲ್ಪ ಸರಿದರೂ..! ಡ್ರೆಸ್ಸೇ ಇಲ್ಲದೆ ಇದೆಂಥಾ ಫ್ಯಾಷನ್?

ಡಾ. ಶಿವರಾಮ ಕಾರಂತ್ ಬಡಾವಣೆ ಕುರಿತು ಭಾರತ ಸರ್ವೋಚ್ಛ ನ್ಯಾಯಾಲಯ ರಚಿಸಿರುವ ಸಮಿತಿ ಸಲ್ಲಿಸಿದ್ದ 26 ನೇ ವರದಿಯನ್ನು ಅಂಗೀಕರಿಸಿರುವ ಮಾನ್ಯ ಸರ್ವೋಚ್ಛ ನ್ಯಾಯಾಲಯ ಈವರೆಗೆ ಒಟ್ಟು 4,985 ಕಟ್ಟಡಗಳನ್ನು ಮಾನ್ಯ ಮಾಡಿದೆ. 

ನಾಲ್ಕು ವಾರದೊಳಗಾಗಿ ಸಕ್ರಮಗೊಂಡ ಕಟ್ಟಡಗಳ ಮಾಲಿಕರಿಗೆ ಹಕ್ಕುಪತ್ರ ವಿತರಿಸಲು ಕ್ರಮಕೈಗೊಳ್ಳಬೇಕೆಂದು ಸರ್ವೋಚ್ಛ ನ್ಯಾಯಾಲಯವು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೂಚಿಸಿ ಆದೇಶಿಸಿದೆ ಎಂದು ಸಮಿತಿ ಪತ್ರಿಕಾ ಪ್ರಕಟಣೆ ನೀಡಿದೆ.

ಇದನ್ನೂ ಓದಿ :  ನಾಳೆ ಮಂಗಳೂರಿಗೆ ಗೃಹ ಸಚಿವರ ಭೇಟಿ, ಹಿರಿಯ ಅಧಿಕಾರಿಗಳ ಜೊತೆ ಸಭೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News