ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಸಿಎಂ ಗೆ ಸ್ವಾಮೀಜಿಗಳ ಮನವಿ

ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು,  ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ ಮುಖಂಡರುಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಮನವಿ ಅರ್ಪಿಸಿದರು.

Written by - Manjunath N | Last Updated : Jan 8, 2024, 06:12 PM IST
  • ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು ಗೌರವಿಸುತ್ತೇನೆ
  • ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಗಿಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು
  • ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ
ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಸಿಎಂ ಗೆ ಸ್ವಾಮೀಜಿಗಳ ಮನವಿ title=

ಬೆಂಗಳೂರು: ವಚನ ಚಳವಳಿಯ ಅಣ್ಣ ಬಸವಣ್ಣ ಅವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸುವಂತೆ ಒತ್ತಾಯಿಸಿ ತರಳಬಾಳು ಜಗದ್ಗುರುಗಳು ಮತ್ತು ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ನೇತೃತ್ವದ ಲಿಂಗಾಯತ ಸ್ವಾಮೀಜಿಗಳು, ಪ್ರಗತಿಪರ ಸ್ವಾಮೀಜಿಗಳು,  ಪ್ರಗತಿಪರ ಚಿಂತಕರು ಮತ್ತು ದಲಿತ, ರೈತ, ಕಾರ್ಮಿಕ ಮುಖಂಡರುಗಳ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿ ಮನವಿ ಅರ್ಪಿಸಿದರು.

ಇದನ್ನೂ ಓದಿ- "ಕಾಂಗ್ರೆಸ್‌ ಗ್ಯಾರಂಟಿಯಿಂದ ಆರ್ಥಿಕ ಬಲ; ಅಂಕಿ-ಅಂಶ ಬೇಕಿದ್ದರೆ ಕೇಳಿ ಪಡೆಯಿರಿ"

ನಿಯೋಗದಲ್ಲಿ ಶ್ರೀಶೈಲ ಜಗದ್ಗುರುಗಳು, ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಡಾ.ರಾಜಶೇಖರ ಶಿವಾಚಾರ್ಯರು, ಡಾ.ಜಗದ್ಗುರು ಚನ್ನಬಸವಾನಂದ ಸ್ವಾಮೀಜಿ, ಶ್ರೀ ವೀರಭದ್ರ ಶಿವಾ ಕಡಕಂಚಿ, ಅಕ್ಕ ಅನ್ನಪೂರ್ಣತಾಯಿ, ಜ್ಞಾನ ಪ್ರಕಾಶ ಸ್ವಾಮೀಜಿ, ಡಾ.ಗಂಗಾಬಿಕೆ ಅಕ್ಕ,‌ ಮಾದಾರ ಚನ್ನಯ್ಯ ಸ್ವಾಮೀಜಿ ಸೇರಿ 48 ಮಂದಿ ಸ್ವಾಮೀಜಿಗಳು, ಶರಣರು ನಿಯೋಗದಲ್ಲಿದ್ದ  ಪ್ರಮುಖರು.

ಇದೆ ವೇಳೆ ಮಾತನಾಡಿದ ಸಿಎಂ "ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಅಥವಾ ರಾಯಭಾರಿಯನ್ನಾಗಿಸಬೇಕು ಎನ್ನುವ ಒಕ್ಕೊರಲ ಒತ್ತಾಯವನ್ನು ಗೌರವಿಸುತ್ತೇನೆ. ವೈಯುಕ್ತಿಕವಾಗಿ ನನಗೆ ಈ ಘೋಷಣೆ ಬಗ್ಗೆ ತಕರಾರಿಲ್ಲ. ಈ ಬಗ್ಗೆ ಕ್ಯಾಬಿನೆಟ್ ನಲ್ಲಿ ಚರ್ಚೆಗಿಟ್ಟು ತೀರ್ಮಾನ ತೆಗೆದುಕೊಳ್ಳಲಾಗುವುದು.ಬಸವಾದಿ ಶರಣರ ಆಶಯಗಳೆಲ್ಲಾ ನಮ್ಮ ಸಂವಿಧಾನದಲ್ಲಿವೆ. ವಚನ ಮತ್ತು ಸಂವಿಧಾನದ ಧ್ಯೇಯೋದ್ದೇಶಗಳು ಒಂದೇ ಆಗಿವೆ. ಆದ್ದರಿಂದ ಈ ಮಹತ್ವದ ಸಂಗತಿಯನ್ನು ಕ್ಯಾಬಿನೆಟ್ ಮುಂದೆ ಇಟ್ಟು ತೀರ್ಮಾನಿಸಲಾಗುವುದು" ಎಂದು ಭರವಸೆ ನೀಡಿದರು.

ಇದನ್ನೂ ಓದಿ- ರೈತರಿಗೆ ವರವಾಗದೆ ಶಾಪವಾದ ಉಗಾರ ಶುಗರ್ ಪ್ಯಾಕ್ಟರಿ

ಸಚಿವರಾದ ಎಂ.ಬಿ.ಪಾಟೀಲ್, ಈಶ್ವರ ಖಂಡ್ರೆ ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಹಾಗೂ ಕ್ರೈಸ್ತ ಧರ್ಮ ಗುರುಗಳು, ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ವಲಯದಿಂದ ಎಸ್.ಜಿ.ಸಿದ್ದರಾಮಯ್ಯ, ಬಂಜಗೆರೆ ಜಯಪ್ರಕಾಶ್, ಎಚ್.ಎಲ್.ಪುಷ್ಪ, ಮಾವಳ್ಳಿ ಶಂಕರ್, ವಸುಂಧರ ಭೂಪತಿ, ಕೆ.ಷರೀಫಾ, ಎಲ್.ಮುಕುಂದರಾಜು, ಜಾಗೃತ ಕರ್ನಾಟಕದ ಬಿ.ಸಿ.ಬಸವರಾಜು, ದೊಡ್ಡಿಪಾಳ್ಯ ನರಸಿಂಹಮೂರ್ತಿ ಸೇರಿ ಹಲವು ಪ್ರಮುಖರು ನಿಯೋಗದ ಜೊತೆಗಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News