ಬಿಜೆಪಿ ಸರ್ಕಾರ ರಸ್ತೆಯ ಗುಂಡಿಗಳಿಗೆ ಜನರನ್ನು ಬಲಿ ಹಾಕುತ್ತಿದೆ: ಕಾಂಗ್ರೆಸ್ ಕಿಡಿ

‘ಸೂಪರ್ ಸಿಎಂ’ ಹಸ್ತಕ್ಷೇಪ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸರ್ಕಾರದಲ್ಲೂ ಮುಂದುವರೆದಿದೆಯೇ ಬಿಜೆಪಿ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.  

Written by - Zee Kannada News Desk | Last Updated : Oct 9, 2021, 12:23 PM IST
  • ಭ್ರಷ್ಟಾಚಾರದ ಗುಂಡಿಯೊಳಗೆ ಬಿದ್ದಿರುವ ಬಿಜೆಪಿ ಸರ್ಕಾರ ರಸ್ತೆಗುಂಡಿಗಳಿಗೆ ಜನರನ್ನು ಬಲಿ ಹಾಕುತ್ತಿದೆ
  • ಬಿಜೆಪಿ ಆಡಳಿತದಲ್ಲಿ ಯಾವ ಇಲಾಖೆಯೂ ಭ್ರಷ್ಟಾಚಾರದಿಂದ ಹೊರತಾಗಿಲ್ಲ
  • #VijyendraServiceTax ಇನ್ನೂ ಜಾರಿಯಲ್ಲಿದೆಯೇ? ಎಂದು ಬಿಜೆಪಿಗೆ ಕಾಂಗ್ರೆಸ್ ಪ್ರಶ್ನೆ
ಬಿಜೆಪಿ ಸರ್ಕಾರ ರಸ್ತೆಯ ಗುಂಡಿಗಳಿಗೆ ಜನರನ್ನು ಬಲಿ ಹಾಕುತ್ತಿದೆ: ಕಾಂಗ್ರೆಸ್ ಕಿಡಿ title=
ರಸ್ತೆ ಗುಂಡಿ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ

ಬೆಂಗಳೂರು: ಭ್ರಷ್ಟಾಚಾರದ ಗುಂಡಿಯೊಳಗೆ ಬಿದ್ದಿರುವ ಬಿಜೆಪಿ ಸರ್ಕಾರ (BJP government) ರಸ್ತೆಯ ಗುಂಡಿಗಳಿಗೆ ಜನರನ್ನು ಬಲಿ ಹಾಕುತ್ತಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ (Congress) ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿರುವ ಹೊಂಡಗಳು ಜನರ ಪಾಲಿಗೆ ಮೃತ್ಯು ಗುಂಡಿಗಳಾಗಿ ಪರಿಣಮಿಸಿವೆ.

Congress-12.jpg

ವಾಹನ ಸವಾರರು ರಸ್ತೆ ಗುಂಡಿ(Potholes Problems)ಗಳಿಗೆ ಬಿದ್ದು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಗುಂಡಿ ತಪ್ಪಿಸಲು ಹೋಗಿ ಬೆಂಗಳೂರಿನಲ್ಲಿ ಕಳೆದ 20 ದಿನಗಳಲ್ಲಿ ಮೂವರು ದ್ವಿಚಕ್ರ ವಾಹನ ಸವಾರರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.  

ಇದನ್ನೂ ಓದಿ: ಬಿ.ಸಿ.ಪಾಟೀಲ್ ವಿರುದ್ಧ ಭ್ರಷ್ಟಾಚಾರ ಆರೋಪ: ತನಿಖೆಗೆ ಕಾಂಗ್ರೆಸ್ ಆಗ್ರಹ!

‘ಬೆಂಗಳೂರು ಮಾತ್ರವಲ್ಲದೆ, ರಾಜ್ಯದಾದ್ಯಂತ ಪ್ರತಿದಿನವೂ ರಸ್ತೆ ಗುಂಡಿಗಳಿಂದಾಗಿ ಸಾವು ಸಂಭವಿಸುತ್ತಿದೆ. ಕೊರೊನಾ(CoronaVirus)ದಿಂದ ಕೊಂದಿದ್ದಾಯ್ತು, ಇನ್ನೂ ಅದೆಷ್ಟು ಬಗೆಯಲ್ಲಿ ಜನರನ್ನು ಕೊಲ್ಲಲು ಯೋಚಿಸಿದೆ ಈ ಬಿಜೆಪಿ ಸರ್ಕಾರ(BJP Govt.)’ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.

Congress-123.jpg

‘ಬಿಜೆಪಿ ಆಡಳಿತ(BJP Govt.)ದಲ್ಲಿ ಯಾವ ಇಲಾಖೆಯೂ ಭ್ರಷ್ಟಾಚಾರದಿಂದ ಹೊರತಾಗಿಲ್ಲ. ಅಬಕಾರಿ ಇಲಾಖೆಯ ಜ್ಯೇಷ್ಠತಾ ಪಟ್ಟಿಯ ಗೋಲ್ಮಾಲ್‌ ಸಚಿವರ ಗಮನಕ್ಕೆ ಬಂದಿಲ್ಲ ಎನ್ನುತ್ತಿದ್ದಾರೆ. ಹಾಗಾದರೆ #VijyendraServiceTax ಇನ್ನೂ ಜಾರಿಯಲ್ಲಿದೆಯೇ? ‘ಸೂಪರ್ ಸಿಎಂ’ ಹಸ್ತಕ್ಷೇಪ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ ಸರ್ಕಾರದಲ್ಲೂ ಮುಂದುವರೆದಿದೆಯೇ ಬಿಜೆಪಿ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.  

ಇದನ್ನೂ ಓದಿ: ಬಸವರಾಜ್ ಬೊಮ್ಮಾಯಿ ರಾಜ್ಯಕ್ಕೆ ‘ಅತಿಥಿ ಸಿಎಂ’ನಂತಾಗಿದ್ದಾರೆ: ಕಾಂಗ್ರೆಸ್ ಟೀಕೆ

ಮೋದಿಯವರ ನ್ಯೂ ಇಂಡಿಯಾದಲ್ಲಿ ಎಲ್ಲವೂ ಸಾಧ್ಯ

ತನ್ನ ಮತ್ತೊಂದು ಟ್ವೀಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ನೇತೃತ್ವದ ಕೇಂದ್ರ ಸರ್ಕಾರದ ಆಡಳಿತ ವೈಖರಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ. ‘ಮೋದಿಯವರ ನ್ಯೂ ಇಂಡಿಯಾದಲ್ಲಿ ಕೊಲೆ ಮಾಡಿದವರು ಸರ್ಕಾರದ ರಕ್ಷಣೆಯಲ್ಲಿ ತಪ್ಪಿಸಿಕೊಳ್ಳಬಹುದು, ಅತ್ಯಾಚಾರ ಮಾಡಿದವರು ರಾಜಾರೋಷವಾಗಿ ತಿರುಗಾಡಬಹುದು, ಭಯೋತ್ಪಾದಕರು ಸಂಸತ್ತಿನಲ್ಲಿ ಕೂರಬಹುದು, ಹಣವಂತರು ದೇಶವನ್ನೇ ಕೊಳ್ಳಬಹುದು, ಭ್ರಷ್ಟರು ತನಿಖೆ ಇಲ್ಲದೆ ಕ್ಲೀನ್ ಚಿಟ್ ಪಡೆಯಬಹುದು, ಆದರೆ ಅವರೆಲ್ಲರೂ ಬಿಜೆಪಿಯಲ್ಲಿರಬೇಕು ಅಷ್ಟೇ!’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News