ಓರಿಸ್ಸಾದಿಂದ ಬೆಂಗಳೂರಿಗೆ ಚಿಕಿತ್ಸೆಗೆ ಬಂದಿದ್ದ ಬಾಲಕ ಕಾಣೆ : ಮನಕಲಕುವಂತಿದೆ ಕುಟಂಬಸ್ಥರ ಗೋಳಾಟ

ಇತ್ತೀಚೆಗೆ ತಾಯಿಯೊಬ್ಬಳು ಸಿಲಿಕಾನ್ ಸಿಟಿಯ ಸಂಪಂಗಿರಾಮನಗರದಲ್ಲಿ 4ನೇಯ ಮಹಡಿಯಿಂದ ಬುದ್ಧಿಮಾಂದ್ಯ ಮಗುವನ್ನು ಎಸೆದು ತಾಯ್ತನಕ್ಕೆ ಅವಮಾನವಾಗುವ ಕೆಲಸ ಮಾಡಿದ್ಲು. ಆದರೆ ಈಗ ತಾಯಿಯ ಅಂತಃಕರಣ, ವಾತ್ಸಲ್ಯವನ್ನು ಎತ್ತಿ ಹಿಡಿಯುವ ಮನಮಿಡಿಯುವ ಪ್ರಸಂಗ ನಡೆದಿದೆ.

Written by - VISHWANATH HARIHARA | Last Updated : Aug 13, 2022, 04:06 PM IST
  • ವಾತ್ಸಲ್ಯವನ್ನು ಎತ್ತಿ ಹಿಡಿಯುವ ಮನಮಿಡಿಯುವ ಪ್ರಸಂಗ
  • ಒರಿಸ್ಸಾ ಮೂಲದ ಪೋಷಕರ, ಗೋಳಾಟ ಅಲೆದಾಟ ಹೇಳತೀರದಾಗಿದೆ
  • ಓರಿಸ್ಸಾ ಮೂಲದ ಪ್ರಸನ್ಜೀತ್ ದಾಸ್ (12) ಎನ್ನುವ ನಾಪತ್ತೆ
ಓರಿಸ್ಸಾದಿಂದ ಬೆಂಗಳೂರಿಗೆ ಚಿಕಿತ್ಸೆಗೆ ಬಂದಿದ್ದ ಬಾಲಕ ಕಾಣೆ : ಮನಕಲಕುವಂತಿದೆ ಕುಟಂಬಸ್ಥರ ಗೋಳಾಟ title=

ಬೆಂಗಳೂರು : ಇತ್ತೀಚೆಗೆ ತಾಯಿಯೊಬ್ಬಳು ಸಿಲಿಕಾನ್ ಸಿಟಿಯ ಸಂಪಂಗಿರಾಮನಗರದಲ್ಲಿ 4ನೇಯ ಮಹಡಿಯಿಂದ ಬುದ್ಧಿಮಾಂದ್ಯ ಮಗುವನ್ನು ಎಸೆದು ತಾಯ್ತನಕ್ಕೆ ಅವಮಾನವಾಗುವ ಕೆಲಸ ಮಾಡಿದ್ಲು. ಆದರೆ ಈಗ ತಾಯಿಯ ಅಂತಃಕರಣ, ವಾತ್ಸಲ್ಯವನ್ನು ಎತ್ತಿ ಹಿಡಿಯುವ ಮನಮಿಡಿಯುವ ಪ್ರಸಂಗ ನಡೆದಿದೆ.

ಚಿಕಿತ್ಸೆಗಾಗಿ ಕರೆತಂದಿದ್ದ ಬುದ್ಧಿಮಾಂದ್ಯ ಬಾಲಕ ನಾಪತ್ತೆಯಾಗಿದ್ದು, ಒರಿಸ್ಸಾ ಮೂಲದ ಪೋಷಕರ, ಗೋಳಾಟ ಅಲೆದಾಟ ಹೇಳತೀರದಾಗಿದೆ. ಅವರ ಕಣ್ಣೀರು ಎಂತಹ ಕಲ್ಲು ಹೃದಯದವರನ್ನೂ ಕರಗಿಸುವಂತಿದೆ.

ಇದನ್ನೂ ಓದಿ : BBMP Election : ರಾಜಕಾರಣಿಗಳಿಗೆ ಟಕ್ಕರ್ ಕೊಡಲು ರೌಡಿಶೀಟರ್ಸ್ ಪ್ಲಾನ್ : BBMPಯಲ್ಲಿ ಹಿಡಿತಕ್ಕೆ ಕ್ರಿಮಿನಲ್ ಗಳ ಸಿದ್ಧತೆ

ಓರಿಸ್ಸಾ ಮೂಲದ ಪ್ರಸನ್ಜೀತ್ ದಾಸ್ (12) ಎನ್ನುವ ನಾಪತ್ತೆಯಾಗಿರುವ ಬಾಲಕನಾಗಿದ್ದಾನೆ. ನಿಮಾನ್ಸ್ ನಲ್ಲಿ ಈತನ ಚಿಕಿತ್ಸೆಗಾಗಿ ಒರಿಸ್ಸಾದ ಬಾದ್ರಕ್ ನಿಂದ  ಪೋಷಕರು ಆಗಸ್ಟ್ 9ರಂದು ಬೆಂಗಳೂರಿಗೆ ಬಂದಿದ್ದರು.  ಸಿದ್ಧಾಪುರ ಠಾಣಾ ವ್ಯಾಪ್ತಿಯ ಎಸ್.ಎಸ್.ಲಾಡ್ಜ್ ನಲ್ಲಿ ರೂಮ್ ಮಾಡಿಕೊಂಡಿದ್ದರು. ನಿನ್ನೆ ರಾತ್ರಿ ರೂಮ್ ನಿಂದ ಬಾಲಕ ಏಕಾಏಕಿ ತಪ್ಪಿಸಿಕೊಂಡಿದ್ದು, ಬಾಲಕನನ್ನು ಹುಡುಕಿ ಕೊಡುವಂತೆ ಪೋಷಕರು ಪೊಲೀಸ್ ಆಯುಕ್ತರ ಕಚೇರಿಗೂ ಬಂದು ಅಳಲು ತೋಡಿಕೊಂಡಿದ್ದಾರೆ‌.

ಅಬ್ದುಲ್ ಎನ್ನುವ ಆಟೋ ಚಾಲಕನ ಸಹಾಯದಿಂದ ನಿನ್ನೆಯಿಂದ ಅಲೆಯುತ್ತಿದ್ದಾರೆ. ಬಾಲಕ ಯಾರಿಗಾದ್ರೂ ಕಂಡಲ್ಲಿ 8792559232 ನಂಬರಿಗೆ ಕರೆ ಮಾಡುವಂತೆ ಕುಟುಂಬಸ್ಥರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಯಾದಗಿರಿಯಲ್ಲಿ ಗಾಂಜಾ ಘಾಟು; ಪಾನ್-ಬೀಡಾ ಅಂಗಡಿಗಳಲ್ಲಿ ಗಾಂಜಾ ಜಾಕಲೇಟ್ ಮಾರಾಟ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News