ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ತನ್ನ ಅಧಿಕೃತ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ನಿಟ್ಟಿನಲ್ಲಿ ಇಂದು ನಗರದ ವಿಕಾಸ ಸೌಧದಲ್ಲಿ ಕೇಂದ್ರ ಚುನಾವಣಾ ಆಯೋಗದ ಉಪನಿರ್ದೇಶಕರಿಂದ ಸಭೆ ನಡೆಸಲಾಗುತ್ತಿದೆ. 


COMMERCIAL BREAK
SCROLL TO CONTINUE READING

ರಾಜ್ಯದ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ರಾಜ್ಯದ ಎಲ್ಲಾ ಎಸ್ಪಿ ಮತ್ತು ಡಿಸಿಗಳ ಜೊತೆ ಸಭೆ ನಡೆಯಲಿದ್ದು, ಪ್ರತೀ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಜೊತೆ ಪ್ರತ್ಯೇಕ ಸಭೆ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. 


ವಿಕಾಸಸೌಧದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಇಂದು ಸಂಜೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಡಿಜಿಪಿ ಜೊತೆ ಸಭೆ ನಡೆಯಲಿದೆ. 


ಸೋಮವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ  ಖಾಸಗಿ ಸಂಜೀವ್ ಕುಮಾರ್ ಮತ್ತು ಇತರ ಅಧಿಕಾರಿಗಳು ಖಾಸಗಿ ಹೋಟೆಲ್ ಒಂದರಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಮತ್ತು ಆಡಳಿತ ವಿಭಾಗದ ಪೊಲೀಸ್ ಎಡಿಜಿಪಿ ಜೊತೆ ಸಭೆ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ.


ಈ ಸಭೆಯು ಮುಂಬರುವ ಚುನಾವಣೆಯ ರೂಪುರೇಷೆಗಳ ದೃಷ್ಟಿಯಿಂದ ಬಹಳ ಮಹತ್ವದ ಪಾತ್ರ ವಹಿಸಿದೆ.