ನವದೆಹಲಿ: ಬಡತನದ ರೇಖೆಗಿಂತ ಕೆಳಗಿರುವ ಜನರಿಗೆ ಒದಗಿಸಲು 1.35 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ನೀಡಲು ನಾವು ವಿನಂತಿಸಿದ್ದೇವೆ, ಆದರೆ ಕೇಂದ್ರ ಆಹಾರ ಸಚಿವರು ಅಕ್ಕಿಯನ್ನು ನೀಡಲು ನಿರಾಕರಿಸಿರುತ್ತಾರೆ ಎಂದು ರಾಜ್ಯ ಆಹಾರ ಸಚಿವರಾದ ಕೆ ಎಚ್ ಮುನಿಯಪ್ಪ ರವರು ದೆಹಲಿಯಲ್ಲಿ ಇಂದು ತಿಳಿಸಿದರು.


COMMERCIAL BREAK
SCROLL TO CONTINUE READING

ಇಂದು ದೆಹಲಿಯಲ್ಲಿ ಕೇಂದ್ರ ಆರೋಗ್ಯ ಸಚಿವರಾದ Piyush Goyal ರವರನ್ನು ಭೇಟಿ ಮಾಡಿ ಕರ್ನಾಟಕ ರಾಜ್ಯದ ಅನ್ನಭಾಗ್ಯ ಯೋಜನೆಯ ಕುರಿತು ವಿವರಿಸಲಾಯಿತು, ಹಠಾತ್ತನೆ ಭಾರತ ಒಕ್ಕೂಟ ವ್ಯವಸ್ತೆಯ ಕೇಂದ್ರ ಸರ್ಕಾರ ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯನ್ನ (OMSS) ಸ್ಥಗಿತ ಗೊಳಿಸಿದ್ದರಿಂದ ಬಡವರಿಗೆ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಅನುಷ್ಠಾನಕ್ಕೆ ಭಾರಿ ಹೊಡೆತ ಬೀಳಲಿದೆ ಹಾಗೂ ಈ ಹಿಂದೆ ಇದ್ದ ಯೋಜನೆಯನ್ನು ಮುಂದುವರೆಸಬೇಕು ಎಂದು ಮನವಿ ಮಾಡಿಕೊಳ್ಳಲಾಯಿತು ನಮ್ಮ ಸರ್ಕಾರ ಹಣವನ್ನು ನೀಡಲು ತಯಾರಿದ್ದು ನಮಗೆ ಅಕ್ಕಿಯನ್ನು ನೀಡಬೇಕೆಂದು ಮನವಿ ಮಾಡಲಾಯಿತು. ಆದರೆ ಕೇಂದ್ರ ಸಚಿವರು 300 ಲಕ್ಷ ಟನ್  ಅಕ್ಕಿಯನ್ನು ಇತರೆ ವಿವಿಧ ಯೋಜನೆಗಳಿಗೆ ಮೀಸಲಿಡಲಾಗಿದೆ, ಆದ್ದರಿಂದ ರಾಜ್ಯಕ್ಕೆ ಅಕ್ಕಿ ನೀಡಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿರುತ್ತಾರೆ.ಆದರೆ ರಾಜ್ಯ ಸರ್ಕಾರವು ಅನ್ನಭಾಗ್ಯದ ಯೋಜನೆಯನ್ನು ಅನುಷ್ಠಾನಕ್ಕೆ ತರುತ್ತದೆ ಎಂದು ಕೆ ಎಚ್ ಮುನಿಯಪ್ಪ ರವರು ಸ್ಪಷ್ಟಪಡಿಸಿದ್ದಾರೆ.


ಇನ್ನೂ ಮುಂದುವರೆದು ಮಾತನಾಡಿದ ಅವರು ಈ ನಿಲುವು ಬಡವರ ವಿರೋಧಿಯಾಗಿದೆ ಹಾಗೂ ರಾಜಕೀಯ ಪ್ರೇರಿತವಾಗಿದೆ ಎಂದು ಖಂಡಿಸುತ್ತೇನೆ.ಎಷ್ಟೇ ಅಡೆ ತಡೆಗಳಾದರು ನಾವು ಅನ್ನಭಾಗ್ಯ ಯೋಜನೆಯನ್ನು ಅನುಷ್ಠಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.