ಈಶ್ವರಪ್ಪನವರ ಬಳಿ ತನ್ನ ಆಟೋ ಜಖಂ ಆಗಿರುವ ಬಗ್ಗೆ ಅಳಲು ತೋಡಿಕೊಂಡ ಚಾಲಕ

  ನಿನ್ನೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಕಚೇರಿ ಬಳಿ ಆಟೋದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ, ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ಈಶ್ವರಪ್ಪನವರ ಬಳಿ ತನ್ನ ಆಟೋ ಜಖಂ ಮಾಡಿದ್ದು ಹಾಗೂ ತನಗೆ ಹಲ್ಲೆ ಮಾಡಿದ್ದರ ಬಗ್ಗೆ ಅಳಲು ತೋಡಿಕೊಂಡಿದ್ದ. 

Written by - Zee Kannada News Desk | Last Updated : May 16, 2023, 05:36 PM IST
  • ಈ ಮಧ್ಯೆ ಈ ಘಟನೆ ರಾಜಕೀಯವಾಗಿ ವಿವಾಧ ಪಡೆದುಕೊಳ್ಳಲು ಆರಂಭಿಸಿತು.
  • ಅತ್ತ ಸತ್ಯಾಸತ್ಯತೆಯನ್ನು ಪರೀಕ್ಷಿಸಲು ಕಾಂಗ್ರೆಸ್​ ಮುಖಂಡರು ಮುಂದಾದರು.
  • ಇನ್ನೊಂದೆಡೆ 'ಬಿಜೆಪಿಗೆ ಮತ ಹಾಕಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದಿದ್ದ ಆಟೋ ಚಾಲಕ, ಹಲ್ಲೆ ಮಾಡಿದ ಆರೋಪಿಗಳ ಜೊತೆ ಸಂಧಾನ ಮಾಡಿಕೊಂಡಿದ್ದ
ಈಶ್ವರಪ್ಪನವರ ಬಳಿ ತನ್ನ ಆಟೋ ಜಖಂ ಆಗಿರುವ ಬಗ್ಗೆ ಅಳಲು ತೋಡಿಕೊಂಡ ಚಾಲಕ title=
screengrab

ಶಿವಮೊಗ್ಗ:  ನಿನ್ನೆ ಶಿವಮೊಗ್ಗ ಎಸ್​ಪಿ ಮಿಥುನ್ ಕುಮಾರ್  ಕಚೇರಿ ಬಳಿ ಆಟೋದಲ್ಲಿ ಬಂದಿದ್ದ ವ್ಯಕ್ತಿಯೊಬ್ಬ, ಅದೇ ಸಂದರ್ಭದಲ್ಲಿ ಅಲ್ಲಿಗೆ ಬಂದಿದ್ದ ಈಶ್ವರಪ್ಪನವರ ಬಳಿ ತನ್ನ ಆಟೋ ಜಖಂ ಮಾಡಿದ್ದು ಹಾಗೂ ತನಗೆ ಹಲ್ಲೆ ಮಾಡಿದ್ದರ ಬಗ್ಗೆ ಅಳಲು ತೋಡಿಕೊಂಡಿದ್ದ. 

ಬಿಜೆಪಿಗೆ ಏಕೆ ವೋಟು ಹಾಕಿದೆ ಎಂದು ಹಲ್ಲೆ ಮಾಡಿದ್ದಾಗಿ ಆತ ತಿಳಿಸಿದ್ದ.ಇನ್ನೂ ಈ ವೇಳೆ ಆಟೋ ಜಖಂ ಆಗಿದ್ಯಲ್ಲಾ ಅದಕ್ಕೆ ಇನ್ಸುರೆನ್ಸ್​ ಬರುತ್ತಾ ಎಂದು ಪ್ರಶ್ನಿಸಿದ ಕೆ.ಎಸ್​.ಈಶ್ವರಪ್ಪ ಆತನಿಗೆ ಸ್ವಲ್ಪ ದುಡ್ಡುಕೊಟ್ಟು ಇದನ್ನ ಇಟ್ಕೊ, ಆಟೋ ರೀಪೇರಿ ಮಾಡಿಸಿಕೋ ಎಂದಿದ್ದರು. 

ಅಲ್ಲದೆ ಘಟನೆ ಬಗ್ಗೆ ಎಸ್​ಪಿ ಮಿಥುನ್ ಕುಮಾರ್​ರವರಿಗೆ ಕರೆ ಮಾಡಿ ತಿಳಿಸಿದ ಈಶ್ವರಪ್ಪ, ಈತನ ಬಗ್ಗೆ ವಿಚಾರಿಸಿ ಎಂದಾಗ, ಎಸ್​ಪಿಯುವರು ತಮ್ಮ ಕಚೇರಿಗೆ ಆತನನ್ನು ಕಳುಹಿಸುವಂತೆ ತಿಳಿಸಿದ್ದರು.  

ಮೊದಲು ಆರೋಪ ನಂತರ ಸಂಧಾನ

ಈ ಮಧ್ಯೆ ಈ ಘಟನೆ ರಾಜಕೀಯವಾಗಿ ವಿವಾಧ ಪಡೆದುಕೊಳ್ಳಲು ಆರಂಭಿಸಿತು.ಅತ್ತ ಸತ್ಯಾಸತ್ಯತೆಯನ್ನು ಪರೀಕ್ಷಿಸಲು ಕಾಂಗ್ರೆಸ್​ ಮುಖಂಡರು ಮುಂದಾದರು. ಇನ್ನೊಂದೆಡೆ  'ಬಿಜೆಪಿಗೆ ಮತ ಹಾಕಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದಿದ್ದ ಆಟೋ ಚಾಲಕ, ಹಲ್ಲೆ ಮಾಡಿದ ಆರೋಪಿಗಳ ಜೊತೆ ಸಂಧಾನ ಮಾಡಿಕೊಂಡಿದ್ದ 

ಕೋಮುಬಣ್ಣಕ್ಕೆ ರಾಜಕೀಯದ ಸುಣ್ಣ

ಅನ್ಯಧರ್ಮದವರ ನಡುವೆ ನಡೆದ ಗಲಾಟೆಯಾದ್ದರಿಂದ, ಘಟನೆ ಬೇರೆಯದ್ದೆ ಸ್ವರೂಪ ಪಡೆದುಕೊಳ್ಳುವ ಸಾದ್ಯತೆ ಇತ್ತು. ಆದರೆ ದೂರುದಾರನೇ ಕುಡಿದು ಬಂದಿದ್ದರಿಂದ ಪ್ರಕರಣ ಬೇರೆಯದ್ದೇ ಆಯಾಮ ಪಡೆದುಕೊಂಡಿತ್ತು.  

ಕುಡಿದು ಟೈಟಾಗಿ ಹಲ್ಲೆ

ಅಬ್ರಾರ್ ಮತ್ತು ನಜ್ರುಲ್ಲಾ ಎಂಬಿಬ್ಬರು ತಮ್ಮ ಮೇಲೆ ಹಲ್ಲೆ ಮಾಡಿದ್ರು ಎಂದಿದ್ದ ಆಟೋ ಚಾಲಕ, ಹರೀಶ್​ ಮೂವರು ಸ್ನೇಹಿತರೇ ಆಗಿದ್ದರು. ಮಧ್ಯಾಹ್ನ ಒಟ್ಟಿಗೆ ಎಣ್ಣೆ ಏರಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಜಗಳವಾಗಿದೆ ಹೊಡೆದಾಡಿಕೊಂಡಿದ್ಧಾರೆ. ಅಲ್ಲದೆ ಇದೇ ಕಾರಣಕ್ಕೆ ಹರೀಶನ ಆಟೋ ಜಖಂ ಮಾಡಿದ್ದಾರೆ.

ಎಸ್​ಪಿ ಎದುರು ಆರೋಪ, ಸ್ಟೇಷನ್​ನಲ್ಲಿ ರಾಜಿ

ಆನಂತರ ಹರೀಶ್​ ಎಸ್​ಪಿ ಕಚೇರಿ ಮುಂದೆ, ತನ್ನ ಗೋಳು ಹೇಳಿಕೊಂಡಿದ್ದ. ಅದರ ಬೆನ್ನಲ್ಲೆ ವಿನೋಬನಗರ ಪೊಲೀಸ್ ಸ್ಟೇಷನ್​ನಲ್ಲಿ ಆರೋಪಿಗಳೊಂದಿಗೆ ಸಂಧಾನ ಮಾಡಿಕೊಂಡಿದ್ದ. ಆರೋಪಿಗಳು ಸಹ ಈತನ ಆಟೋ ದುರಸ್ತಿ ಮಾಡಿಕೊಡುವುದಾಗಿ ಹೇಳಿದ್ದರಿಂದ ಪ್ರಕರಣ ರಾಜಿಯಾಗಿತ್ತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

Trending News