COVID-19 ಪ್ರಕರಣಗಳ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಶಾಲೆಗಳು ಬಂದ್ ಆಗಲಿವೆಯೇ?

ರಾಜ್ಯದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಈಗ ಪರೀಕ್ಷೆ ಮತ್ತು ಶಾಲೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

Written by - Zee Kannada News Desk | Last Updated : Dec 6, 2021, 04:45 PM IST
  • ರಾಜ್ಯದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಈಗ ಪರೀಕ್ಷೆ ಮತ್ತು ಶಾಲೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
 COVID-19 ಪ್ರಕರಣಗಳ ಹೆಚ್ಚಳದಿಂದಾಗಿ ರಾಜ್ಯದಲ್ಲಿ ಶಾಲೆಗಳು ಬಂದ್ ಆಗಲಿವೆಯೇ?   title=
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಈಗ ಪರೀಕ್ಷೆ ಮತ್ತು ಶಾಲೆಗಳನ್ನು ಸ್ಥಗಿತಗೊಳಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಸಚಿವ ಬಿ.ಸಿ.ನಾಗೇಶ್ ಅವರು 'ಪರೀಕ್ಷೆ ಮತ್ತು ಶಾಲೆಗಳನ್ನು ನಿಲ್ಲಿಸುವ ಅವಶ್ಯಕತೆ ಬಂದರೆ ನಾವು ಹಿಂದೆ ಸರಿಯುವುದಿಲ್ಲ, ಆದರೆ, ಪ್ರಸ್ತುತ ಪರಿಸ್ಥಿತಿಯಲ್ಲಿ, ಯಾವುದೇ ಸಮಸ್ಯೆ ಇಲ್ಲ ಎಂದು ಎಲ್ಲಾ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿಯನ್ನು ಸರ್ಕಾರವು ಸೂಕ್ಷ್ಮವಾಗಿ ಗಮನಿಸುತ್ತಿದೆ, ಯಾವುದೇ ರೀತಿಯಲ್ಲಿ ಸಮಸ್ಯೆಯಾಗದಂತೆ ಅದಕ್ಕೆ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಲಿದೆ' ಎಂದು ತಿಳಿಸಿದರು.

ಇದನ್ನೂ ಓದಿ : ಜನವರಿ 2022ರಲ್ಲಿ ಕೊರೊನಾ 3ನೇ ಅಲೆ! IIT ಪ್ರೊ.ಮಣೀಂದ್ರ ಅಗರ್ವಾಲ್ ಭವಿಷ್ಯ

"ಅಗತ್ಯವಿದ್ದರೆ ನಾವು ಪರೀಕ್ಷೆಗಳನ್ನು ನಿಲ್ಲಿಸುತ್ತೇವೆ. ಆದಾಗ್ಯೂ, ಪರೀಕ್ಷೆಗಳಲ್ಲಿ ನಾವು ದೈಹಿಕ ಅಂತರವನ್ನು ಕಾಪಾಡಿಕೊಳ್ಳುವ ವ್ಯವಸ್ಥೆಯನ್ನು ಮಾಡುವುದರ ಮೂಲಕ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನವನ್ನು ಬಹಳ ಕಟ್ಟುನಿಟ್ಟಾಗಿ ನಿರ್ವಹಿಸಲಾಗುತ್ತದೆ ಎಂದು ಸಚಿವ ನಾಗೇಶ್ ಅವರು ಹೇಳಿದರು.

'ಜನರು ಭಯಪಡುವ ಅಗತ್ಯವಿಲ್ಲ, ಏಕೆಂದರೆ ಈ ವರ್ಷ ನಾವು ಒಂದು ವರ್ಷದ ಲಾಕ್‌ಡೌನ್ ನಂತರ ಸಾಮಾನ್ಯ ಶಾಲೆಗಳನ್ನು ಪ್ರಾರಂಭಿಸಿದ್ದೇವೆ.ಶಾಲೆಗಳನ್ನು ಮತ್ತೆ ಮುಚ್ಚಿದರೆ ಮಕ್ಕಳನ್ನು ತರಗತಿಗಳಿಗೆ ಕರೆತರುವುದು ಕಷ್ಟವಾಗುತ್ತದೆ.ಆದಾಗ್ಯೂ, ಕೋವಿಡ್-19 ಪರಿಸ್ಥಿತಿಯು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಎಂದು ಭಾವಿಸಿದರೆ ಶಿಕ್ಷಣ ಇಲಾಖೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ" ಎಂದು ಅವರು ಪೋಷಕರಿಗೆ ಭರವಸೆ ನೀಡಿದರು.ರಾಜ್ಯದ ವಿವಿಧ ಶಾಲಾ ಕಾಲೇಜುಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ಮಧ್ಯೆ ಸಚಿವರ ಈ ಹೇಳಿಕೆ ಬಂದಿದೆ.

ಇದನ್ನೂ ಓದಿ: ರಾಜ್ಯದ 4 ನಗರಗಳಲ್ಲಿ ಕೋವಿಡ್ ಪ್ರಕರಣಗಳ ಹೆಚ್ಚಳ.. ಕೇಂದ್ರದಿಂದ ಕರ್ನಾಟಕ ಸೇರಿ ಈ 5 ರಾಜ್ಯಗಳಿಗೆ ಎಚ್ಚರಿಕೆ

ವಿದ್ಯಾರ್ಥಿಗಳ ಹಾಸ್ಟೆಲ್‌ನಲ್ಲಿ ಕೋವಿಡ್ -19 ಪ್ರಕರಣಗಳು ವರದಿಯಾದ ನಂತರ ಸೋಮವಾರ ಬೆಳಿಗ್ಗೆ ಬೆಂಗಳೂರಿನ ಸ್ವಾಯತ್ತ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News