HC Directs Government To Consider Private Transporters: ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಶುಕ್ರವಾರದಂದು ಮಹಿಳೆಯರಿಗೆ ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಬಸ್ ಪ್ರಯಾಣವನ್ನು  ಖಾಸಗಿ ಸಾರಿಗೆ ಸಂಸ್ಥೆಗಳಿಗೂ ವಿಸ್ತರಿಸುವಂತೆ ಮಾಡಿರುವ ಮನವಿಯನ್ನು ಎರಡು ತಿಂಗಳೊಳಗೆ ಪರಿಗಣಿಸುವಂತೆ ನಿರ್ದೇಶನ ನೀಡಿದೆ.


COMMERCIAL BREAK
SCROLL TO CONTINUE READING

ಉಡುಪಿ ಜಿಲ್ಲೆಯ ಖಾಸಗಿ ಬಸ್ ಆಪರೇಟರ್‌ ಶರತ್‌ ಕುಮಾರ್‌ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಇತ್ಯರ್ಥಪಡಿಸಿತು. ಶಕ್ತಿ ಯೋಜನೆಯನ್ನು "ಖಾಸಗಿ ಸ್ಟೇಜ್ ಕ್ಯಾರೇಜ್ ಆಪರೇಟರ್‌ಗಳಿಗೂ ವಿಸ್ತರಿಸಬಹುದು" ಎಂದು ನ್ಯಾಯಾಲಯ ಸಲಹೆ ನೀಡಿದೆ. ಆದರೆ ಈ ಬಗ್ಗೆ ಸರ್ಕಾರವಾಗಲಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಂಬಂಧಪಟ್ಟ ಸಚಿವರಿಂದ ಯಾವುದೇ ಸಕಾರಾತ್ಮಕ ಫಲಿತಾಂಶ ಬಂದಿಲ್ಲ.


ಇದನ್ನೂ ಓದಿ: ಅತಿಥಿ ಉಪನ್ಯಾಸಕರಿಗೆ 5,000 ರೂ. ಗಳಿಂದ 8000 ರೂ. ಗಳಷ್ಟು ಗೌರವಧನ ಹೆಚ್ಚಳ


ಅರ್ಜಿಯಲ್ಲಿ, ಖಾಸಗಿ ನಿರ್ವಾಹಕರು ಪರ್ವತ ಮತ್ತು ಗುಡ್ಡಗಾಡು ಪ್ರದೇಶಗಳು ಮತ್ತು ಕಣಿವೆಗಳಲ್ಲಿ ಸೇವೆಗಳನ್ನು ನಡೆಸುತ್ತಾರೆ, ಇಲ್ಲದಿದ್ದರೆ ಸುಲಭವಾಗಿ ಪ್ರವೇಶಿಸಲಾಗುವುದಿಲ್ಲ, ಏಕೆಂದರೆ ಈ ಮಾರ್ಗಗಳಲ್ಲಿ ಕೆಲವು KSRTC ಬಸ್ ಸೇವೆಗಳನ್ನು ಹೊಂದಿಲ್ಲ. ಕರ್ನಾಟಕ ಹೈಕೋರ್ಟ್‌ "ರಾಜ್ಯ ಸಾರಿಗೆ ಬಸ್‌ಗಳ ಓಡಾಟದ ವೆಚ್ಚ ತುಂಬಾ ಹೆಚ್ಚಿದ್ದರೂ, ಖಾಸಗಿ ನಿರ್ವಾಹಕರು ಕರ್ನಾಟಕದಾದ್ಯಂತ ವಿವಿಧ ಮಾರ್ಗಗಳಲ್ಲಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಿಲ್ಲದ ಹಲವಾರು ಮಾರ್ಗಗಳಲ್ಲಿ ಪ್ರಯಾಣಿಕರಿಗೆ ಉತ್ತಮ ಸೇವೆಗಳನ್ನು ಒದಗಿಸುತ್ತಿದ್ದಾರೆ" ಎಂದು ನ್ಯಾಯಾಲಯಕ್ಕೆ ಮನವರಿಕೆ ಮಾಡಲಾಗಿತ್ತು.


“ಶಕ್ತಿ ಯೋಜನೆ 11.6.2023 ರಿಂದ ಜಾರಿಗೆ ಬಂದ ಎರಡು ದಿನಗಳಲ್ಲಿ ಖಾಸಗಿ ನಿರ್ವಾಹಕರು ಯಾವುದೇ ಪ್ರಯಾಣಿಕರಿಲ್ಲದೆ ತೀವ್ರ ನಷ್ಟವನ್ನು ಎದುರಿಸುತ್ತಿದ್ದಾರೆ. ಇದು 50 ರಿಂದ 60 ವರ್ಷಗಳಿಗಿಂತ ಹೆಚ್ಚು ಕಾಲ ಸಕ್ರಿಯ ಸೇವೆ ಸಲ್ಲಿಸಿದ ನಮಗೆ ಪ್ರಶ್ನೆಯಾಗಿದೆ ಅಂತ ಅರ್ಜಿದಾರರು ನ್ಯಾಯಾಲಕ್ಕೆ ತಿಳಿಸಿದ್ದಾರೆ. ಅರ್ಜಿದಾರರ ಪರವಾಹಿ ಹಿರಿಯ ವಕೀಲ ಪುತ್ತಿಗೆ ರಮೇಶ್‌ ವಾದ ಮಂಡಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.