ಅಡುಗೆ ಸಹ ಮಾಡದೇ ನಿದ್ದೆ ಮಾಡುತ್ತಿದ್ದು, ನನ್ನ ತಾಯಿಯೇ ಅಡುಗೆ ಮಾಡಿ ಬಡಿಸಬೇಕು. ಅವಳು ಇಷ್ಟೆಲ್ಲಾ ಮಾಡಿದ್ರೂ ನಾನು ಪ್ರಶ್ನಿಸದೆ ಸುಮ್ಮನಿದ್ದೆ.  ಆದರೆ ಆಕೆಯ ಕುಟುಂಬಸ್ಥರೆಲ್ಲಾ ಸೇರಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ. ನನಗೆ  ಪತ್ನಿಯಿಂದ ಹಾಗೂ ಆಕೆಯ ಕುಟುಂಬದಿಂದ ನರಕಯಾತನೆಯಾಗಿದೆ. ಹೀಗಾಗಿ ನಾನು‌ ಸಾಕಷ್ಟು ನೊಂದಿದ್ದು,ಪತ್ನಿ ಹಾಗೂ ಆಕೆಯ ಕುಟುಂಬಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾನೆ.


COMMERCIAL BREAK
SCROLL TO CONTINUE READING

ರಾಯಲ್ ಲೈಫ್ ಲೀಡ್ ಮಾಡುವ ಉದ್ದೇಶದಿಂದ ನನ್ನನ್ನು  ಆಯೇಷಾ ಫರ್ಹಿನ್ ಮದ್ವೆಯಾಗಿದ್ದು,ಮದುವೆಗೂ  ಮುನ್ನವೇ ಆಕೆಗೆ ಖಾಯಿಲೆಗಳಿದ್ದವು.  ಅವುಗಳನ್ನು ಮರೆಮಾಚಿ ತನಗೆ ಐದು ವರ್ಷದ ಹಿಂದೆ ಮದುವೆ ಮಾಡಿ ಕೊಟ್ಟಿದ್ದಾರೆ. ಆಕೆಯ ಹುಟ್ಟುಹಬ್ಬದ ನೆಪದಲ್ಲಿ 20-25 ಜನರನ್ನು ಮನೆಗೆ ಆಹ್ವಾನಿಸಿ ನನ್ನ ಮೇಲೆ ಹಲ್ಲೆ ನಡೆಸಿದ್ದಾಳೆ. ಮನೆಯಲ್ಲಿ ಕೆಲಸ ಮಾಡಲು ಹೇಳಿದರೆ ನನ್ನ ಜೊತೆ ಜಗಳವಾಡಿ 15-20 ದಿನ ತವರು ಮನೆಗೆ ಸೇರಿಕೊಳ್ಳುತ್ತಾಳೆ.


ಇದನ್ನೂ ಓದಿ-ಮಂಡ್ಯ ಜಿಲ್ಲೆಯನ್ನು ದೇಶದಲ್ಲಿಯೇ ನಂಬರ್ ಒನ್ ಮಾಡಲು ಕಂಕಣಬದ್ಧ: ಸಿಎಂ ಬೊಮ್ಮಾಯಿ


ಆಕೆಗೆ ನನ್ನ ಬಗ್ಗೆ ಬಗ್ಗೆ ಕಿಂಚಿತ್ತೂ ಪ್ರೀತಿ,ಮಮಕಾರವಿಲ್ಲ.‌ನನ್ನ ಆಸ್ತಿ ಲಪಟಾಯಿಸಲು  ಮದುವೆಯಾಗಿ ಚಿತ್ರಹಿಂಸೆ ನೀಡುತ್ತಿದ್ದಾಳೆಂದು ಪತ್ನಿ ಆಯೇಷಾ, ಮಾವ ಆರಿಫುಲ್ಲ , ಅತ್ತೆ ಹೀನಾ ಕೌಸರ್, ಮೈದುನ ಮೊಹಮ್ಮದ್ ಮೋಯಿನ್ ವಿರುದ್ಧ ನೊಂದ ಕಮ್ರಾನ್ ಬಸವನಗುಡಿ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ.


ಇದನ್ನೂ ಓದಿ-'ಮೋದಿ ಇರುವಾಗಲೇ ಮೋದಿಯ ಸಮಾಧಿ ತೋಡುವಲ್ಲಿ ಕಾಂಗ್ರೆಸ್ ನಿರತವಾಗಿದೆ; ನರೇಂದ್ರ ಮೋದಿ


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.