ಬೆಂಗಳೂರು: ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಗೃಹಲಕ್ಷ್ಮಿ ಯೋಜನೆಗೆ ಜುಲೈ 19 ರಂದು ಚಾಲನೆ ದೊರೆಯಲಿದೆ.


COMMERCIAL BREAK
SCROLL TO CONTINUE READING

ಈ ಕುರಿತಾಗಿ ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ


ಈ ಮಹತ್ವದ ಯೋಜನೆಗೆ ಸೋನಿಯಾ ಗಾಂಧಿ ಚಾಲನೆ ನೀಡಬೇಕಾಗಿತ್ತು ಆದರೆ ಈಗ ಸಮಯಾವಕಾಶ ಸಿಗದಿರುವ ಹಿನ್ನೆಲೆಯಲ್ಲಿ ಸಿಎಂ ಚಾಲನೆ ನೀಡಲಿದ್ದಾರೆ.


ಇದನ್ನೂ ಓದಿ: ಶಿಕ್ಷಣ ಇಲಾಖೆಯಿಂದ ಅಡುಗೆ ಸಿಬ್ಬಂದಿಗೆ ಮಾರ್ಗಸೂಚಿ ಪ್ರಕಟ


ಯಾರಿಗೆಲ್ಲಾ ಸಿಗುತ್ತೆ ಗೃಹಲಕ್ಷ್ಮಿ ಯೋಜನೆ ಕೊಡುಗೆ?


ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಬಿಸಿಯೂಟ ತಯಾರಕರು, ಲಿಂಗತ್ವ ಅಲ್ಪಸಂಖ್ಯಾತರು ಮತ್ತು ಮಾಜಿ ದೇವದಾಸಿಯರೂ ಸಹ ಈ ಯೋಜನೆಯ ವ್ಯಾಪ್ತಿಗೆ ಸೇರುತ್ತಾರೆ. 


ಗೃಹಲಕ್ಷ್ಮಿ ಯೋಜನೆ ಉದ್ದೇಶ? 


* ಮಹಿಳೆಯರ ಆರ್ಥಿಕ ಸ್ವಾವಲಂಬನೆ ಹೆಚ್ಚಾಗುತ್ತದೆ.


​* ಬಡತನದಲ್ಲಿ ಗಣನೀಯ ಇಳಿಕೆಯಾಗುತ್ತದೆ.


​* ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಕುಟುಂಬಗಳಿಗೆ ತುಸು ನೆಮ್ಮದಿ ಸಿಗುವಂತಾಗುತ್ತದೆ. ಖರೀದಿಸುವ ಸಾಮರ್ಥ್ಯ ಹೆಚ್ಚಾಗುತ್ತದೆ.


​* ಇದರಿಂದ ಆರ್ಥಿಕ ಚಟುವಟಿಕೆ ಮತ್ತು ವ್ಯಾಪಾರ ವಹಿವಾಟು ಹೆಚ್ಚಾಗುತ್ತದೆ.


​* ಪಶುಪಾಲನೆ, ಗುಡಿ ಕೈಗಾರಿಕೆಯಂತಹ ಜೀವನೋಪಾಯ ಚಟುವಟಿಕೆಗಳಲ್ಲಿ ತೊಡಗಲು ಪ್ರೇರೇಪಿಸುತ್ತದೆ.


​* ಗರ್ಭಿಣಿಯರು, ತಾಯಂದಿರು, ಮಹಿಳಾ ಹಿರಿಯ ನಾಗರಿಕರು ಮತ್ತು ಅನಾರೋಗ್ಯ ಪೀಡಿತ ಮಹಿಳೆಯರು ಕೆಲಸ ಮಾಡುವ ಅನಿವಾರ್ಯತೆಯನ್ನು ನಿವಾರಿಸುತ್ತದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.