ಹುಬ್ಬಳ್ಳಿ: ಸರ್ಕಾರಿ ಕಚೇರಿಯ ಮುಂಭಾಗದಲ್ಲಿ ಮದ್ಯಪಾನ ಮಾಡುತ್ತಿದ್ದ ವ್ಯಕ್ತಿಗಳಿಗೆ ಮದ್ಯಪಾನ ಮಾಡದಂತೆ ಬುದ್ದಿವಾದ ಹೇಳಿದಕ್ಕೆ ಸರ್ಕಾರಿ ಅಧಿಕಾರಿಯ ಮೇಲೆಯೇ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. 


COMMERCIAL BREAK
SCROLL TO CONTINUE READING

ಅದರಗುಂಚಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿಯ ಮೇಲೆಯೇ ಹಲ್ಲೆ ಮಾಡಲಾಗಿದ್ದು, ಇವರು ಎಂದಿನಂತೆ ತಮ್ಮ ಚಾವಡಿಯಲ್ಲಿ ಭೂ ದಾಖಲೆಗಳಿಗೆ ಆಧಾರ ಕಾರ್ಡ್ ಸೀಡಿಂಗ್ ಕಾರ್ಯ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಚಾವಡಿ ಮುಂಭಾಗದಲ್ಲಿಯೇ ಇಬ್ಬರು ಯುವಕರು ಮದ್ಯಪಾನ ಮಾಡುತ್ತಿದ್ದರು.


ಇದನ್ನೂ ಓದಿ- ಮೋದಿ ತಾಯಿಯವರ ಅವಹೇಳನ ಬಿಜೆಪಿಯವರು ಸಹಿಸಬಹುದು, ನಾವು ಸಹಿಸುವುದಿಲ್ಲ : ಡಿಕೆ ಸುರೇಶ್


ಹೀಗಾಗಿ ಗ್ರಾಮ ಆಡಳಿತ ಅಧಿಕಾರಿ ಕಚೇರಿ ಮುಂಭಾಗದಲ್ಲಿ ಮದ್ಯಪಾನ ಹಾಗೂ ಅನೈತಿಕ ಚಟುವಟಿಕೆ ನಡೆಸುವುದು ಅಪರಾಧ. ಹೀಗೆ ಮಾಡಬೇಡಿ ಎಂದು ಬುದ್ದಿವಾದ ಹೇಳಿದ್ದಾರೆ.


ಆದರೆ ಅದರಗುಂಚಿ ಗ್ರಾಮದ ಮಹಮ್ಮದ್ ಸಾಬ್ ನದಾಫ್ ಹಾಗೂ ಅವರ ಸಹೋದರ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಿ, ಬೈಕಿನ ಚಾವಿಯನ್ನು ತೆಗೆದುಕೊಂಡು ತಲೆ ಹಾಗೂ ಕಣ್ಣಿನ ಕೆಳಭಾಗಕ್ಕೆ ಗಾಯವಾಗುವಂತೆ ಥಳಿಸಿದ್ದಾರೆ.


ಬಳಿಕ ಸ್ಥಳೀಯರು ಗಾಯಗೊಂಡಿದ್ದ ಗ್ರಾಮ ಆಡಳಿತ ಅಧಿಕಾರಿಯನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆ ಕೊಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.