ವಿಮೆ ತಿರಸ್ಕರಿಸಿದ ಅಂಚೆ ಇಲಾಖೆಗೆ ರೂ.3 ಲಕ್ಷ ಕ್ಕೂ ಅಧಿಕ ದಂಡ

ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ನಾಗಪ್ಪ ಶಿವಪ್ಪ ಕುರಹಟ್ಟಿ ಇವರು ಮೆಣಸಿನಕಾಯಿ ವ್ಯಾಪಾರಸ್ಥರಾಗಿದ್ದರು. ವ್ಯಾಪಾರಕ್ಕೆಂದು ಶಿವಮೊಗ್ಗ ಜಿಲ್ಲೆಯ ಸೊರಬಕ್ಕೆ ಆಗಾಗ್ಗೆ ಹೋಗಿ ಬರುತ್ತಿದ್ದರು. ಹೀಗೆ ವ್ಯಾಪಾರಕ್ಕೆಂದು ಹೋದಾಗ ದಿ:28/03/2019 ರಂದು ರೂ.7,291/- ಪ್ರೀಮಿಯಮ್ ನೀಡಿ ಸೊರಬ (ಸಾಗರ) ಅಂಚೆ ಕಛೇರಿಯಿಂದ ಗ್ರಾಮೀಣ ಅಂಚೆ ಜೀವ ವಿಮೆಯನ್ನು ಪಡೆದುಕೊಂಡಿದ್ದರು.

Written by - Manjunath N | Last Updated : Sep 13, 2023, 07:04 AM IST
  • ಆ ವಿಮೆ ಪಾಲಸಿಗೆ ಪಾಲಸಿದಾರರ ಸಹೋದರನ ಮಗಳು ಕುಮಾರಿ ಅರ್ಚನಾ ನಾಮಿನಿ ಆಗಿದ್ದಳು
  • ದೂರುದಾರರು ಗ್ರಾಹಕರ ರಕ್ಷಣಾಕಾಯ್ದೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು
ವಿಮೆ ತಿರಸ್ಕರಿಸಿದ ಅಂಚೆ ಇಲಾಖೆಗೆ ರೂ.3 ಲಕ್ಷ ಕ್ಕೂ ಅಧಿಕ ದಂಡ  title=

ಧಾರವಾಡ : ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಹಿರೇಹರಕುಣಿ ಗ್ರಾಮದ ನಾಗಪ್ಪ ಶಿವಪ್ಪ ಕುರಹಟ್ಟಿ ಇವರು ಮೆಣಸಿನಕಾಯಿ ವ್ಯಾಪಾರಸ್ಥರಾಗಿದ್ದರು. ವ್ಯಾಪಾರಕ್ಕೆಂದು ಶಿವಮೊಗ್ಗ ಜಿಲ್ಲೆಯ ಸೊರಬಕ್ಕೆ ಆಗಾಗ್ಗೆ ಹೋಗಿ ಬರುತ್ತಿದ್ದರು. ಹೀಗೆ ವ್ಯಾಪಾರಕ್ಕೆಂದು ಹೋದಾಗ ದಿ:28/03/2019 ರಂದು ರೂ.7,291/- ಪ್ರೀಮಿಯಮ್ ನೀಡಿ ಸೊರಬ (ಸಾಗರ) ಅಂಚೆ ಕಛೇರಿಯಿಂದ ಗ್ರಾಮೀಣ ಅಂಚೆ ಜೀವ ವಿಮೆಯನ್ನು ಪಡೆದುಕೊಂಡಿದ್ದರು.

ಇದನ್ನೂ ಓದಿ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹನಿ ನೀರಾವರಿ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ

ವಿಮೆದಾರ ನಾಗಪ್ಪ ಕುರಹಟ್ಟಿ ಅವರು ದಿ:31/10/2019 ರಂದು ತೀವ್ರ ಹೃದಯಾಘಾತದಿಂದ ಹಿರೆಹರಕುಣಿಯ ತಮ್ಮ ಮನೆಯಲ್ಲಿ ನಿಧನ ಹೊಂದಿದ್ದರು. ಆ ವಿಮೆ ಪಾಲಸಿಗೆ ಪಾಲಸಿದಾರರ ಸಹೋದರನ ಮಗಳು ಕುಮಾರಿ ಅರ್ಚನಾ ನಾಮಿನಿ ಆಗಿದ್ದಳು. ವಿಮೆದಾರ ನಾಗಪ್ಪನ ಮರಣಾನಂತರ ಕುಮಾರಿ ಅರ್ಚನಾ ಹುಬ್ಬಳ್ಳಿಯ ಅಂಚೆ ಕಛೇರಿಗೆ ವಿಮೆ ಪರಿಹಾರ ರೂ.2 ಲಕ್ಷ 50 ಸಾವಿರ ಕೊಡುವಂತೆ ದಾಖಲೆಗಳ ಸಮೇತ ಕ್ಲೇಮ ಅರ್ಜಿ ಸಲ್ಲಿಸಿದ್ದರು. ವಿಮೆ ಮಾಡಿಸುವ ಮೊದಲು ಮೃತ ನಾಗಪ್ಪ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದ ಆದರೆ ವಿಮೆ ಪಡೆಯುವಾಗ ಆ ಸಂಗತಿಗಳನ್ನು ಅಂಚೆ ಇಲಾಖೆಗೆ ಬಹಿರಂಗ ಪಡಿಸಿರಲಿಲ್ಲ ಅನ್ನುವ ಕಾರಣದ ಮೇಲೆ ಹುಬ್ಬಳ್ಳಿಯ ಅಂಚೆ ಕಛೇರಿಯವರು ದಿ:18/05/2022 ರಂದು ಕುಮಾರಿ ಅರ್ಚನಾಳ ಕ್ಲೇಮ್‍ನ್ನು ತಿರಸ್ಕರಿಸಿದ್ದರು. ತನ್ನ ಚಿಕ್ಕಪ್ಪ ಯಾವುದೇ ಕಾಯಿಲೆಯಿಂದ ಬಳಲುತ್ತಿರಲಿಲ್ಲ ಆದರೆ ಹೃದಯಾಘಾತದಿಂದ ಅವನು ಸತ್ತಿರುವುದರಿಂದ ಅಂಚೆ ಇಲಾಖೆಯವರ ತೀರ್ಮಾನ ತಪ್ಪು ಮತ್ತು ಅದರಿಂದತನಗೆ ಸೇವಾ ನ್ಯೂನ್ಯತೆ ಆಗಿದೆ ಅಂತಾ ಹೇಳಿ ಅವರ ಮೇಲೆ ಕ್ರಮ ಕೈಗೊಂಡು ಪರಿಹಾರ ಕೊಡಿಸುವಂತೆ ದೂರುದಾರರು ಗ್ರಾಹಕರ ರಕ್ಷಣಾಕಾಯ್ದೆ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.

ಇದನ್ನೂ ಓದಿ : 60 ಲಕ್ಷ‌ ಮಹಿಳೆಯರಿಗೆ ಗೃಹಲಕ್ಷ್ಮೀ ಹಣ : ಸಚಿವೆ ಲಕ್ಷ್ಮೀ ಹಬ್ಬಾಳ್ಕರ್ ಮಾಹಿತಿ

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ. ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ.ಅ. ಬೋಳಶೆಟ್ಟಿ ಮತ್ತು ಪ್ರಭು. ಸಿ. ಹಿರೇಮಠ ಅವರು ಮೃತ ನಾಗಪ್ಪ ಕುರಹಟ್ಟಿರವರು ಮೇಲೆ ಹೇಳಿದ ಗ್ರಾಮೀಣ ಅಂಚೆ ಜೀವವಿಮೆ ಪಾಲಸಿ, ಅವರು ನಿಧನ ಹೊಂದುವ ಕಾಲಕ್ಕೆ ಚಾಲ್ತಿಯಲ್ಲಿತ್ತು. ಅಂಚೆ ಕಛೇರಿಯವರು ತಮ್ಮ ವಿಮಾ ನಿಯಮಾವಳಿಯಂತೆ ವಿಮಾ ಹಣವನ್ನು ದೂರುದಾರರಿಗೆ ಕೊಡುವುದು ಅವರ ಕರ್ತವ್ಯವಾಗಿರುತ್ತದೆ. ಆದರೆ ಅಂತಹ ಕರ್ತವ್ಯ ನಿರ್ವಹಣೆಯಲ್ಲಿ ಗ್ರಾಮೀಣ ಅಂಚೆ ಜೀವವಿಮಾ ಕಛೇರಿ ವಿಫಲವಾಗಿದೆ, ಅದರಿಂದ ಅವರು ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತಾ ಅಭಿಪ್ರಾಯಪಟ್ಟು ಆಯೋಗ ತೀರ್ಪು ನೀಡಿದೆ. ವಿಮಾ ಪಾಲಸಿಯ ನಿಯಮದಂತೆ ನಾಮಿನಿಯಾದ ದೂರುದಾರಳಿಗೆ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ರೂ.2 ಲಕ್ಷ 50 ಸಾವಿರ ವಿಮಾ ಹಣ ಮತ್ತು ಅದರ ಮೇಲೆ ಕ್ಲೇಮು ತಿರಸ್ಕರಿಸಿದ ದಿ:18/05/2022 ರಿಂದ ಶೇ.8 ರಂತೆ ಬಡ್ಡಿ ಲೆಕ್ಕ ಹಾಕಿ ಸಂದಾಯ ಮಾಡುವಂತೆ ಆಯೋಗ ತನ್ನ ತೀರ್ಪಿನಲ್ಲಿ ಆದೇಶಿಸಿದೆ. ದೂರುದಾರಳಿಗೆ ಆಗಿರುವ ಮಾನಸಿಕ ತೊಂದರೆ ಹಾಗೂ ಅನಾನುಕೂಲಕ್ಕಾಗಿ ರೂ.50 ಸಾವಿರ ಪರಿಹಾರ ಮತ್ತು ರೂ.3 ಸಾವಿರ ಪ್ರಕರಣದ ಖರ್ಚು ವೆಚ್ಚವನ್ನು ಕೊಡುವಂತೆ ಎದುರುದಾರ ಗ್ರಾಮೀಣ ಅಂಚೆ ಜೀವವಿಮೆ ಕಛೇರಿಯವರಿಗೆ ಆಯೋಗ ಆದೇಶಿಸಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News