ಮಂಡ್ಯ: ಎಲ್ಲರ ಎದೆಯಲ್ಲಿ ಅಚ್ಚಳಿಯದೆ ಉಳಿದ ಮಣ್ಣಿನ ಮಗ, ರೈತಪರ ಧೀಮಂತ ನಾಯಕ,  ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಪುಟ್ಟಣ್ಣಯ್ಯ ಅವರ ಅಂತ್ಯ ಸಂಸ್ಕಾರ ಇಂದು ಅವರ ತವರೂರಾದ ಕ್ಯಾತನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೆರಲಿದೆ.


COMMERCIAL BREAK
SCROLL TO CONTINUE READING

ಭಾನುವಾರ ರಾತ್ರಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದ ಕೆ.ಎಸ್. ಪುಟ್ಟಣ್ಣಯ್ಯ ಅವರ ಮಕ್ಕಳು ಮೊಮ್ಮಕ್ಕಳು ವಿದೇಶದಲ್ಲಿದ್ದ ಕಾರಣ ಅವರ ಪಾರ್ಥೀವ ಶರೀರವನ್ನು ಮೈಸೂರಿನ ಜೆಎಸ್ಎಸ್ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ಸಂರಕ್ಷಿಸಿಡಲಾಗಿತ್ತು. ಇದೀಗ ಅವರ ಪಾರ್ಥಿವ ಶರೀರವನ್ನು ಮಂಡ್ಯ ಜಿಲ್ಲೆಯತ್ತ ಕೊಂಡೊಯ್ಯಲಾಗುತ್ತಿದ್ದು, ಶ್ರೀರಂಗ ಪಟ್ಟಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.