ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡುತ್ತಿದೆ-ಸಿದ್ಧರಾಮಯ್ಯ

ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ.

Written by - Zee Kannada News Desk | Last Updated : Nov 21, 2021, 03:23 PM IST
  • ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ.ಜನಸ್ವರಾಜ್ ಅಲ್ಲ,ಇದು ಜನಬರ್ಬಾದ್ ಯಾತ್ರೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
 ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡುತ್ತಿದೆ-ಸಿದ್ಧರಾಮಯ್ಯ  title=
file photo

ಬೆಂಗಳೂರು: ಅರ್ಧ ರಾಜ್ಯ ಅಕಾಲಿಕ ಮಳೆಯಿಂದ ತತ್ತರಿಸಿಹೋಗಿದೆ. ಕೈಗೆ ಬಂದ ಬೆಳೆ, ಬಾಯಿಗೆ ಬರದೆ ಗದ್ದೆಯಲ್ಲಿ ಕೊಳೆಯುತ್ತಿದೆ.

ರಾಜ್ಯ ಸರ್ಕಾರ ಟೂರಿಂಗ್ ಟಾಕೀಸ್ ರೀತಿ ಜನಸ್ವರಾಜ್ ಎಂಬ ನಾಟಕ ಪ್ರದರ್ಶನ ಮಾಡಿಕೊಂಡು ಹೊರಟಿದೆ.ಜನಸ್ವರಾಜ್ ಅಲ್ಲ,ಇದು ಜನಬರ್ಬಾದ್ ಯಾತ್ರೆ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯನವರು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು- ಸಿದ್ಧರಾಮಯ್ಯ

ಮಳೆ-ನೆರೆಗೆ ಸಿಕ್ಕಿ 20ಕ್ಕೂ ಹೆಚ್ಚು ಜನ ಸಾವಿಗೀಡಾಗಿದ್ದಾರೆ,ಹತ್ತು ಸಾವಿರ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಾಶವಾಗಿದೆ, ಮನೆ ಬಿದ್ದು ಜನ ಬೀದಿಪಾಲಾಗಿದ್ದಾರೆ.ಇವರ ನೆರವಿಗೆ ಧಾವಿಸಬೇಕಾದ ರಾಜ್ಯ ಸರ್ಕಾರ ಜನಸ್ವರಾಜ್ ಎಂಬ ನಾಟಕ ಮಾಡುತ್ತಾ ತಿರುಗಾಡುತ್ತಿದೆ" ಎಂದು ಸಿದ್ಧರಾಮಯ್ಯ (Siddaramaiah) ಟೀಕಾಪ್ರಹಾರ ನಡೆಸಿದ್ದಾರೆ.

"ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ,ನಿಮ್ಮ ಹನಿಮೂನ್ ಕಾಲ ಮುಗಿದಿದೆ.ನಿಮ್ಮ ಸಚಿವರ ಈ ನಾಟಕ ಪ್ರದರ್ಶನದ ಯಾತ್ರೆಯನ್ನು ಮೊದಲು ನಿಲ್ಲಿಸಿ. ಅವರನ್ನು ಮಳೆಪೀಡಿತ ಜಿಲ್ಲೆಗಳಿಗೆ ಓಡಿಸಿ.ಕಣ್ಣೀರಿಟ್ಟು ಗೋಳಾಡುತ್ತಿರುವ ಜನರ ಕಷ್ಟಗಳನ್ನು ಆಲಿಸಿ ಪರಿಹಾರ ಕಾರ್ಯ ಕೈಗೊಳ್ಳಲು ಹೇಳಿ" ಎಂದು ಆಗ್ರಹಿಸಿದರು.

ಇದನ್ನೂ ಓದಿ: "ಬಿಜೆಪಿ ನಾಯಕರು ಯಾಕೆ ಹಾವು ಕಂಡ ಹಾಗೆ ಬೆಚ್ಚಿ ಬೀಳುತ್ತಿದ್ದಾರೆ?"

ಸಾವಿರಾರು ಎಕರೆ ಭೂಮಿಯಲ್ಲಿ ಭತ್ತ,ರಾಗಿ,ಜೋಳ, ತರಕಾರಿ, ಬಾಳೆ, ತೆಂಗು ಎಲ್ಲವೂ ನಾಶವಾಗಿದೆ.ರೈತರು ಕಣ್ಣೀರಿನಿಂದ ಕೈತೊಳೆದುಕೊಳ್ಳುತ್ತಿದ್ದಾನೆ.ಸಚಿವರು ಯಾತ್ರೆಯಲ್ಲಿದ್ದಾರೆ, ಅಧಿಕಾರಿಗಳು ಬೆಚ್ಚನೆ ಮನೆಯಲ್ಲಿದ್ದಾರೆ.ಜನ ಬೀದಿಪಾಲಾಗಿದ್ದಾರೆ.ಇಲ್ಲೊಂದು ಸರ್ಕಾರ ಇದೆಯೇ? ಮೊದಲು ಅಧಿಕಾರಿಗಳ ತಂಡ ಕಟ್ಟಿಕೊಂಡು ಮಳೆಪೀಡಿತ ಪ್ರದೇಶಗಳಿಗೆ ಸಚಿವರು ಹೋಗಿಮಳೆ ನಷ್ಟದ ಅಂದಾಜು ನಡೆಸಿ ತಾತ್ಕಾಲಿಕ ಪರಿಹಾರ ನೀಡಲು ಸೂಚನೆ ನೀಡಿ.ಗಂಜಿ ಕೇಂದ್ರಗಳನ್ನು ತೆರೆಯಲು ಹೇಳಿ.ನಷ್ಟದ ಸಮೀಕ್ಷೆ ನಡೆಸಿ ಹೆಚ್ಚಿನ ಪರಿಹಾರ ನೀಡಲು ಕೇಂದ್ರಕ್ಕೆ ಮನವಿ ಮಾಡಿ ಎಂದು ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News