ನವದೆಹಲಿ: ಬಹುದಿನಗಳ ಕನಸಾದ ಮಹದಾಯಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ನೀಡಿ, ಈಗ ಕೇಂದ್ರ ಸರ್ಕಾರಕ್ಕೆ ಅಧಿಸೂಚನೆ ಹೊರಡಿಸಲು ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಮೂರು ರಾಜ್ಯಗಳ ಸಲಹೆಯನ್ನು ಆಲಿಸಿದ ನಂತರ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠವು ಮಧ್ಯಂತರ ಆದೇಶವನ್ನು ಅಂಗೀಕರಿಸಿತು. ಈ ಕುರಿತು ಅಂತಿಮ ವಿಚಾರಣೆ ಜುಲೈನಲ್ಲಿ ನಡೆಯಲಿದೆ ಎಂದು ನ್ಯಾಯಪೀಠ ತಿಳಿಸಿದೆ. ನ್ಯಾಯಮಂಡಳಿಯ ತೀರ್ಪಿಗೆ ವಿರುದ್ಧವಾಗಿ ಮೂರು ರಾಜ್ಯಗಳು ಸಲ್ಲಿಸಿದ ಅರ್ಜಿಗಳ ಮಧ್ಯಂತರ ಆದೇಶವು ಅಂತಿಮ ಫಲಿತಾಂಶಕ್ಕೆ ಒಳಪಟ್ಟಿರುತ್ತದೆ ಎಂದು ಅದು ಹೇಳಿದೆ.


ಮಹದಾಯಿ ನದಿ ಜಲಾನಯನ ಪ್ರದೇಶದಿಂದ ಕರ್ನಾಟಕಕ್ಕೆ 13.42 ಟಿಎಂಸಿ ನೀರನ್ನು (ಖಾಲಿಯಾದ ಮಲಪ್ರಭಾ ನದಿ ಜಲಾನಯನ ಪ್ರದೇಶಕ್ಕೆ ತಿರುಗಿಸಲು 3.9 ಟಿಎಂಸಿ ಸೇರಿದಂತೆ) ಹಂಚಿಕೆ ಮಾಡಿ ಮಹಾದಾಯಿ ಜಲ ವಿವಾದ ನ್ಯಾಯಮಂಡಳಿ 2018 ರ ಆಗಸ್ಟ್ 14 ರಂದು ಆದೇಶ ಹೊರಡಿಸಿತ್ತು.


ನ್ಯಾಯಮಂಡಳಿಯ ಅಂತಿಮ ತೀರ್ಪಿನಲ್ಲಿ ಮಹಾರಾಷ್ಟ್ರಕ್ಕೆ 1.33 ಟಿಎಂಸಿ ನೀರು ಮತ್ತು ಗೋವಾಕ್ಕೆ 24 ಟಿಎಂಸಿ ನೀಡಲಾಯಿತು. ಯುಪಿಎ -2 ಸರ್ಕಾರ 2010 ರಲ್ಲಿ ಮಹಾದಾಯಿ ಜಲ ವಿವಾದಗಳ ನ್ಯಾಯಮಂಡಳಿಯನ್ನು ರಚಿಸಿತ್ತು. ಎರಡೂ ರಾಜ್ಯಗಳ ನಡುವೆ ಮಹಾದಾನದಿಯ ನೀರನ್ನು ಹಂಚಿಕೊಳ್ಳುವ ವಿಷಯದ ಬಗ್ಗೆ ನೆರೆಯ ಗೊವಾದೊಂದಿಗೆ ಈಗ ಕಾನೂನು ಸಂಘರ್ಷ ನಡೆದಿತ್ತು ,ಕಳಸಾ-ಬಂಡೂರಿ ನಾಲಾ ಯೋಜನೆಗಾಗಿ 7.56 ಟಿಎಂಸಿ ಅಡಿ ನೀರನ್ನು ಬಿಡುಗಡೆ ಮಾಡುವಂತೆ ಕೋರಿ ಕರ್ನಾಟಕ ನ್ಯಾಯಮಂಡಳಿಗೆ ಅರ್ಜಿ ಸಲ್ಲಿಸಿತ್ತು.


ಅಂತರ ರಾಜ್ಯ ಮಹಾದಾಯಿ ನದಿಯಿಂದ 7.56 ಟಿಎಂಸಿಎಫ್ ನೀರನ್ನು ಬಳಸಿಕೊಳ್ಳುವ ಕಳಸಾ-ಬಂಡೂರಿ ನಾಲಾ (ತಿರುವು) ಯೋಜನೆ ಪ್ರಮುಖವಾಗಿ ಹುಬ್ಬಳ್ಳಿ-ಧಾರವಾಡ,ಬೆಳಗಾವಿ ಮತ್ತು ಗದಗ ಜಿಲ್ಲೆಗಳಿಗೆ ಕುಡಿಯುವ ನೀರು ಸರಬರಾಜಿಗೆ ನೆರವಾಗಲಿದೆ. ಅವಳಿ ನಗರಗಳ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ 7.56 ಟಿಎಂಸಿ ನೀರನ್ನು ಮಲಪ್ರಭಾ ನದಿಗೆ ತಿರುಗಿಸಲು ಮಹಾದಾಯಿ ನದಿಯ ಉಪನದಿಗಳಾದ ಕಲಾಸಾ ಮತ್ತು ಬಂಡೂರಿಗಳಲ್ಲಿ ಬ್ಯಾರೇಜ್‌ಗಳನ್ನು ನಿರ್ಮಿಸುವುದು ಇದರಲ್ಲಿ ಸೇರಿದೆ.