ಬೆಳಗಾವಿ : ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಮಾಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಮಾತನಾಡಿದ ಸಿಎಂ ಬೊಮ್ಮಾಯಿ, ಇವತ್ತು ಅತ್ಯಂತ ಭಾರವಾದ ಹೃದಯದಿಂದ ನಾನು ಬೆಳಗಾವಿಗೆ ಬಂದಿದ್ದೇನೆ. ಉಮೇಶ ಕತ್ತಿ ಅವರ ಅಂತ್ಯಕ್ರಿಯೆಗೆ ಬಂದಿದ್ದೇನೆ. ಅಂತ್ಯಕ್ರಿಯೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಅವರ ಮನೆಗೆ ಪೂಜೆ, ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಜನರು ದೊಡ್ಡ ಪ್ರಮಾಣದಲ್ಲಿ ಬರೋದ ಬೇಡ, ಜನರು ಸಹಕರಿಸಬೇಕು. ರಾಜ್ಯಾದ್ಯಂತ ಮೂರು ದಿವಸ ಶೋಕಾಚರಣೆ ಮಾಡಲು ನಿರ್ಮಾಣ ಮಾಡಲಾಗಿದೆ. ಮೂರು ದಿನದ ಶೋಕಾಚರಣೆಗೆ ಸಿದ್ದತೆ ಮಾಡಲಾಗುತ್ತಿದೆ. ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮ 11ಕ್ಕೆ ಮುಂದೂಡಾಗಿದೆ. ಮೂರು ದಿನಗಳ ಕಾಲ‌ ಸರ್ಕಾರದಿಂದ ಶೋಕಾಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.