ಶಿವಮೊಗ್ಗ: ಲಾರಿ ಮತ್ತು ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ  ಸಾವನ್ನಪ್ಪಿದ ದಾರುಣ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಬಳಿ ಶನಿವಾರ ಮುಂಜಾನೆ ನಡೆದಿದೆ. 


COMMERCIAL BREAK
SCROLL TO CONTINUE READING

ಸಾಗರದ ಕಡೆ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ, ಶಿವಮೊಗ್ಗ ಕಡೆ ತೆರಳುತ್ತಿದ್ದ ಡಾಂಬರ್ ತುಂಬಿದ ಲಾರಿ ಸಾಗರ ತಾಲೂಕಿನ ಐಗಿನಬೈಲು ಕ್ರಾಸ್ ಬಳಿ ಮುಖಾ ಮುಖಿ ಡಿಕ್ಕಿಯಾಗಿದ್ದು, ಲಾರಿಗಳು ಸಂಪೂರ್ಣ ನಜ್ಜುಗುಜ್ಜಾಗಿವೆ. ಚಾಲಕರ ಅತಿಯಾದ ವೇಗ ಹಾಗೂ ನಿದ್ದೆ ಮಪರಿನಿಂದಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. 


ಅಪಘಾತದಲ್ಲಿ ಲಾರಿ ಚಾಲಕ ಸಚಿನ್, ಕ್ಲಿನರ್ ಮಲಕಪ್ಪ ಹಾಗೂ ಟ್ಯಾಂಕರ್ ಚಾಲಕ ಲೋಕೇಶ್ ಎಂದು ಗುರುತಿಸಲಾಗಿದ್ದು, ಗಂಭಿರವಾಗಿ ಗಾಯಗೊಂಡ ಉಮೇಶ್ ಎಂಬಾತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.