ಬೆಂಗಳೂರು : ರಾಜ್ಯದ ಹಲವಡೆ ನಿನ್ನೆ ಉತ್ತಮ ಮಳೆಯಾಗಿದೆ. ಅಲ್ಲದೆ, ಈ ಮಳೆ ಅಬ್ಬರ ಇಂದು ಕೂಡ ಮುಂದುವರೆಯಲಿದ್ದು, ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 


COMMERCIAL BREAK
SCROLL TO CONTINUE READING

ಅಲ್ಲದೆ, ಉತ್ತರ ಒಳನಾಡಿನಲ್ಲೂ ಕಡಿಮೆ ಮಳೆಯಾಗುತ್ತದೆ . ಇನ್ನೂ ಬೆಂಗಳೂರಿನಲ್ಲಿ ಸಂಜೆಯ ವೇಳೆಗೆ ಮಳೆಯಾಗಲಿದ್ದು, ರಾತ್ರಿ ಇಡೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ(Indian meteorological Department) ಮಾಹಿತಿ ನೀಡಿದೆ.


ಇದನ್ನೂ ಓದಿ : CP Yogeshwar : 'ಕರ್ನಾಟಕದಲ್ಲಿ ಬಿಜೆಪಿ ಉಳಿಯಬೇಕಾದರೆ ಸಿಎಂ ಬದಲಾವಣೆಯಾಗಲೇಬೇಕು'


ರಾಜ್ಯದ ಮಲೆನಾಡಿನ ಭಾಗದಲ್ಲಿ ಇಂದು ಮಳೆ(Rainfall)ಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ರಾಜ್ಯದಲ್ಲೂ ಮಳೆ ಹೆಚ್ಚಾಗುತ್ತಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲೂ ಇಂದಿನಿಂದ ಸೋಮವಾರದವರೆಗೆ ಮಳೆಯಾಗಲಿದೆ.


ಇದನ್ನೂ ಓದಿ : BIG News: ಕರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕ


ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇನ್ನೂ ಮಳೆ ಮುಂದುವರೆದಿದ್ದು, ನಾಳೆಯೋ ಮಳೆ(Rain) ಮುಂದುವರೆಯುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ನಾಲ್ಕೈದು ದಿನಗಳಿಂದ ಮಳೆಯಿಂದ ಯಲ್ಲೋ ಅಲರ್ಟ್ ಘೋಷಿಸಲಾಗಿತ್ತು. ಇನ್ನೆರಡು ದಿನ ಕರಾವಳಿಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಇನ್ನೂ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.