ಬೆಂಗಳೂರು : ರಾಜ್ಯದಲ್ಲಿ 10 ದಿನಗಳಿಂದ ಅಬ್ಬರಿಸಿದ್ದ ಮಳೆ ಇದೀಗ ಕೊಂಚ ಕಡಿಮೆಯಾಗುತ್ತಿದೆ. ಮೂರು ದಿನಗಳಿಂದ ವರುಣನ ಆರ್ಭಟ ಕಡಿಮೆಯಾಗಿದ್ದು, ಜಲಾಶಯಗಳಿಗೆ ಹರಿದುಬರುತ್ತಿದ್ದ ನೀರಿನ ಪ್ರಮಾಣವೂ ಕಡಿಮೆಯಾಗಿದೆ. 


COMMERCIAL BREAK
SCROLL TO CONTINUE READING

ಆದರೆ, ಮಲೆನಾಡು, ಕರಾವಳಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ. ನೆರೆಯ ರಾಜ್ಯವಾದ ಮಹಾರಾಷ್ಟ್ರದಲ್ಲಿ ಇನ್ನೂ ಮಳೆ(Rainfall)ಯ ಆರ್ಭಟ ಕಡಿಮೆಯಾಗದ ಕಾರಣ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಉಂಟಾಗಿದೆ.


ಇದನ್ನೂ ಓದಿ : 'ಕಾಂಗ್ರೆಸ್ ಪಕ್ಷದ ನಾಯಕರ ನಡುವೆ ಬಿರುಕು ಮೂಡಿಸಲು ಬಿಜೆಪಿ ಪ್ರಯತ್ನಿಸುತ್ತಿದೆ'


ಇಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮೂರು ದಿನಗಳಿಂದ ಕಡಿಮೆಯಾಗಿದೆ.


ಇದನ್ನೂ ಓದಿ : Unlock 2.O : ರಾಜ್ಯ ಸರ್ಕಾರದಿಂದ ಮತ್ತೆ ಈ 4 ಜಿಲ್ಲೆಗಳಿಗೆ ಅನ್ ಲಾಕ್ 2.0 ಘೋಷಣೆ!


ಇಂದು ಕರ್ನಾಟಕ(Karnataka) ಮಾತ್ರವಲ್ಲದೆ ಛತ್ತೀಸ್​ಘಡ, ಸಿಕ್ಕಿಂ, ಒರಿಸ್ಸಾ, ಅರುಣಾಚಲಪ್ರದೇಶ, ಅಸ್ಸಾಂ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್, ತ್ರಿಪುರ, ಆಂಧ್ರಪ್ರದೇಶ, ತಮಿಳು ನಾಡಿನಲ್ಲೂ ಮಳೆಯ ಆರ್ಭಟ ಹೆಚ್ಚಾಗಿರಲಿದೆ. ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ, ಕರ್ನಾಟಕದ ಕರಾವಳಿ ಜಿಲ್ಲೆ, ಕೇರಳದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ರಾಜಸ್ಥಾನ, ಉತ್ತರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ತೆಲಂಗಾಣದಲ್ಲೂ ಮಳೆ ಹೆಚ್ಚಾಗಲಿದೆ.


ಇದನ್ನೂ ಓದಿ : BS Yediyurappa : ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಸಿಹಿ ಸುದ್ದಿ..!


ಮುಂಬೈನಲ್ಲಿ ಜೂನ್ 25ರವರೆಗೂ ಭಾರೀ ಮಳೆ(Heavy Rainfall)ಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿ ಮಳೆಯಾದರೆ ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಲಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.