Today Weather Update 23-05-2023: ಭಾನುವಾರ ಸುರಿದ ಭಾರೀ ಮಳೆಯ ಬಳಿಕ ಬೆಂಗಳೂರು ನಗರ ಜಿಲ್ಲೆಯ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಗಾಳಿ ಮತ್ತು ಆಲಿಕಲ್ಲು ಮಳೆ ಬೀಳುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮುಂದಿನ ಐದು ದಿನಗಳಲ್ಲಿ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.


COMMERCIAL BREAK
SCROLL TO CONTINUE READING

ಬೆಂಗಳೂರು ನಗರ ಸುತ್ತಮುತ್ತಲಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರದಲ್ಲೂ ಗುರುವಾರದವರೆಗೆ ಇದೇ ರೀತಿಯ ಹವಾಮಾನ ಕಂಡುಬರುವ ಸಾಧ್ಯತೆಯಿದೆ.


ಇದನ್ನೂ ಓದಿ: ಇಂದಿನ ಅಡಿಕೆ ಧಾರಣೆ: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಹೀಗಿದೆ ನೋಡಿ


ಭಾನುವಾರ ಮಧ್ಯಾಹ್ನ 3ರಿಂದ ಸಂಜೆ 6ರವರೆಗೆ ನಗರದಲ್ಲಿ ಸರಾಸರಿ 35 ಮಿ.ಮೀ ಮಳೆ ದಾಖಲಾಗಿದ್ದು, ಗುಟ್ಟಹಳ್ಳಿಯಲ್ಲಿ ಈ ಅವಧಿಯಲ್ಲಿ 66 ಮಿ.ಮೀ.ನಷ್ಟು ಭಾರಿ ಮಳೆಯಾಗಿತ್ತು. ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ವ್ಯಾಪಕ ಮಳೆ ದಾಖಲಾಗಿದ್ದು, ಕೊಟ್ಟಿಗೆಪಾಳ್ಯ (54 ಮಿಮೀ), ನಂದಿನಿ ಲೇಔಟ್ (48 ಮಿಮೀ), ಕೆಆರ್ ಪುರಂ (36.5 ಮಿಮೀ) ಮತ್ತು ವಿದ್ಯಾರಣ್ಯಪುರ (32.5 ಮಿಮೀ) ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ.


IMDಯ ವರದಿಯ ಪ್ರಕಾರ, ಮೇ 21 (ಭಾನುವಾರ) ಬೆಳಿಗ್ಗೆ 8.30 ರಿಂದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 34.4 ಮಿಮೀ, ಬೆಂಗಳೂರು ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ 32.2 ಮಿಮೀ ಮತ್ತು ಬೆಂಗಳೂರು ನಗರದಲ್ಲಿ 33.4 ಮಿಮೀ ಮಳೆ ದಾಖಲಾಗಿದೆ.


ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರದಿಯ ಪ್ರಕಾರ, ಈ ವರ್ಷ ಮಾರ್ಚ್ 1 ರಿಂದ ಬೆಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗಿದೆ. ಮಾರ್ಚ್ 1 ರಿಂದ ಮೇ 30ರ ಅವಧಿಯಲ್ಲಿ ಸರಾಸರಿ 111 ಮಿಮೀಗೆ ಹೋಲಿಸಿದರೆ, ಬೆಂಗಳೂರಿನಲ್ಲಿ ಈಗಾಗಲೇ 142 ಮಿಮೀ ಮಳೆಯಾಗಿದೆ. ಇದು ವಾಡಿಕೆಗಿಂತ ಶೇಕಡಾ 28 ರಷ್ಟು ಹೆಚ್ಚಾಗಿದೆ. ದಕ್ಷಿಣ ಒಳನಾಡು ಕರ್ನಾಟಕ ಪ್ರದೇಶಕ್ಕೆ, ಈ ವರ್ಷ ಸರಾಸರಿ 107 ಮಿಮೀ ಮಳೆಯಾಗಬೇಕಿತ್ತು. ಆದರೆ 129 ಮಿಮೀ ದಾಖಲಾಗಿದೆ. ಇದು ಶೇಕಡಾ 20 ರಷ್ಟು ಅಧಿಕವಾಗಿದೆ ಎಂದು ತಿಳಿದುಬಂದಿದೆ.


ಇನ್ನು ಉತ್ತರ ಒಳನಾಡಿನ ಜಿಲ್ಲೆಗಳು ವಾಡಿಕೆಗಿಂತ ಹೆಚ್ಚಿನ ಮಳೆಯನ್ನು ಪಡೆದಿದ್ದರೆ, ಮಲೆನಾಡು ಪ್ರದೇಶ ಮತ್ತು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದೆ.


ಇನ್ನೊಂದೆಡೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದೂ ಸಹ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಮೇ 26ರವರೆಗೆ ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಇದನ್ನೂ ಓದಿ: ಇಂದು ಈ ರಾಶಿಯವರು ಮುಟ್ಟಿದ್ದೆಲ್ಲಾ ಮಂಗಳ: ಧನಿಕರಾಗುವ ಭಾಗ್ಯ; ವೃತ್ತಿಯಲ್ಲಿ ಊಹೆಗೂ ಮೀರಿದ ಲಾಭ!


ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಇಂದು ಗುಡುಗು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ