ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದು ತಲುಪಿದೆ. ಹೋರಾಟಗಾರರ ಬೇಡಿಕೆಯನ್ನು ರಾಜ್ಯ ಸರ್ಕಾರದ ಪ್ರತಿನಿಧಿಯಾಗಿ ಫ್ರೀಡಂ ಪಾರ್ಕ್‌ಗೆ ಆಗಮಿಸಿದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ ಸರ್ಕಾರದ ಪರವಾಗಿ ಲಿಖಿತ ಭರವಸೆಯ ಪತ್ರವನ್ನು ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಮುಷ್ಕರ ವಾಪಸ್‌ ಪಡೆಯಬೆಕಾದರೆ ಲಿಖಿತವಾಗಿ ಬೇಡಿಕೆಗಳನ್ನು ಈಡೇರಿಸಿರುವ ಕುರಿತಾದ ಪತ್ರ(Letter)ವನ್ನು ನೀಡಬೇಕು ಎಂಬ ಆಗ್ರಹವನ್ನು ಹೋರಾಟದ ನೇತೃತ್ವ ವಹಿಸಿಕೊಂಡಿರುವ ಕೋಡಿಹಳ್ಳಿ ಚಂದ್ರಶೇಖರ್ ಮಾಡಿದ್ದಾರೆ. ಅದರಂತೆ ಲಿಖಿತ ಪತ್ರದೊಂದಿಗೆ ಆಗಮಿಸಿದ ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ,ಶಾಸಕ ರಾಜೂ ಗೌಡ , ಬಿಡಿಎ ಅಧ್ಯಕ್ಷ ಎಸ್‌ಆರ್‌ ವಿಶ್ವನಾಥ್ ಈ ಪತ್ರವನ್ನು ಕೋಡಿಹಳ್ಳಿ ಚಂದ್ರಶೇಖರ್‌ಗೆ ನೀಡಿದರು.


'ರೆವಿನ್ಯೂ ಸೈಟ್‌' ನೋಂದಣಿಗೆ ಬ್ರೇಕ್ ಹಾಕಿದ ರಾಜ್ಯ ಸರ್ಕಾರ‌..!


ಲಿಖಿತ ಭರವಸೆ ಪತ್ರದಲ್ಲಿ ಏನಿದೆ?


-ನಿಗಮದ ನೌಕರರಿಗೆ ಆರೋಗ್ಯ ಭಾಗ್ಯ ವಿಮಾ ಯೋಜನೆಯನ್ನು ಅಳವಡಿಸಲು ತೀರ್ಮಾನಿಸಲಾಗಿದೆ


-ಕೋವಿಡ್‌ 19 ಸೋಂಕು ತಗುಲಿದ ನಿಗಮದ ನೌಕಕರು ಮರಣ ಹೊಂದಿದ ಸಂದರ್ಭದಲ್ಲಿ ಅವರ ಕುಟುಂಬಗಳಿಗೆ ಸರ್ಕಾರಿ ನೌಕರರಿಗೆ ನೀಡಿದಂತೆ 30 ಲಕ್ಷ ಪರಿಹಾರ.


-ಅಂತರ್‌ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ರಚಿಸಲು ತೀರ್ಮಾನ.


-ತರಬೇತಿಯಲ್ಲಿರುವ ನೌಕರರನ್ನು ತರಬೇತಿ ಅವಧಿಯನ್ನು 2 ವರ್ಷದಿಂದ 1 ವರ್ಷಕ್ಕೆ ಇಳಿಸಲು ತೀರ್ಮಾನ.


ನಾಲ್ಕನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ, ಎಸ್ಮಾ‌ ಜಾರಿ ಬಗ್ಗೆ ಇಂದು ನಿರ್ಧಾರ


-ನಿಗಮದಲ್ಲಿ ಮಾನವ ಸಂಪನ್ಮೂಲ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.


-ಸಿಬ್ಬಂದಿಯ ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಭತ್ಯೆಯನ್ನು ಕೊಡಲು ನಿರ್ಧಾರ


-ಘಟಕದ ವ್ಯಾಪ್ತಿಯಲ್ಲಿ ನೌಕರರಿಗೆ ಕಿರುಕುಳ ತಪ್ಪಿಸಲು ಸೂಕ್ತ ಕ್ರಮ


-ಎನ್‌ಐಎನ್‌ಸಿ ಪದ್ದತಿ ಬದಲಾಗಿ ಪರ್ಯಾಯ ವ್ಯವಸ್ಥೆ


ರಾಜ್ಯದ ಜನರೇ ಎಚ್ಚರ! ಇನ್ನೂ ಒಂದು ತಿಂಗಳು ರಾಜ್ಯದಲ್ಲಿ ಮೈ ಕೊರೆಯುವ ಚಳಿ!


-ವೇತನ ವಿಷಯಕ್ಕೆ ಸಂಬಂಧಿಸಿದಂತೆ ತೀರ್ಮಾನಿಸುವ ಸಂದರ್ಭದಲ್ಲಿ ಸಾರಿಗೆ


-ನೌಕಕರು ಹಲವಾರು ಬೇಡಿಕೆಗಳನ್ನು ಇಟ್ಟಿದ್ದು ಅದರಲ್ಲಿ 6 ನೇ ವೇತನ ಆಯೋಗದ ಶಿಫಾರಸುಗಳನ್ನು ಪರಿಗಣಿಸುವಂತೆ ಕೋರಿದ್ದಾರೆ. ಈ ಬಗ್ಗೆ ಸರ್ಕಾರ ಆರ್ಥಿಕ ಅಂಶಗಳನ್ನು ಪರಿಗಣಿಸಿ ನಿರ್ಧಾರ.


ಸಾರಿಗೆ ನೌಕರ ಸಂಧಾನ ಸಭೆ ಸಕ್ಸಸ್: ನಾಳೆ ರಸ್ತೆಗೆ ಇಳಿಯುತ್ತೆ ಬಸ್!