ತುಮಕೂರು: ಗಿಣಿ ಕಳೆದುಕೊಂಡ ಕುಟುಂಬವೊಂದು ತಮ್ಮ ಹುಡುಕಿಕೊಟ್ಟವರಿಗೆ 50 ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದೆ. ತುಮಕೂರು ಜಯನಗರ ನಿವಾಸಿ ರವಿ ಎಂಬುವವರ ಕುಟುಂಬ ಈ ಪ್ರಕಟಣೆ ನೀಡಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Bomb threat: ಡಿಕೆ ಶಿವಕುಮಾರ್‌ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ.!


ಆಫ್ರಿಕನ್ ಗ್ರೇ ಜಾತಿಯ ಗಿಣಿ ಸಾಕಿದ್ದ ರವಿ ಎಂಬುವವರ ಕುಟುಂಬ, ಕಳೆದ 16/07/2022 ರಂದು ಮನೆಯಿಂದ ನಾಪತ್ತೆಯಾಗಿರುವ ಗಿಣಿಯನ್ನು ಹುಡುಕಿಕೊಡಲು ಪ್ರಕಟಣೆ ನೀಡಿದೆ. ಪ್ರೀತಿಯ ಗಿಣಿ ನಾಪತ್ತೆಯಾಗಿರುವುದಕ್ಕೆ ರವಿ ಕುಟುಂಬಸ್ಥರೆಲ್ಲರೂ ತುಂಬಾ ದುಃಖಿತರಾಗಿದ್ದಾರೆ.


ಗಿಣಿಗೆ ರುಸ್ತುಮಾ ಎಂಬ ಹೆಸರಿಟ್ಟಿದ್ದು, ಮನೆಯಲ್ಲಿ ಸಾಕಿಕೊಂಡಿದ್ದರು. ಆಫ್ರಿಕನ್‌ ಗ್ರೇ ತಳಿಯ ಎರಡು ಗಿಣಿಗಳನ್ನು ಮನೆಯಲ್ಲಿ ಸಾಕಲಾಗಿತ್ತು. ಎರಡೂವರೆ ವರ್ಷದಿಂದ ಗಿಣಿಗಳನ್ನು ಪ್ರೀತಿಯಿಂದ ಸಾಕಿದ್ದರು. ಇದೀಗ ಗಿಣಿ ನಾಪತ್ತೆಯಾಗಿದ್ದು, ಹುಡುಕಿಕೊಟ್ಟವರಿಗೆ ಬಹುಮಾನ ಘೋಷಿಸಿದ್ದಾರೆ. 


ಇದನ್ನೂ ಓದಿ: ಗಂಡ ಹೆಂಡತಿ ಜಗಳ:‌ ಎಣ್ಣೆ ಏಟಲ್ಲಿ ಅತ್ತೆಯನ್ನು ಕೊಂದ ಪಾಪಿ ಅಳಿಯ


ಗಿಣಿ ಕಾಣಿಸಿದರೆ ಮಾಹಿತಿ ನೀಡುವಂತೆ ತುಮಕೂರು‌ ನಗರದಲ್ಲಿ ಬ್ಯಾನರ್ ಹಾಕಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಗಿಣಿ ಕಾಣೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಗಿಣಿ ಹುಡುಕಿ ಕೊಟ್ಟರೆ 50 ಸಾವಿರ ರೂ. ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.