ಬೆಂಗಳೂರು: RSS ಬಗ್ಗೆ ಮಾತನಾಡುವ ಮೊದಲು ಆರ್ಎಸ್ಎಸ್ (RSS) ಎಂದರೇನು, ಅದರ ಮಹತ್ವವೇನು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ರಾಜಕೀಯ ಕಾರಣಗಳಿಗೆ ಆರ್ಎಸ್ಎಸ್ ಅನ್ನು ದೂಷಿಸುವುದನ್ನು ಬಿಟ್ಟು ಸಂಘದ ಶಾಖೆಗೆ ಭೇಟಿ ನೀಡಿ ಅಲ್ಲಿನ ಸಿದ್ಧಾಂತಗಳನ್ನು ಅಧ್ಯಯನ ಮಾಡಿ ಎಂದಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ (CT Ravi) ಅವರಿಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸರಣಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.


COMMERCIAL BREAK
SCROLL TO CONTINUE READING

@CTRavi_BJP ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. RSS ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ ಎಂದಿದ್ದಾರೆ.


ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ? ಎಂದು ಎಚ್.ಡಿ. ಕುಮಾರಸ್ವಾಮಿ (HD Kumaraswamy) ಸಿ.ಟಿ. ರವಿ (CT Ravi) ಅವರನ್ನು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ- ಬಿಜೆಪಿ ಬೆವರು ಹರಿಸುವ ರೈತರ ರಕ್ತ ಹರಿಸುತ್ತಿದೆ: ಕಾಂಗ್ರೆಸ್ ಆಕ್ರೋಶ


ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ "ಆಪರೇಷನ್ ಕಮಲ"ದಂಥ ಅನೈತಿಕ, ನಿರ್ಲಜ್ಜ, ನೀಚ ರಾಜಕಾರಣವನ್ನು RSS ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು ಸಿ.ಟಿ.ರವಿಯವರೇ? ಎಂದು ಸರಣಿ ಟ್ವೀಟ್ ಮೂಲಕ ಎಚ್.ಡಿ. ಕುಮಾರಸ್ವಾಮಿ (HD Kumaraswamy) ವಾಗ್ಧಾಳಿ ನಡೆಸಿದ್ದಾರೆ.


ಜನರು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಇವತ್ತಿನ ಪತ್ರಿಕೆ ಓದಿ. ಅದರಲ್ಲಿ “ಬದುಕು ಸಾಕೆನಿದೆ-ಭಗವಂತನಿಗೂ ಕರುಣೆ ಇಲ್ಲ” ಎನ್ನುವ ವರದಿ ಇದೆ. ಬೆಂಗಳೂರಿನ ಶ್ರೀನಿವಾಸನಗರದ ಬಿ.ಆರ್.ವಾಸುದೇವ ಎಂಬ ಬೀದಿಬದಿ ವ್ಯಾಪಾರಿ ಹೇಳಿರುವ ಮಾತುಗಳನ್ನು ಒಮ್ಮೆ ಓದಿ. ಆಗಲಾದರೂ ನಿಮ್ಮ ಕಲ್ಲು ಹೃದಯ ಕರಗಬಹುದು.


[[{"fid":"219024","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]


ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ?  ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ RSS ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ? ಎಂದು ಎಚ್.ಡಿ. ಕುಮಾರಸ್ವಾಮಿ ಅವರು ಸಿ.ಟಿ. ರವಿ ಅವರನ್ನು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ- ಸೋನಿಯಾ ಗಾಂಧಿ ಭೇಟಿ ಅಂತ್ಯ: ರಾಷ್ಟ್ರ ರಾಜಕೀಯಕ್ಕೆ ಹೋಗಲ್ಲವೆಂದ ಸಿದ್ದರಾಮಯ್ಯ


ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. RSS ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ ಎಂದವರು ತಿಳಿಸಿದ್ದಾರೆ.


ಜನ ಪ್ರತಿನಿಧಿಗಳನ್ನು, ಸರಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿರವಿಯರೇ. ನಾನು ಸತ್ಯದ ಪರ ಎಂದು ಎಚ್ಡಿಕೆ ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.