ಆಗ 10 ವರ್ಷ ಕೇಂದ್ರದಲ್ಲೊಂದು ಕೈಗೊಂಬೆ, ಈಗ ಕರ್ನಾಟಕದಲ್ಲಿ ಹೊಸ ಕೈಗೊಂಬೆ; ಡಿವಿಎಸ್

ಮೈತ್ರಿ ಸರ್ಕಾರದ ಬುಡಕ್ಕೆ ಬೆಂಕಿ ಇಟ್ಟವರು ಯಾರು? ನಮ್ಮ ಮೇಲ್ಯಾಕೆ ಆರೋಪ? ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದ್ದೇಕೆ?

Last Updated : Jan 16, 2019, 07:37 AM IST
ಆಗ 10 ವರ್ಷ ಕೇಂದ್ರದಲ್ಲೊಂದು ಕೈಗೊಂಬೆ, ಈಗ ಕರ್ನಾಟಕದಲ್ಲಿ ಹೊಸ ಕೈಗೊಂಬೆ; ಡಿವಿಎಸ್ title=
File Image

ನವದೆಹಲಿ: ಕಾಂಗ್ರೆಸ್ ನಾಯಕರ ಹತಾಶೆಯ ಹೇಳಿಕೆಗಳು ಅವರ ಮೈ ಪರಚಿಕ್ಕೊಳ್ಳುವ ಪರಿಸ್ಥಿತಿಯನ್ನು ತೋರಿಸುತ್ತಿದೆ. ನಿಮ್ಮ ಮನೆಯ ಜವಾಬ್ಧಾರಿ ನಿಮ್ಮದು. ಅದು ಬಿಟ್ಯಾಕೆ ಈ ಅಸಂಭದ್ದ ಮಾತು? ನಮ್ಮ ಪ್ರಧಾನಿ ನಮ್ಮ ಹೆಮ್ಮೆ . ಹೌದು ಅವರೇ ನಮ್ಮ ಚೌಕಿದಾರ. ಅವರು ಕೈಗೊಂಬೆಯಲ್ಲ . ಆಗ 10 ವರ್ಷ ಕೇಂದ್ರದಲ್ಲೊಂದು ಕೈಗೊಂಬೆ, ಈಗ ಕರ್ನಾಟಕದಲ್ಲಿ ಹೊಸ ಕೈಗೊಂಬೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿರುಗೇಟು ನೀಡಿದ್ದಾರೆ.

ಇದರ ಬೆನ್ನಲ್ಲೇ ಇನ್ನೊಂದು ಟ್ವೀಟ್ ಮಾಡಿರುವ ಅವರು, 
1) ನಾನು ಕಾಂಗ್ರೆಸ್ ನ ಮುಲಾಜಿನಲ್ಲಿದೇನೆ 
2) ನಾನು ವಿಷ  ಕಂಠನಾಗಿದ್ದೇನೆ  
3) ನನ್ನದು  ಹಗ್ಗದ  ಮೇಲಿನ  ನಡಿಗೆ 
4) ನಾನು ಮುಖ್ಯಮಂತ್ರಿಯಲ್ಲ  ಕ್ಲರ್ಕ್ 
5) ನಮ್ಮನ್ನು  3 ನೇ ದರ್ಜೆಯವರಂತೆ ನೋಡಬೇಡಿ 
ಇದನ್ನು ಯಾರಿಗೆ ಯಾರು ಹೇಳಿದ್ದು ? 
ಈಗ ಹೇಳಿ ಮೈತ್ರಿ ಸರಕಾರದ ಬುಡಕ್ಕೆ ಬೆಂಕಿ ಇಟ್ಟವರು ಯಾರು ? ನಮ್ಮ ಮೇಲ್ಯಾಕೆ ಆರೋಪ ? ಎಂದು ಮೈತ್ರಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
 

Trending News