ನವದೆಹಲಿ: ಕಾಂಗ್ರೆಸ್ ನಾಯಕರ ಹತಾಶೆಯ ಹೇಳಿಕೆಗಳು ಅವರ ಮೈ ಪರಚಿಕ್ಕೊಳ್ಳುವ ಪರಿಸ್ಥಿತಿಯನ್ನು ತೋರಿಸುತ್ತಿದೆ. ನಿಮ್ಮ ಮನೆಯ ಜವಾಬ್ಧಾರಿ ನಿಮ್ಮದು. ಅದು ಬಿಟ್ಯಾಕೆ ಈ ಅಸಂಭದ್ದ ಮಾತು? ನಮ್ಮ ಪ್ರಧಾನಿ ನಮ್ಮ ಹೆಮ್ಮೆ . ಹೌದು ಅವರೇ ನಮ್ಮ ಚೌಕಿದಾರ. ಅವರು ಕೈಗೊಂಬೆಯಲ್ಲ . ಆಗ 10 ವರ್ಷ ಕೇಂದ್ರದಲ್ಲೊಂದು ಕೈಗೊಂಬೆ, ಈಗ ಕರ್ನಾಟಕದಲ್ಲಿ ಹೊಸ ಕೈಗೊಂಬೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿರುಗೇಟು ನೀಡಿದ್ದಾರೆ.



COMMERCIAL BREAK
SCROLL TO CONTINUE READING

ಇದರ ಬೆನ್ನಲ್ಲೇ ಇನ್ನೊಂದು ಟ್ವೀಟ್ ಮಾಡಿರುವ ಅವರು, 
1) ನಾನು ಕಾಂಗ್ರೆಸ್ ನ ಮುಲಾಜಿನಲ್ಲಿದೇನೆ [[{"fid":"174018","view_mode":"default","fields":{"format":"default","field_file_image_alt_text[und][0][value]":false,"field_file_image_title_text[und][0][value]":false},"type":"media","field_deltas":{"1":{"format":"default","field_file_image_alt_text[und][0][value]":false,"field_file_image_title_text[und][0][value]":false}},"link_text":false,"attributes":{"class":"media-element file-default","data-delta":"1"}}]]
2) ನಾನು ವಿಷ  ಕಂಠನಾಗಿದ್ದೇನೆ  
3) ನನ್ನದು  ಹಗ್ಗದ  ಮೇಲಿನ  ನಡಿಗೆ 
4) ನಾನು ಮುಖ್ಯಮಂತ್ರಿಯಲ್ಲ  ಕ್ಲರ್ಕ್ 
5) ನಮ್ಮನ್ನು  3 ನೇ ದರ್ಜೆಯವರಂತೆ ನೋಡಬೇಡಿ 
ಇದನ್ನು ಯಾರಿಗೆ ಯಾರು ಹೇಳಿದ್ದು ? 
ಈಗ ಹೇಳಿ ಮೈತ್ರಿ ಸರಕಾರದ ಬುಡಕ್ಕೆ ಬೆಂಕಿ ಇಟ್ಟವರು ಯಾರು ? ನಮ್ಮ ಮೇಲ್ಯಾಕೆ ಆರೋಪ ? ಎಂದು ಮೈತ್ರಿ ಸರ್ಕಾರವನ್ನು ಪ್ರಶ್ನಿಸಿದ್ದಾರೆ.